ಇತರ ನಗರಗಳಿಗೂ ಐಟಿ-ಬಿಟಿ ಉದ್ಯಮ ವಿಸ್ತರಣೆ
ಬೆಂಗಳೂರು, ಜ.8 : ಕರ್ನಾಟಕದ ಇತರ ನಗರಗಳಿಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರವನ್ನು ವಿಸ್ತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜಧಾನಿ ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಲ್ಲಿ ಉದ್ಯಮ ಆರಂಭಿಸುವವರಿಗೆ ವಿಶೇಷ ಸೌಲಭ್ಯ ನೀಡಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ಹೇಳಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿ ಸಚಿವ ಎಸ್.ಆರ್.ಪಾಟೀಲ್, ರಾಜ್ಯದ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಐಟಿ-ಬಿಟಿ ಕಂಪನಿಗಳನ್ನು ಸ್ಥಾಪಿಸುವ ಮೂಲಕ ರಾಜಧಾನಿ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು. ಬೆಂಗಳೂರು ಹೊತರು ಪಡಿಸಿ ಇತರೆ ನಗರ ಮತ್ತು ಪಟ್ಟಣಗಳಲ್ಲಿ ಕಂಪನಿಗಳನ್ನು ಆರಂಭಿಸುವವರಿಗೆ ವಿಶೇಷ ಸೌಲಭ್ಯ ನೀಡಲಾಗುವುದು ಎಂದರು. [ಐಟಿ ಕ್ರಾಂತಿ ಇತರ ನಗರ ತಲುಪಬೇಕು]

ಹೊಸ ಐಟಿ ನೀತಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದು, ಇದರ ಮೂಲಕ ಎರಡನೇ ಮತ್ತು ಮೂರನೇ ಹಂತದ ನಗರಗಳಿಗೆ ಆದ್ಯತೆ ನೀಡಲಾಗುತ್ತದೆ. ಹೊಸ ನೀತಿಯಂತೆ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಲಾಗುವುದು. ಅದರಂತೆ ಐಟಿ-ಬಿಟಿ ಕಂಪನಿಗಳನ್ನು ಸ್ಥಾಪಿಸುವುದು, ಜಮೀನು ನೀಡಿಕೆ ಮುಂತಾದ ವಿಚಾರಗಳ ಕುರಿತಾಗಿ ತ್ವರಿತವಾಗಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. [ಗ್ರಾಮ ಪಂಚಾಯಿತಿಗೆ ಬರುತ್ತೆ ವೈಫೈ]
ಬೆಳಗಾವಿಯಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ಸ್ಥಾಪಿಸುವ ಕಾರ್ಯವನ್ನು ತ್ವರಿತಗೊಳಿಸಲಾಗುವುದು. ಇದರ ಜತೆಗೆ ಇತರೆ ನಗರಗಳಲ್ಲಿ ಕಂಪನಿಗಳನ್ನು ಆರಂಭಿಸುವವರಿಗೆ ವಿಶೇಷ ಪ್ರೋತ್ಸಾಹ ನೀಡಲಾಗುವುದು. ಅಲ್ಲದೆ, ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ಮಾಹಿತಿ ತಂತ್ರಜ್ಞಾನ ಬಂಡವಾಳ ವಲಯ ಸ್ಥಾಪಿಸಲಾಗುವುದು ಎಂದು ಹೇಳಿದರು.
ಐಟಿ-ಬಿಟಿ ವಲಯ ಬೆಂಗಳೂರಿಗೆ ಮಾತ್ರ ಸೀಮಿತವಾಗಿದೆ. ಆದ್ದರಿಂದ ಜನದಟ್ಟಣೆ, ವಾಹನ ದಟ್ಟಣೆ ಹೆಚ್ಚಾಗಿದೆ. ಮಾತ್ರವಲ್ಲ, ಮನೆ ಬಾಡಿಗೆಯೂ ದುಬಾರಿಯಾಗಿದೆ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದ್ದು, ಇತರ ನಗರಗಳಿಗೂ ಉದ್ಯಮ ವಿಸ್ತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈಗಾಗಲೇ ಕೆಲವು ಕಂಪನಿಗಳು ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ಬೆಳಗಾವಿ, ಮಂಗಳೂರಿನಲ್ಲಿ ಕಂಪನಿಗಳನ್ನು ಆರಂಭಿಸಲು ಉತ್ಸಾಹ ತೋರಿವೆ. ಹುಬ್ಬಳ್ಳಿಯಲ್ಲಿ ಐಟಿ ಕಂಪನಿಗಳ ಸ್ಥಾಪನೆಗಾಗಿ 50 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಇನ್ಫೋಸಿಸ್ ಈ ಜಾಗದಲ್ಲಿ ಕಂಪನಿ ಆರಂಭಿಸಲು ಮುಂದಾಗಿದ್ದು, ಇದರಿಂದ 10 ಸಾವಿರ ಉದ್ಯೋಗ ದೊರೆಯಲಿದೆ ಎಂದು ಹೇಳಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications