ಆರ್ ಎಲ್ ಜಾಲಪ್ಪ ಅವರ ಆಸ್ಪತ್ರೆ ಮೇಲೆ ಐಟಿ ಇಲಾಖೆ ದಾಳಿ
ಬೆಂಗಳೂರು, ಆಗಸ್ಟ್ 07: ಕೇಂದ್ರದ ಮಾಜಿ ಸಚಿವ, ಮಾಜಿ ಸಂಸದ ಆರ್ಎಲ್ ಜಾಲಪ್ಪ ಅವರಿಗೆ ಸೇರಿದ ವಿದ್ಯಾಸಂಸ್ಥೆ, ಆಸ್ಪತ್ರೆಗಳ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ. ಗುರುವಾರ ಸಂಜೆಯಿಂದ ಐಟಿ ಇಲಾಖೆ ವಿಚಾರಣೆ ನಡೆಸುತ್ತಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿ ಜನಾರ್ದನ ನೇತೃತ್ವದ ತಂಡ ಬೆಂಗಳೂರು, ಕೋಲಾರದಲ್ಲಿರುವ ಶ್ರೀದೇವರಾಜ್ ಅರಸ್ ಮೆಡಿಕಲ್ ಕಾಲೇಜ್, ಆರ್ ಎಲ್ ಜಾಲಪ್ಪ ಆಸ್ಪತ್ರೆ ಹಾಗೂ ಇನ್ನಿತರ ಕಾಲೇಜು ಕಮ್ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದೆ.

ಆರ್ ಎಲ್ ಜಾಲಪ್ಪ ಅವರು ದೇವರಾಜ್ ಅರಸ್ ಅಕಾಡೆಮಿ ಫಾರ್ ಹೈಯರ್ ಎಜುಕೇಷನ್ ಅಂಡ್ ರಿಸರ್ಚ್(ಎಸ್ ಡಿಯುಎಚ್ ಇಆರ್) ನ ಮುಖ್ಯಸ್ಥರಾಗಿದ್ದಾರೆ. ಈ ಎಲ್ಲಾ ವಿದ್ಯಾಸಂಸ್ಥೆಗಳು ತೆರಿಗೆ ವಂಚನೆ ಆರೋಪ ಎದುರಿಸುತ್ತಿವೆ.
ಗುರುವಾರ ನಡೆಸಲಾದ ಮೊದಲ ದಾಳಿ ಸಂಜೆ ತನಕ ಮುಂದುವರೆದಿತ್ತು, ಸುಮಾರು 3 ಕೋಟಿ ರು ನಗದು ಹಾಗೂ ಅನೇಕ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಉದ್ಯೋಗಿಗಳ ಭವಿಷ್ಯ ನಿಧಿ ಅಧಿಕಾರಿಗಳಿಗೆ ವಿದ್ಯಾಸಂಸ್ಥೆ ವಿರುದ್ಧ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಸದ್ಯಕ್ಕೆ ಕಾಲೇಜು, ಆಸ್ಪತ್ರೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿರುವುದರಿಂದ ಯಾರನ್ನು ಒಳಗೆ ಯಾರನ್ನು ಬಿಡುತ್ತಿಲ್ಲ. ದಾಳಿ ಬಗ್ಗೆ ಆರ್ ಜಾಲಪ್ಪ ವಿದ್ಯಾಸಂಸ್ಥೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications