ಐಟಿ ದಾಳಿ: ರಮೇಶ್ ಜಾರಕಿಹೊಳಿ ರಾಜೀನಾಮೆ ಸಾಧ್ಯತೆ
ಬೆಂಗಳೂರು, ಜನವರಿ 24: ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ ಮಹಿಳಾ ಘಟದಕ ರಾಜ್ಯಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಐಟಿ ದಾಳಿಯಾಗಿ 162 ಕೋಟಿಗೂ ಅಧಿಕ ಘೋಷಣೆಯಾಗದ ಅಕ್ರಮ ಹಣ ದೊರೆತಿರುವುದು ಕಾಂಗ್ರೆಸ್ಸಿಗೆ ತೀವ್ರ ತಲೆನೊವಾಗಿ ಪರಿಣಮಿಸಿದೆ. ಈ ಹಿನ್ನೆಲೆ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಸಾಧ್ಯತೆಯಿದೆ ಎನ್ನಲಾಗಿದೆ.
ಜನವರಿ 19 ರಂದು ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ರವರ ಮನೆ ಮತ್ತು ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು, ಈ ವೇಳೆ ಅವರ ಮನೆಯಲ್ಲಿ ಘೋಷಣೆಯಾಗದ 162 ಕೋಟಿಗೂ ಅಧಿಕ ಹಣ ಮತ್ತು 12.8 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷಕ್ಕೆ ಬಾರಿ ಮುಖಭಂಗವಾಗಿದ್ದು, ಜೊತೆಗೆ ವಿರೋಧ ಪಕ್ಷದಿಂದ ಒತ್ತಡ ಹೆಚ್ಚುತ್ತಿರುವ ಕಾರಣ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ಅವರ ಮೇಲೆ ಪ್ರಕರಣ ದಾಖಲಾಗಲಿದ್ದು, ನಂತರ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.[ಅಕ್ರಮ ಸಂಪತ್ತು ಮುಲಾಜಿಲ್ಲದೆ ವಶಪಡಿಸಿಕೊಳ್ಳಿ : ರಮೇಶ್ ಕುಮಾರ್]

ಅಲ್ಲದೆ ಪಕ್ಷದಲ್ಲಿ ರಮೇಶ್ ಜಾರಕಿಹೊಳಿ ಅಕ್ರಮ ಆಸ್ತಿ ಸಂಬಂಧ ಆರೋಗ್ಯ ಸಚಿವ ರಮೇಶ್ ಕುಮಾರ್ ಉಪ್ಪುತಿಂದವರು ನೀರು ಕುಡಿಯಲೇ ಬೇಕು. ಆಕ್ರಮವನ್ನು ಎಸಗಿದವರು ಯಾರೇ ಆಗಿದ್ದರು ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಇದರಲ್ಲಿ ಪಕ್ಷಭೇದ ಮಾಡಬಾರದು ಎಂದು ಹೇಳಿದ್ದರು.[ಐಟಿ ದಾಳಿ: ಕಾಂಗ್ರೆಸ್ ಮುಖಂಡರ ಮನೆಯಲ್ಲಿ ಸಿಕ್ಕ ಒಟ್ಟು ನಗದೆಷ್ಟು?]

ಇನ್ನು ಈ ಪ್ರಕರಣಕ್ಕೆ ಕುರಿತು ಕಾಂಗ್ರೆಸ್ಸಿನಲ್ಲಿಯೇ ಚರ್ಚೆ ನಡೆಯುತ್ತಿದೆ. ಅಲ್ಲದೆ ಈಗಾಗಲೇ ಶ್ರೀನಿವಾಸ ಪ್ರಸಾದ್ ರಾಜೀನಾಮೆ ನೀಡಿ ಪಕ್ಷ ಬದಲಿಸಿದ್ದಾರೆ. ಮೇಟಿಯವರು ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಮಹದೇವ್ ಪ್ರಸಾದ್ ನಿಧನ ಹೊಂದಿದ್ದು ರಮೇಶ್ ಜಾರಕಿಹೊಳಿ ಸಣ್ಣ ಕೈಗಾರಿಕೆ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಸಿದ್ದರಾಮಯ್ಯನವರಿಗೆ ಜವಾಬ್ದಾರಿ ಹೆಚ್ಚಲಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications