ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ತಿಳಿಯಲು ಈ ಮೇಳಕ್ಕೆ ಬನ್ನಿ

|
Google Oneindia Kannada News

ಬೆಂಗಳೂರು ಅಕ್ಟೋಬರ್ 5: ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ರಾಜ್ಯ ಸರಕಾರ ಬದ್ದವಾಗಿದೆ. ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ದಿಗೆ ಬೇಕಾದ ಸಲಹೆಗಳನ್ನು ನೀಡಿದಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಸಮಾಲೋಚನೆ ನಡೆಸುವ ಮೂಲಕ, ಅವುಗಳ ಅಭಿವೃದ್ದಿಗೆ ಕ್ರಮ ಕೈಗೊಳ್ಳುವುದಾಗಿ ವಿಧಾನ ಪರಿಷತ್ ಸದಸ್ಯ ಶರವಣ ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪ್ರಾರಂಭವಾಗಿರುವ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿಗಳು ನಮ್ಮ ರಾಜ್ಯದ ಪ್ರವಾಸಿ ಕ್ಷೇತ್ರಗಳ ಅಭಿವೃದ್ದಿಗೆ ಹೆಚ್ಚಿನ ಗಮನ ನೀಡುತ್ತಿದ್ದಾರೆ. ಇಂದಿನಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಪ್ರವಾಸೋದ್ಯಮ ಮೇಳದಲ್ಲಿ ನಮ್ಮ ರಾಜ್ಯದ ಪ್ರವಾಸಿ ತಾಣಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ದಿಗೊಳಿಸುವ ಬಗ್ಗೆ ಸಲಹೆಗಳನ್ನು ನೀಡುವಂತೆ ಮನವಿ ಮಾಡಿದರು. ಈ ಸಲಹೆಗಳನ್ನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಶ್ರೀಮತಿ ಅನಿತಾ ಮಾತನಾಡಿ, ರಾಜ್ಯದಲ್ಲಿ ಇನ್ನೂ ಅನ್ವೇಷಣೆಗೊಳ್ಳದ ಹಲವು ಪ್ರದೇಶಗಳು ಇವೆ. ಇವುಗಳನ್ನು ಜನರ ಮುಂದಿಡುವತ್ತ ರಾಜ್ಯ ಸರಕಾರ ಕ್ರಮಗಳನ್ನು ಕೈಗೊಳ್ಳುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಸ್ಕೂಬಾ ಡೈವಿಂಗ್ ಸೇರಿದಂತೆ ಹಲವು ಪ್ರವಾಸೋದ್ಯಮ ಚಟುವಟಿಕೆಗಳನ್ನು ಪ್ರಾರಂಭಿಸಿದ್ದೇವೆ.

ಸಮುದ್ರ ತೀರಗಳು ಬಹಳ ಆಕರ್ಷಣೀಯವಾಗಿವೆ

ಸಮುದ್ರ ತೀರಗಳು ಬಹಳ ಆಕರ್ಷಣೀಯವಾಗಿವೆ

ಅಲ್ಲದೆ ನಮ್ಮ ರಾಜ್ಯದ ನದಿಗಳಲ್ಲಿ ಬೋಟ್ ಹೌಸ್ ಗಳನ್ನು ಪ್ರಾರಂಭಿಸಿದ್ದೇವೆ. ಇದನ್ನು ರಾಜ್ಯದ ಜನರು ಪ್ರಯೋಜನ ಪಡೆದುಕೊಳ್ಳಬೇಕು. ಕೇರಳ ರಾಜ್ಯಕ್ಕಿಂತಲೂ ಹೆಚ್ಚಿನ ಸೌಂದರ್ಯಭರಿತ ಬೋಟ್ ಹೌಸ್ ಗಳು ಇಲ್ಲಿವೆ ಎಂದರು. ಅಲ್ಲದೆ ಉಡುಪಿ ಜಿಲ್ಲೆಯಲ್ಲಿರುವ ಸಮುದ್ರ ತೀರಗಳು ಬಹಳ ಆಕರ್ಷಣೀಯವಾಗಿವೆ. ಇವುಗಳ ಅಭಿವೃದ್ದಿಯಾಗಿದ್ದು, ಜನರು ಅದರ ಉಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಕಣ್ವ ಗ್ರೂಪ್ ನ ಅಧ್ಯಕ್ಷರಾದ ಎನ್ ನಂಜುಂಡಯ್ಯ, ಕ್ರೀಯೇಟಿವ್ ಡಿವೈಸ್ ಸ ಎಂ ಡಿ ಡಾ ಬಿ ಎಂ ಉಮೇಶ್ ಕುಮಾರ್, ನಿವೃತ್ತ ಐಎಎಸ್ ಕೆ ಅಮರನಾರಾಯಣ, ಕಾರ್ಯಕ್ರಮ ಆಯೋಜಿಸಿರುವ ಕ್ಲಬ್ 9 ಸಂಸ್ಥೆಯ ಪ್ರಕಾಶ್ ಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು. ಈ ಪ್ರದರ್ಶನ ಮೇಳ ಅಕ್ಟೋಬರ್ 7 ರ ವರೆಗೂ ನಡೆಯಲಿದೆ.

ಪ್ರವಾಸೋದ್ಯಮ ಮೇಳದ ಬಗ್ಗೆ ಹೆಚ್ಚಿನ ಮಾಹಿತಿ

ಪ್ರವಾಸೋದ್ಯಮ ಮೇಳದ ಬಗ್ಗೆ ಹೆಚ್ಚಿನ ಮಾಹಿತಿ

ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ದಿ ಹಾಗೂ ದೇಶ ವಿದೇಶದ ಪ್ರವಾಸಿ ತಾಣಗಳ ಮಾಹಿತಿ ನೀಡುವ ನಿಟ್ಟಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 5 ರಿಂದ ಮೂರು ದಿನಗಳ ಕಾಲ ಅಂತರಾಷ್ಟ್ರೀಯ ಪ್ರವಾಸೋದ್ಯಮ ಪ್ರದರ್ಶನ ನಡೆಯಲಿದೆ ಎಂದು ಕ್ಲಬ್ 9 ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಲಬ್ 9 ಈವೆಂಟ್ಸ್ ಆಯೋಜಿಸಿರುವ ಈ "ಟೂರಿಸಂ ಸಮಿಟ್ 2018" ಕ್ಕೆ ರಾಜ್ಯದ ಪ್ರವಾಸೋದ್ಯಮ ಸಚಿವ ಸಾ ರಾ ಮಹೇಶ್ ಚಾಲನೆ ನೀಡಲಿದ್ದಾರೆ.

ಈ ಅಂತರಾಷ್ಟ್ರೀಯ ಪ್ರವಾಸಿ ಪ್ರದರ್ಶನದಲ್ಲಿ ರಾಜ್ಯದ ಹಾಗೂ ದೇಶದ ಪ್ರವಾಸಿ ತಾಣಗಳ ಅಭಿವೃದ್ದಿ, ಹೂಡಿಕೆಗೆ ಇರುವ ಅವಕಾಶಗಳು, ಹೊಸ ಪ್ರವಾಸಿ ತಾಣಗಳ ಸೃಷ್ಟಿ ಸೇರಿ ಹಲವಾರು ವಿಚಾರಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ ಎಂದರು. ಅಲ್ಲದೆ, ದೇಶೀಯ ಹಾಗೂ ಅಂತರಾಷ್ಟ್ರೀಯ ಪ್ರವಾಸೋದ್ಯಮ ಪ್ರದರ್ಶಕರಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಪರಸ್ಪರ ಒಪ್ಪಂದಕ್ಕೆ ಪ್ರದರ್ಶನ ವೇದಿಕೆ ಒದಗಿಸಿಕೊಡಲಿದೆ ಎಂದರು.

ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ದಿ

ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ದಿ

ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ದಿಗೆ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಟೂರಿಸಂ ಸಮಿಟ್ ನಲ್ಲಿ ಚರ್ಚೆ ನಡೆಯಲಿದೆ. ಉಡುಪಿ ಜಿಲ್ಲೆಯನ್ನು ಅಡ್ವೆಂಚರ್ ಟೂರಿಸಂ ಕ್ಷೇತ್ರವಾಗಿ ಅಭಿವೃದ್ದಿಗೊಳಿಸುವ ಕುರಿತ ಚರ್ಚೆ ನಡೆಯಲಿದೆ. ರಾಜ್ಯದಲ್ಲಿಯೇ ಪ್ರಪ್ರಥಮ ಸ್ಕೂಬಾ ಡೈವಿಂಗ್ ತಾಣವೂ ಉಡುಪಿಯಲ್ಲಿ ಬರಲಿದೆ. ಶೃಂಗ ಸಭೆಯಲ್ಲಿಯೇ ಇದಕ್ಕೆ ಚಾಲನೆ ದೊರೆಯಲಿದೆ. ಹೆಚ್ಚು ಕರಾವಳಿ ಪ್ರದೇಶ ಹೊಂದಿರುವ ಕರ್ನಾಟಕದಲ್ಲಿ ಬೀಚ್‍ಗಳನ್ನು ಪ್ರವಾಸಿ ತಾಣವಾಗಿ ಅಭಿವೃದ್ದಿಪಡಿಸಲು ಅವಕಾಶಗಳಿವೆ. ಇದರ ಕುರಿತಾಗಿಯೂ ಸಭೆಯಲ್ಲಿ ತಜ್ಞರು ಅಭಿಪ್ರಾಯ ಮಂಡಿಸಲಿದ್ದಾರೆ

ಕಾರ್ಯಕ್ರಮದ ರೂವಾರಿಗಳಾದ ಡಾ ಬಿ ಎಂ ಉಮೇಶ್ ಕುಮಾರ್ ಮಾತನಾಡಿ, ಭಾರಿ ಮಳೆಯಿಂದಾಗಿ ಭೂಕುಸಿತ, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ ವಯನಾಡ್ ಹಾಗೂ ಮಡಿಕೇರಿಯಲ್ಲಿ ಪ್ರವಾಸಿ ತಾಣಗಳ ಮರು ಅಭಿವೃದ್ದಿಗೊಳಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ.

ದಸರಾ ಹಿನ್ನಲೆಯಲ್ಲಿ ಮೈಸೂರು, ಮಡಿಕೇರಿ ಜಿಲ್ಲೆಗೆ ದೇಶ-ವಿದೇಶಗಳಿಂದ ಹೆಚ್ಚು ಪ್ರವಾಸಿಗರು ಆಗಮಿಸಲಿದ್ದು, ಮಡಿಕೇರಿಯಲ್ಲಿನ ರೆಸಾರ್ಟ್ ಹಾಗೂ ಹೋಟೇಲ್‍ಗಳಿಗೆ ಬೇಡಿಕೆ ಹೆಚ್ಚಾಗಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮಹಿಳಾ ನವೋದ್ಯಮಿಗಳೂ, ಗ್ರಾಮೀಣ ಭಾಗದ ಪ್ರವಾಸಿ ತಾಣಗಳ ಅಭಿವೃದ್ದಿ, ಆರೋಗ್ಯ ಪ್ರವಾಸೋದ್ಯಮ, ವೈನ್ ಟೂರಿಸಂ, ಅಡ್ವೇಂಚರ್ಸ್ ಟೂರಿಸಂ ಮೂಲಕ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಪ್ರವಾಸಿಗರನ್ನು ಸೆಳೆಯುವುದು ಸಮಿಟ್ ಉದ್ದೇಶವಾಗಿದೆ ಎಂದರು.

ಇಂಡಿಯನ್ ಟ್ರೆಡಿಷನಲ್ ಫ್ಯಾಷನ್ ಶೋ

ಇಂಡಿಯನ್ ಟ್ರೆಡಿಷನಲ್ ಫ್ಯಾಷನ್ ಶೋ

ಇಂಡಿಯನ್ ಟ್ರೆಡಿಷನಲ್ ಫ್ಯಾಷನ್ ಶೋ: ಶೃಂಗ ಸಭೆಯ ಎರಡನೇ ದಿನ ಮೈಸೂರು ಸಿಲ್ಕ್ ಸೀರೆಯನ್ನು ವಿಶ್ವಮಟ್ಟದಲ್ಲಿ ಪ್ರದರ್ಶಿಸಲು ಇಂಡಿಯನ್ ಟ್ರೆಡಿಷನಲ್ ಶೋನ್ನು ಆಯೋಜಿಸಲಾಗಿದೆ. ಅಲ್ಲದೆ, ಪ್ರದರ್ಶನದಲ್ಲಿ ದೇಸಿ ತಿನಿಸುಗಳ ಮಳಿಗೆಗಳೂ ಇರಲಿವೆ.

ಪ್ರವಾಸಿ ತಾಣಗಳ ಸಮಗ್ರ ಮಾಹಿತಿ: ಕರ್ನಾಟಕ, ಕೇರಳ, ಗೋವಾ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ಸೇರಿ ವಿವಿಧ ರಾಜ್ಯಗಳ ಪ್ರವಾಸೋದ್ಯಮ ಇಲಾಖೆಗಳೂ ಪ್ರದರ್ಶನದಲ್ಲಿ ಭಾಗವಹಿಸಲಿವೆ. ಹೀಗಾಗಿ ದೇಶದ ಪ್ರಮುಖ ಪ್ರವಾಸಿ ತಾಣಗಳ ಸಮಗ್ರ ಪರಿಚಯ ಇಲ್ಲಿ ಲಭ್ಯವಾಗಲಿವೆ. ದುಬೈ, ಮಲೇಷ್ಯಾ, ಮುಂಬೈ, ಪುಣೆ, ಗುಜರಾತ್, ದೆಹಲಿ ಟ್ರಾವೆಲ್ ಏಜೆಂಟ್ ಗಳೂ ಪಾಲ್ಗೊಳ್ಳಲಿದ್ದಾರೆ.

10 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ

10 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ

ಈ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಮೇಳದಲ್ಲಿ 10 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ದಸರಾ ರಜಾ ದಿನಗಳು ಮತ್ತು ಕ್ರಿಸ್ಮಸ್ ರಜಾದಿನಗಳಿಗೆ ಪ್ರವಾಸ ಮಾಡುವವರಿಗೆ ಉತ್ತಮ ಡೀಲ್‍ಗಳು ದೊರೆಯಲಿವೆ. ಯಾವ ಪ್ರದೇಶಗಳಿಗೆ, ಯಾವ ಸಮಯದಲ್ಲಿ ಹೋಗಬೇಕು, ಅಲ್ಲಿನ ವೈಶಿಷ್ಟ್ಯತೆಗಳೇನು, ಎಷ್ಟು ದಿನ, ಪ್ರಯಾಣ ಹೇಗಿರಬೇಕು, ವಾಯಮಾರ್ಗ, ಜಲಮಾರ್ಗ, ರಸ್ತೆ ಮಾರ್ಗಗಳ ಬಗ್ಗೆ ಮಾಹಿತಿ. ಹೋಟೇಲ್, ರೆಸಾರ್ಟ್‍ಗಳಲ್ಲಿ ಸಿಗುವ ರಿಯಾಯತಿಗಳ ಬಗ್ಗೆಯೂ ಮಾಹಿತಿ ದೊರೆಯಲಿದೆ.

ಒಂದು ಕಥೆ ಹೇಳುವೆ: ಐತಿಹಾಸಿಕ ಸ್ಥಳಗಳು, ವಿಶೇಷವಾದ ಪ್ರದೇಶಗಳ ಬಗ್ಗೆ ಕಥೆ ಹೇಳುವುದು ಇದರ ವಿಶೇಷ. ಈ ಕಾರ್ಯಕ್ರಮವನ್ನು ಅನುಭವಿ ಗೈಡ್ ಗಳು ಮತ್ತು ಕೆ ಎಲ್ ಇ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನಡೆಸಿಕೊಡಲಿದ್ದಾರೆ.

English summary
ITE- International Tourism Expo inaugurated today(October 05) by MLC TA Sharavana. There will be 150 exhibitors part of this expo.ITE- International Tourism Expo re scheduled to October 5-6-7 2018 at Palace Ground, Bengaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X