ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಪ್ರದರ್ಶನ
ಬೆಂಗಳೂರು ಅಕ್ಟೋಬರ್ 4: ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ದಿ ಹಾಗೂ ದೇಶ ವಿದೇಶದ ಪ್ರವಾಸಿ ತಾಣಗಳ ಮಾಹಿತಿ ನೀಡುವ ನಿಟ್ಟಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 5 ರಿಂದ ಮೂರು ದಿನಗಳ ಕಾಲ ಅಂತರಾಷ್ಟ್ರೀಯ ಪ್ರವಾಸೋದ್ಯಮ ಪ್ರದರ್ಶನ ನಡೆಯಲಿದೆ ಎಂದು ಕ್ಲಬ್ 9 ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಲಬ್ 9 ಈವೆಂಟ್ಸ್ ಆಯೋಜಿಸಿರುವ ಈ "ಟೂರಿಸಂ ಸಮಿಟ್ 2018" ಕ್ಕೆ ರಾಜ್ಯದ ಪ್ರವಾಸೋದ್ಯಮ ಸಚಿವ ಸಾ ರಾ ಮಹೇಶ್ ಚಾಲನೆ ನೀಡಲಿದ್ದಾರೆ.
ಈ ಅಂತಾರಾಷ್ಟ್ರೀಯ ಪ್ರವಾಸಿ ಪ್ರದರ್ಶನದಲ್ಲಿ ರಾಜ್ಯದ ಹಾಗೂ ದೇಶದ ಪ್ರವಾಸಿ ತಾಣಗಳ ಅಭಿವೃದ್ದಿ, ಹೂಡಿಕೆಗೆ ಇರುವ ಅವಕಾಶಗಳು, ಹೊಸ ಪ್ರವಾಸಿ ತಾಣಗಳ ಸೃಷ್ಟಿ ಸೇರಿ ಹಲವಾರು ವಿಚಾರಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ ಎಂದರು. ಅಲ್ಲದೆ, ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಪ್ರದರ್ಶಕರಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಪರಸ್ಪರ ಒಪ್ಪಂದಕ್ಕೆ ಪ್ರದರ್ಶನ ವೇದಿಕೆ ಒದಗಿಸಿಕೊಡಲಿದೆ ಎಂದರು.
ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ದಿಗೆ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಟೂರಿಸಂ ಸಮಿಟ್ ನಲ್ಲಿ ಚರ್ಚೆ ನಡೆಯಲಿದೆ. ಉಡುಪಿ ಜಿಲ್ಲೆಯನ್ನು ಅಡ್ವೆಂಚರ್ ಟೂರಿಸಂ ಕ್ಷೇತ್ರವಾಗಿ ಅಭಿವೃದ್ದಿಗೊಳಿಸುವ ಕುರಿತ ಚರ್ಚೆ ನಡೆಯಲಿದೆ. ರಾಜ್ಯದಲ್ಲಿಯೇ ಪ್ರಪ್ರಥಮ ಸ್ಕೂಬಾ ಡೈವಿಂಗ್ ತಾಣವೂ ಉಡುಪಿಯಲ್ಲಿ ಬರಲಿದೆ.
ಶೃಂಗ ಸಭೆಯಲ್ಲಿಯೇ ಇದಕ್ಕೆ ಚಾಲನೆ ದೊರೆಯಲಿದೆ. ಹೆಚ್ಚು ಕರಾವಳಿ ಪ್ರದೇಶ ಹೊಂದಿರುವ ಕರ್ನಾಟಕದಲ್ಲಿ ಬೀಚ್ಗಳನ್ನು ಪ್ರವಾಸಿ ತಾಣವಾಗಿ ಅಭಿವೃದ್ದಿಪಡಿಸಲು ಅವಕಾಶಗಳಿವೆ. ಇದರ ಕುರಿತಾಗಿಯೂ ಸಭೆಯಲ್ಲಿ ತಜ್ಞರು ಅಭಿಪ್ರಾಯ ಮಂಡಿಸಲಿದ್ದಾರೆ.

ಮಡಿಕೇರಿಯಲ್ಲಿ ಪ್ರವಾಸಿ ತಾಣಗಳ ಮರು ಅಭಿವೃದ್ದಿ
ಕಾರ್ಯಕ್ರಮದ ರೂವಾರಿಗಳಾದ ಡಾ ಬಿ ಎಂ ಉಮೇಶ್ ಕುಮಾರ್ ಮಾತನಾಡಿ, ಭಾರಿ ಮಳೆಯಿಂದಾಗಿ ಭೂಕುಸಿತ, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ ವಯನಾಡ್ ಹಾಗೂ ಮಡಿಕೇರಿಯಲ್ಲಿ ಪ್ರವಾಸಿ ತಾಣಗಳ ಮರು ಅಭಿವೃದ್ದಿಗೊಳಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ. ದಸರಾ ಹಿನ್ನಲೆಯಲ್ಲಿ ಮೈಸೂರು, ಮಡಿಕೇರಿ ಜಿಲ್ಲೆಗೆ ದೇಶ-ವಿದೇಶಗಳಿಂದ ಹೆಚ್ಚು ಪ್ರವಾಸಿಗರು ಆಗಮಿಸಲಿದ್ದು, ಮಡಿಕೇರಿಯಲ್ಲಿನ ರೆಸಾರ್ಟ್ ಹಾಗೂ ಹೋಟೇಲ್ಗಳಿಗೆ ಬೇಡಿಕೆ ಹೆಚ್ಚಾಗಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮಹಿಳಾ ನವೋದ್ಯಮಿಗಳೂ, ಗ್ರಾಮೀಣ ಭಾಗದ ಪ್ರವಾಸಿ ತಾಣಗಳ ಅಭಿವೃದ್ದಿ, ಆರೋಗ್ಯ ಪ್ರವಾಸೋದ್ಯಮ, ವೈನ್ ಟೂರಿಸಂ, ಅಡ್ವೇಂಚರ್ಸ್ ಟೂರಿಸಂ ಮೂಲಕ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಪ್ರವಾಸಿಗರನ್ನು ಸೆಳೆಯುವುದು ಸಮಿಟ್ ಉದ್ದೇಶವಾಗಿದೆ ಎಂದರು.

ಇಂಡಿಯನ್ ಟ್ರೆಡಿಷನಲ್ ಫ್ಯಾಷನ್ ಶೋ
ಇಂಡಿಯನ್ ಟ್ರೆಡಿಷನಲ್ ಫ್ಯಾಷನ್ ಶೋ: ಶೃಂಗ ಸಭೆಯ ಎರಡನೇ ದಿನ ಮೈಸೂರು ಸಿಲ್ಕ್ ಸೀರೆಯನ್ನು ವಿಶ್ವಮಟ್ಟದಲ್ಲಿ ಪ್ರದರ್ಶಿಸಲು ಇಂಡಿಯನ್ ಟ್ರೆಡಿಷನಲ್ ಶೋನ್ನು ಆಯೋಜಿಸಲಾಗಿದೆ. ಅಲ್ಲದೆ, ಪ್ರದರ್ಶನದಲ್ಲಿ ದೇಸಿ ತಿನಿಸುಗಳ ಮಳಿಗೆಗಳೂ ಇರಲಿವೆ.

ಪ್ರವಾಸಿ ತಾಣಗಳ ಸಮಗ್ರ ಮಾಹಿತಿ
ಕರ್ನಾಟಕ, ಕೇರಳ, ಗೋವಾ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ಸೇರಿ ವಿವಿಧ ರಾಜ್ಯಗಳ ಪ್ರವಾಸೋದ್ಯಮ ಇಲಾಖೆಗಳೂ ಪ್ರದರ್ಶನದಲ್ಲಿ ಭಾಗವಹಿಸಲಿವೆ. ಹೀಗಾಗಿ ದೇಶದ ಪ್ರಮುಖ ಪ್ರವಾಸಿ ತಾಣಗಳ ಸಮಗ್ರ ಪರಿಚಯ ಇಲ್ಲಿ ಲಭ್ಯವಾಗಲಿವೆ. ದುಬೈ, ಮಲೇಷ್ಯಾ, ಮುಂಬೈ, ಪುಣೆ, ಗುಜರಾತ್, ದೆಹಲಿ ಟ್ರಾವೆಲ್ ಏಜೆಂಟ್ ಗಳೂ ಪಾಲ್ಗೊಳ್ಳಲಿದ್ದಾರೆ.

ರೆಸಾರ್ಟ್ಗಳಲ್ಲಿ ಸಿಗುವ ರಿಯಾಯತಿ
ಈ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಮೇಳದಲ್ಲಿ 10 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ದಸರಾ ರಜಾ ದಿನಗಳು ಮತ್ತು ಕ್ರಿಸ್ಮಸ್ ರಜಾದಿನಗಳಿಗೆ ಪ್ರವಾಸ ಮಾಡುವವರಿಗೆ ಉತ್ತಮ ಡೀಲ್ಗಳು ದೊರೆಯಲಿವೆ. ಯಾವ ಪ್ರದೇಶಗಳಿಗೆ, ಯಾವ ಸಮಯದಲ್ಲಿ ಹೋಗಬೇಕು, ಅಲ್ಲಿನ ವೈಶಿಷ್ಟ್ಯತೆಗಳೇನು, ಎಷ್ಟು ದಿನ, ಪ್ರಯಾಣ ಹೇಗಿರಬೇಕು, ವಾಯಮಾರ್ಗ, ಜಲಮಾರ್ಗ, ರಸ್ತೆ ಮಾರ್ಗಗಳ ಬಗ್ಗೆ ಮಾಹಿತಿ. ಹೋಟೇಲ್, ರೆಸಾರ್ಟ್ಗಳಲ್ಲಿ ಸಿಗುವ ರಿಯಾಯತಿಗಳ ಬಗ್ಗೆಯೂ ಮಾಹಿತಿ ದೊರೆಯಲಿದೆ.
ಒಂದು ಕಥೆ ಹೇಳುವೆ: ಐತಿಹಾಸಿಕ ಸ್ಥಳಗಳು, ವಿಶೇಷವಾದ ಪ್ರದೇಶಗಳ ಬಗ್ಗೆ ಕಥೆ ಹೇಳುವುದು ಇದರ ವಿಶೇಷ. ಈ ಕಾರ್ಯಕ್ರಮವನ್ನು ಅನುಭವಿ ಗೈಡ್ ಗಳು ಮತ್ತು ಕೆ ಎಲ್ ಇ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನಡೆಸಿಕೊಡಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ










Click it and Unblock the Notifications