ಡಿಕೆಶಿ ಆಪ್ತ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷನ ಮನೆ ಮೇಲೆ ಐಟಿ ದಾಳಿ
ಬೆಂಗಳೂರು, ಅಕ್ಟೋಬರ್ 24 :ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಅವರ ಮನೆ ಹಾಗೂ ಕಚೇರಿ ಮೇಲೆ ಇಂದು (ಮಂಗಳವಾರ) ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದಾರೆ.
ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಆಪ್ತ ಎಂದು ಗುರುತಿಸಿಕೊಂಡಿರುವ ಕೆಎಸ್ ಪಿಸಿಬಿ ಅಧ್ಯಕ್ಷ ಲಕ್ಷಣ್ ಅವರ ಬಸವೇಶ್ವರ ನಗರ ಮತ್ತು ಸದಾಶಿವನಗರದಲ್ಲಿರುವ ಲಕ್ಷಣ್ ಅವರ ಮನೆ ಮತ್ತು ಕಚೇರಿ ಮೇಲೆ ಏಕಕಾಲಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
Comments
English summary
The Income Tax Department officials (IT) have raided on Karnataka State Pollution Control Board (KSPCB) President Lakshman's residence and offices in Bengaluru on Tuesday.