Darshan: ಜಾಮೀನು ನಿರೀಕ್ಷೆಯಲ್ಲಿರುವ ನಟ ದರ್ಶನ್ಗೆ ಐಟಿ ಶಾಕ್, ವಿಚಾರಣೆಗೆ ಕೋರ್ಟ್ ಅನುಮತಿ
ಬೆಂಗಳೂರು, ಸೆಪ್ಟಂಬರ್ 23: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ಗೆ ಸಾಲು ಸಾಲು ಸಂಕಷ್ಟ ಎದುರಾಗುತ್ತಿದೆ. ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ ಆದ ಬೆನ್ನಲ್ಲೆ, ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಕೋರ್ಟ್ನಿಂದ ಅನುಮತಿ ಪಡೆದಿದ್ದಾರೆ. ಈ ಮೂಲಕ ನಟ ದರ್ಶನ್ ಬೆನ್ನು ಬಿದ್ದಿರುವ ಅಧಿಕಾರಿಗಳು ಜಾಲಾಡಲಿದ್ದಾರೆ.
ಹೌದು, ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್ ಅನ್ನು ಐಟಿ ಅಧಿಕಾರಿಗಳು ಸೋಮವಾರ ಭೇಟಿ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಬಂಧನ ಬಳಿಕ ಅವರ ಮನೆಯಲ್ಲಿ ಮೊದಲು 30 ಲಕ್ಷ ಪತ್ತೆ ಆಗಿತ್ತು. ನಂತರ ಬೇರೆ ಬೇರೆ ಕಡೆಗಳಲ್ಲಿ ಲಕ್ಷ ಲಕ್ಷ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ನಾಳೆ ಜೈಲಿನಲ್ಲಿ ದರ್ಶನ್ ವಿಚಾರಣೆ ಸಾಧ್ಯತೆ
ನಟ ದರ್ಶನ್ ನ್ಯಾಯಾಂಗ ಅವಧಿ ವಿಸ್ತರಣೆ ಆಗಿದೆ. ಜಾಮೀನು ಅರ್ಜಿ ಸಹ ಮುಂದೂಡಿಕೆ ಆಗಿದೆ. ಹಣದ ಮೂಲಕ ಪತ್ತೆಗೆ ಜೈಲಲ್ಲಿರುವ ನಟ ದರ್ಶನ್ ಅವರನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ.
ಅದರಂತೆ ಐಟಿ ಅಧಿಕಾರಿಗಳು 24 ಎಸಿಎಂಎಂ ನ್ಯಾಯಾಲಯದಿಂದ ಮಂಗಳವಾರ ದರ್ಶನ್ ವಿಚಾರಣೆಗೆ ಅನುಮತಿ ಪಡೆದಿದ್ದಾರೆ. ಪ್ರಕರಣದ ಬಳಿಕ ಹಂತ ಹಂತವಾಗಿ ಸಿಕ್ಕ ಒಟ್ಟು 85 ಲಕ್ಷ ರೂ. ವಶಕ್ಕೆ ಪಡೆದಿದ್ದು, ಆ ಹಣ ಮೂಲವನ್ನು ಅಧಿಕಾರಿಗಳು ಪತ್ತೆ ಮಾಡಲಿದ್ದಾರೆ. ನಾಳೆ ಮಂಗಾಳವಾರ ಬಳ್ಳಾರಿ ಜೈಲಿನಲ್ಲಿಯೇ ಅಧಿಕಾರಿಗಳು ದರ್ಶನ್ ವಿಚಾರಣೆ ಮಾಡುವ ಸಾಧ್ಯತೆ ಇದೆ.
ಏನಿದು ದರ್ಶನ್ ಮತ್ತು ಐಟಿ ಪ್ರಕರಣ?
ನಟ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ತಂದು ಹತ್ಯೆಗೈದ ಬಳಿಕ ಅದನ್ನು ಸಾಕ್ಷಿ ನಾಶಕ್ಕೆ ಪ್ಲಾನ್ ಮಾಡಿ ದರ್ಶನ್ ಆಂಡ್ ಗ್ಯಾಂಗ್, ಈ ಪ್ರಕರಣದಲ್ಲಿ ಭಾಗಿಯಾಗಿರದ ಮೂವರನ್ನು ಪೊಲೀಸರ ಮುಂದೆ ತಪ್ಪೊಪ್ಪಿಕೊಳ್ಳಲು ಲಕ್ಷ ಲಕ್ಷ ಹಣ ನೀಡಿದ್ದರು. ಮೂರು ಜನರಿಗೆ ತಲಾ 05 ಲಕ್ಷ ರೂಪಾಯಿ ಹಣ ನೀಡಿದ್ದರು.
ರೇಣುಕಾಸ್ವಾಮಿ ಶವದ ಮುಂದೆ ಡಿಗ್ಯಾಂಗ್ ಪ್ಲಾನ್ ಮಾಡಿಕೊಂಡು ತರಾತುರಿಯಲ್ಲಿಯೇ ಬರೋಬ್ಬರಿ 30ಲಕ್ಷ ರೂಪಾಯಿ ಹಣ ಹೊಂದಿಸಿದ್ದರು. ಅದನ್ನೆ ಸಾಕ್ಷ್ಯ ನಾಶಕ್ಕೆ, ಅಮಾಯಕರನ್ನು ಸರೆಂಡರ್ ಮಾಡಿಸಲು ಬಳಸಲಾಗಿತ್ತು.
ಬಳಿಕ ಈ ಕುರಿತು ತನಿಖೆ ನಡೆಸಿದ ತನಿಖಾಧಿಕಾರಿಗಳು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೊದಲು 30 ಲಕ್ಷ ದರ್ಶನ್ ಮನೆಯಲ್ಲಿ, ನಂತರ 30 ಹೀಗೆ ಒಟ್ಟು 85ಲಕ್ಷ ರೂಪಾಯಿಯನ್ನು ಆರೋಪಿಗಳ ಮನೆಯಿಂದ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಪ್ರಕರಣವನ್ನು ಐಟಿ ಇಲಾಖೆಗೆ ಒಪ್ಪಿಸಿದ್ದರು. ಇದೀಗ ಐಟಿ ಇಲಾಖೆಗೆ ಪ್ರಕರಣ ಮುಂದುವರೆಸಲು ಕೋರ್ಟ್ ಒಪ್ಪಿಗೆ ಪಡೆದುಕೊಂಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications