ಐಟಿ ದಾಳಿ ಪ್ರಕರಣ: ಖೋಡೆಸ್ ಕಂಪನಿಗಳ 878.8 ಕೋಟಿ ಅಕ್ರಮ ಆಸ್ತಿ ಪತ್ತೆ
ಬೆಂಗಳೂರು, ಫೆಬ್ರವರಿ 02: ಖೋಡೆಸ್ ಗ್ರೂಪ್ ಆಪ್ ಕಂಪನಿಗಳ ಅಕ್ರಮ ಸಂಪತ್ತನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ. ಫೆ. 9 ರಂದು ಬೆಂಗಳೂರು ಸೇರಿದಂತೆ 26 ಕಡೆ ನಡೆದಿದ್ದ ದಾಳಿಯಲ್ಲಿ ಖೋಡೆಸ್ ಗೆ ಸೇರಿದ 878.82 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. ಈ ಪರಿಯ ಅಕ್ರಮ ಆಸ್ತಿ ಗಳಿಸಿರುವ ಖೋಡೆಸ್ ನ ಹಣದ ವಹಿವಾಟಿನ ಬಗ್ಗೆ ಜಾರಿ ನಿರ್ದೇಶನಾಲಯ ಎಂಟ್ರಿ ಕೊಡಲು ತಯಾರಿ ನಡೆದಿದೆ.
ಆದಾಯ ತೆರಿಗೆ ಇಲಾಖೆ ಈ ಕುರಿತು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ. ಬೆಂಗಳೂರು ಮೂಲದ ಡೆವಲಪರ್ ಕಂಪನಿ ಜತೆ ಸೇರಿ ಜಂಟಿ ಒಡಂಬಡಿಕೆ ಮಾಡಿಕೊಂಡು ವಸತಿಗೆ ಬಳಸಬೇಕಿದ್ದ ಜಾಗವನ್ನು ವಾಣಿಜ್ಯ ಬಳಕೆಗೆ ಬದಲಾವಣೆ ಮಾಡಲಾಗಿದೆ. ಇದೊಂದರಿಂದಲೇ ಬರೋಬ್ಬರಿ 692.82 ಕೋಟಿ ರೂಪಾಯಿ ಆದಾಯ ಗಳಿಸಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳದಲ್ಲಿ ಖೋಡೆಸ್ ಗೆ ಸೇರಿದ ಲಿಕ್ಕರ್ ಕಂಪನಿಯಲ್ಲಿ ಲೆಕ್ಕ ವಿಲ್ಲದ 74 ಕೋಟಿ ರೂಪಾಯಿ ಹಣ ಸಿಕ್ಕಿದ್ದು, ಅದನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಉಳಿದಂತೆ 17 ಕೋಟಿ ರೂಪಾಯಿ ಹಣವನ್ನು ದೈನಂದಿನ ಖರ್ಚಿನ ವೆಚ್ಚದಲ್ಲಿ ಸುಳ್ಳು ಲೆಕ್ಕ ತೋರಿಸಲಾಗಿದೆ. ಉಳಿದಂತೆ 9 ಕೋಟಿ ರೂಪಾಯಿ ಹಣವನ್ನು ವಿವರಿಸಲಾಗದ ವೆಚ್ಚಕ್ಕೆ ನಿರ್ದೇಶಕರು ತೋರಿಸಿ ಐಟಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.

ಇನ್ನು ಖೋಡೆಸ್ ಕಂಪನಿ ಮಾಲೀಕರು ಸುಮರು 35 ಬೇನಾಮಿ ಆಸ್ತಿ ಹೊಂದಿದ್ದಾರೆ. ಕಂಪನಿ ನೌಕರರು ಮತ್ತು ಆಪ್ತರ ಹೆಸರಿನಲ್ಲಿ ಹಲವಾರು ವರ್ಷದಿಂದ ಬೇನಾಮಿ ಆಸ್ತಿ ಮಾಡಿದ್ದು, ಈ ಕುರಿತ ಮಹತ್ವದ ದಾಖಲೆಗಳನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸುಮಾರು 150 ಕೋಟಿ ಮೌಲ್ಯದ ಆಸ್ತಿಗಳು ಬೇನಾಮಿ ಹೆಸರಿನಲ್ಲಿ ಪತ್ತೆಯಾಗಿವೆ. ಕಂಪನಿ ನಿರ್ದೇಶಕರ ಹೆಸರಿನಲ್ಲಿ ವಿದೇಶಗಳಲ್ಲಿ ಅಪಾರ ಪ್ರಮಾಣದ ಆಸ್ತಿಯನ್ನು ಮಾಡಿದ್ದು, ಎಲ್ಲಾ ದಾಖಲೆಗಳು ಐಟಿ ಕೈ ಸೇರಿವೆ.
ವಿದೇಶಕ್ಕೆ ಹಣ ಸಾಗಣೆ, ಅಲ್ಲಿ ನೂರಾರು ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಬಗ್ಗೆ ದಾಖಲೆಗಳು ಪತ್ತೆಯಾಗುತ್ತಿದ್ದಂತೆ ಎಲ್ಲಾ ಮಾಹಿತಿಯನ್ನು ಜಾರಿ ನಿರ್ದೇಶನಾಲಯಕ್ಕೆ ರವಾನಿಸಿದ್ದಾರೆ. ಖೋಡೆಸ್ ಕಂಪನಿ ಬೇನಾಮಿ ವಹಿವಾಟಿನ ಬಗ್ಗೆ ಇಸಿಆರ್ ದಾಖಲಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಬೇನಾಮಿ ವಹಿವಾಟು ನಿಯಂತ್ರಣ ಹಾಗೂ ಪೆಮಾ ಅಡಿ ಕೇಸು ದಾಖಲಾಗಲಿದೆ ಎಂದು ಹೇಳಲಾಗುತ್ತಿದೆ. ಇಡಿ ಎಂಟ್ರಿ ಕೊಟ್ಟಲ್ಲಿ ಖೋಡೆಸ್ ಬೇನಾಮಿ ಆಸ್ತಿ ಜಪ್ತಿಯಾದರೂ ಅಚ್ಚರಿ ಪಡಬೇಕಿಲ್ಲ.

Recommended Video
ಫೆ. 9 ರಂದು ಬೆಂಗಳೂರಿನಲ್ಲಿ ಖೋಡೆಸ್ ಕಂಪನಿ ಕಚೇರಿ, ರಿಯಲ್ ಎಸ್ಟೇಟ್ ಕಚೇರಿ, ಮಾಲೀಕ ಹರಿಖೋಡೆ ನಿವಾಸ ಸೇರಿದಂತೆ ನಾನಾ ಕಡೆ ದಾಳಿ ನಡೆದಿತ್ತು. ಖೋಡೆಸ್ ಗ್ರೂಪ್ ಆಫ್ ಕಂಪನಿಗಳಿಗೆ ಸೇರಿದ 26 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಸಂಗ್ರಹಿಸಿದ್ದರು. ಆದರೆ ಈ ಪ್ರಮಾಣದ ಅಕ್ರಮ ಆಸ್ತಿ ಸಿಗುವ ಬಗ್ಗೆ ಐಟಿ ಅಧಿಕಾರಿಗಳು ಊಹಿಸಿರಲಿಲ್ಲ. ಬರೋಬ್ಬರಿ 900 ಕೋಟಿ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿ ಪತ್ತೆಯಾಗಿದ್ದು, ಇದೀಗ ಖೋಡೆಸ್ ಕಂಪನಿಯ ಆಸ್ತಿ ಗಳಿಕೆ, ಬೇನಾಮಿ ವಹಿವಾಟಿನ ಬಗ್ಗೆ ಜಾಲಾಡಲು ಜಾರಿ ನಿರ್ದೇಶನಾಲಯ ಎಂಟ್ರಿ ಕೊಡಲಿದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications