ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಬೆಂಗಳೂರಿನಲ್ಲಿ 22 ಕಡೆ ಐಟಿ ಅಧಿಕಾರಿಗಳ ದಾಳಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 07: ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 22 ಕಡೆಗಳಲ್ಲಿ ಏಕಕಾಲಕ್ಕೆ ದಾಳಿಯಾಗಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ವಿಸ್ ಬ್ಯಾಂಕ್ ಖಾತೆ, ಅನಿಲ್ ಅಂಬಾನಿಗೆ ಐಟಿ ಇಲಾಖೆ ನೋಟಿಸ್ಸ್ವಿಸ್ ಬ್ಯಾಂಕ್ ಖಾತೆ, ಅನಿಲ್ ಅಂಬಾನಿಗೆ ಐಟಿ ಇಲಾಖೆ ನೋಟಿಸ್

IT Raid In Bengaluru Search In 22 Places Belongs To Manipal Groups

ಬೆಂಗಳೂರು ನಗರದ 22 ಪ್ರದೇಶಗಳಲ್ಲಿ ಬುಧವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 45ಕ್ಕೂ ಅಧಿಕ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ.

ಆದಾಯ ತೆರಿಗೆ ರಿಟರ್ನ್ ಇ-ಪರಿಶೀಲನೆ ಕಡ್ಡಾಯ: ಇ-ಪರಿಶೀಲನೆಗೆ ಮಾಡುವುದು ಹೀಗೆಆದಾಯ ತೆರಿಗೆ ರಿಟರ್ನ್ ಇ-ಪರಿಶೀಲನೆ ಕಡ್ಡಾಯ: ಇ-ಪರಿಶೀಲನೆಗೆ ಮಾಡುವುದು ಹೀಗೆ

ಬುಧವಾರ ಬೆಳಗ್ಗೆ 6.30ಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಆರಂಭಿಸಿದ್ದಾರೆ. ಬೆಂಗಳೂರು ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಆಸ್ಪತ್ರೆ ಸೇರಿದಂತೆ ವಿವಿಧ ಕಡೆ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.

ಮಣಿಪಾಲ್ ಆರೋಗ್ಯ ಕಾರ್ಡ್‌ ನೋಂದಣಿ ಆರಂಭ; ದರಪಟ್ಟಿ ಮಣಿಪಾಲ್ ಆರೋಗ್ಯ ಕಾರ್ಡ್‌ ನೋಂದಣಿ ಆರಂಭ; ದರಪಟ್ಟಿ

ಮಣಿಪಾಲ್ ಸಮೂಹ ಸಂಸ್ಥೆಗಳ ಪ್ರಮುಖ ಕಚೇರಿ ಇರುವ ಉಡುಪಿಯ ಮಣಿಪಾಲ್‌ನಲ್ಲಿಯೂ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಮಂಗಳೂರು, ಬೆಂಗಳೂರಿನಿಂದ ಬಾಡಿಗೆ ಕಾರು ಪಡೆದು ಆಗಮಿಸಿರುವ ಅಧಿಕಾರಿಗಳು ಉಡುಪಿಯ ಮಣಿಪಾಲ್‌ನಲ್ಲಿರುವ ಮಣಿಪಾಲ್ ಗ್ರೂಪ್ಸ್‌ನ ಫೈನಾನ್ಸ್ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಂಗಳೂರು ನಗರದಲ್ಲಿ ಹಳೇ ವಿಮಾನ ನಿಲ್ದಾಣ ರಸ್ತೆ, ಕನ್ನಿಂಗ್ ಹ್ಯಾಮ್ ರೋಡ್, ಯಶವಂತಪುರ, ಕೆಐಎ ವಿಮಾನ ನಿಲ್ದಾಣ ರಸ್ತೆ ಸೇರಿದಂತೆ ಮಣಿಪಾಲ್‌ ಗ್ರೂಪ್‌ನ ವಿವಿಧ ಕಟ್ಟಡಗಳಲ್ಲಿ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.

English summary
Income tax department conducted a raid at the premises belongs to Manipal groups. Officials inspecting the documents.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X