ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ
ಬೆಂಗಳೂರು, ಏಪ್ರಿಲ್ 19: ಬುಧವಾರ ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿಯಾದ ಕೆಜಿಎಫ್ ಬಾಬು ಅವರ ಮನೆ ಮೇಲೆ ಐಟಿ ದಾಳಿ ನಡೆದಿದೆ.
ಬುಧವಾರ ಬೆಳಗ್ಗೆಯೇ ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆಜಿಎಫ್ ಬಾಬು ಅವರಿಗೆ ಪಕ್ಷದಿಂದ ಟಿಕೆಟ್ ನಿರಾಕರಿಸಲಾಗಿತ್ತು.

ಕಾಂಗ್ರೆಸ್ ನಾಯಕ, ಉದ್ಯಮಿಯಾಗಿರುವ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ಕೈಗೊಳ್ಳುತ್ತಿರುವುದು ಇದು ಮೊದಲೇನಲ್ಲ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಮಾತ್ರ ಬಾಕಿ ಇದೆ. ಸಹಜವಾಗಿ ಎಲ್ಲೆಡೆ ರಾಜಕೀಯ ಪಕ್ಷಗಳ ಪ್ರಚಾರ ಜೋರಾಗಿದ್ದು, ನಾಮಪತ್ರ ಸಲ್ಲಿಕೆಯಾಗುತ್ತಿದೆ. ಇದರ ಜೊತೆ ಅವರ ಘೋಷಿತ ಆಸ್ತಿ ವಿವರಗಳು ಬಹಿರಂಗವಾಗುತ್ತಿದೆ. ಇದರ ನಡುವೆ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದು ಪದೇ ಪದೇ ದಾಳಿ ನಡೆಸುತ್ತಿದ್ದಾರೆ.
ಕಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ...#BreakingNews #itraid #kgfbabu #karntakaelections2023 #itraids pic.twitter.com/ebDhEQz6JJ
— oneindiakannada (@OneindiaKannada) April 19, 2023
ಇತ್ತೀಚೆಗೆ ಮೈಸೂರು, ಮಂಗಳೂರು ಸೇರಿದಂತೆ ಹಲವೆಡೆ ಕಾಂಗ್ರೆಸ್ ಮುಖಂಡರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಈಗ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಕೆಜಿಎಫ್ ಬಾಬು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಆದರೆ ಕಾಂಗ್ರೆಸ್ ಪಕ್ಷ ಅವರ ಬದಲಿಗೆ ಆರ್ ವಿ ದೇವರಾಜು ಅವರಿಗೆ ಟಿಕೆಟ್ ನೀಡಲಾಗಿತ್ತು, ಬಳಿಕ ಕೆಜಿಎಫ್ ಬಾಬು ಅವರು ತಮ್ಮ ಪತ್ನಿಯಾದ ಷಾಜಿಯಾ ತರನಮ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೆಜಿಎಫ್ ಬಾಬು ಅವರ ಮನೆ ಮೇಲೆ ಕಳೆದ 10 ತಿಂಗಳ ಹಿಂದೆ ಇಡಿ (ಜಾರಿ ನಿರ್ದೇಶನಾಲಯ) ದಿಂದ ತನಿಖೆ ಮಾಡಲಾಗಿತ್ತು.
ನಾಮಪತ್ರ ಸಲ್ಲಿಕೆಯಾದ ಮೇಲೆ ಕೆಜಿಎಫ್ ಬಾಬು ಅವರ ಪತ್ನಿ ಷಾಜಿಯಾ ತರನಮ್ ಅವರ ಆಸ್ತಿ ಘೋಷಣೆಯಾಗಿತ್ತು. ಷಾಜಿಯಾ ತರನ್ನಮ್ ತಮ್ಮ ಬಳಿ ಒಟ್ಟಾರೆ 1622.11 ಕೋಟಿ ರು. ಮೌಲ್ಯದ ಆಸ್ತಿ ಇರುವುದಾಗಿ ಘೋಷಿಸಿ ಕೊಂಡಿದ್ದರು. ಈ ಹಿನ್ನೆಲೆಯಲ್ಲೂ ಐಟಿ ದಾಳಿ ನಡೆದಿದೆ ಎನ್ನಲಾಗುತ್ತಿದೆ. ತರನಮ್ ಅವರು ಈ ಪೈಕಿ ತರನ್ನಮ್ ತಮ್ಮ ಬಳಿ 50 ಸಾವಿರ ರು. ನಗದು, 38.58 ಲಕ್ಷ ರು ಮೌಲ್ಯದ ಚಿನ್ನ, ವಜ್ರಾಭರಣ ಸೇರಿದಂತೆ ಒಟ್ಟು 40.59 ಲಕ್ಷ ರು. ಮೌಲ್ಯದ ಚರಾಸ್ತಿ ಇದೆ. ಇದನ್ನು ಬಿಟ್ಟರೆ ಉಳಿದ 1621.71 ಕೋಟಿ ರು.ಗಳಷ್ಟು ಮೌಲ್ಯದ ಆಸ್ತಿಯು ತಮ್ಮ ಪತಿಯ ಹೆಸರಲ್ಲಿರುವುದಾಗಿ ಹೇಳಿದ್ದಾರೆ.
2108ರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಜಿಎಫ್ ಬಾಬು ಸ್ಪರ್ಧಿಸಿ ಸೋಲು ಕಂಡಿದ್ದರು. ಆಗ 1,754 ಆಸ್ತಿ ಹೊಂದಿರುವುದಾಗಿ ಅವರು ಘೋಷಣೆ ಮಾಡಿಕೊಂಡಿದ್ದರು.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications