ಬಾಡಿಗೆ ತಾಯಿಯೂ ಇಲ್ಲ, ಮಗುವೂ ಇಲ್ಲ, ಹೀಗೊಂದು ವಿಚಿತ್ರ ಘಟನೆ
ಬೆಂಗಳೂರು, ನವೆಂಬರ್ 8: ಬಾಡಿಗೆ ತಾಯಿಯ ಮೂಲಕ ಮಗು ಕೊಡುವುದಾಗಿ ವಂಚಿಸಿದ ಬೆಂಗಳೂರಿನ ಪ್ರತಿಷ್ಠಿತ ಐವಿಎಫ್ ಕೇಂದ್ರಕ್ಕೆ ಗ್ರಾಹಕ ನ್ಯಾಯಾಲಯ 3 ಲಕ್ಷ ರೂ ಪರಿಹಾರ ಸಹಿತ ಹಣ ವಾಪಸ್ ಮಾಡುವಂತೆ ಆದೇಶಿಸಿದೆ.
ವಿಚ್ಛೇದಿತರಾಗಿದ್ದ ಮೈಸೂರಿನ ಮಾರ್ಟಿನ್ ಸುಜಯ್ ಎಂಬುವವರು 2016 ರಲ್ಲಿ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ಓದಿ ಬೆಂಗಳೂರಿನ ಇಂದಿರಾ ನಗರದಲ್ಲಿರುವ ಡಾ.ರಮಾಸ್ ಫರ್ಟಿಲಿಟಿ ಐವಿಎಫ್ ಸೆಂಟರ್ ಗೆ ಭೇಟಿ ನೀಡಿದ್ದರು.
ಆ ವೇಳೆ ಬಾಡಿಗೆ ತಾಯಿಯ ಮೂಲಕ ಒಂದು ಮಗುವಿಗೆ 7 ಲಕ್ಷ ರೂಪಾಯಿ, ಅವಳಿ ಮಕ್ಕಳಿಗೆ 8.5 ಲಕ್ಷ ರೂಪಾಯಿ ಶುಲ್ಕ ಭರಿಸಲು ತಿಳಿಸಲಾಗಿತ್ತು. ಮುಂಗಡವಾಗಿ ಸುಜಯ್ 2016ರ ಆಗಸ್ಟ್ 19ರಂದು2.50 ಲಕ್ಷ ರೂಪಾಯಿ ಪಾವತಿಸಿದ್ದರು.

ಆದರೆ ಸುಜಯ್ ಗೆ ಬಾಡಿಗೆ ತಾಯಿ ಯಾರು ಎಂಬುದನ್ನು ದಿನಗಳೆದರೂ ವೈದ್ಯರು ಭೇಟಿ ಮಾಡಿಸಲಿಲ್ಲ. ಅದಾದ ಸುಮಾರು ಎಂಟು ತಿಂಗಳ ನಂತರ 2017ರ ಏಪ್ರಿಲ್ 25ರಂದು ಸುಜಯ್ ಅವರಿಗೆ ಮತ್ತೆ 2.50 ಲಕ್ಷ ರೂಪಾಯಿ ಪಾವತಿಸಲು ಸೂಚಿಸಿದ ವೈದ್ಯರು, ಇನ್ನೇನು ಬಾಡಿಗೆ ತಾಯಿ ಬರುತ್ತಿದ್ದಾರೆ. ಟ್ರಾಫಿಕ್ ನಲ್ಲಿ ಸಿಲುಕಿದ್ದಾರೆ ಎಂದು ತಿಳಿಸಿದ್ದರು.
ಕೊನೆಗೆ ಬಾಡಿಗೆ ತಾಯಿ ಅಪಘಾತಕ್ಕೀಡಾಗಿದ್ದಾರೆ ಎಂದು ತಿಳಿಸಿದ ವೈದ್ಯರು, ಮತ್ತೊಬ್ಬ ಬಾಡಿಗೆ ತಾಯಿ ಹುಡುಕುವ ಭರವಸೆ ನೀಡಿದರು. ಆಗ ಸಂಶಯಗೊಂಡ ಸುಜಯ್ ಮತ್ತು ಪಾಲಕರು ಹಣ ವಾಪಸ್ ಕೊಡುವಂತೆ ಕೋರಿದರು. ಆಗ ತಂದೆ ಒಬ್ಬರೇ ಇದ್ದರೆ ಮಗು ಕೊಡಲು ಆಗುವುದಿಲ್ಲ ಎಂದು ಕಾನೂನು ತೊಡಕಿನ ನೆಪ ಹೇಳಿದ ಕೇಂದ್ರ ಹಣ ವಾಪಸ್ ಕೊಡಲಿಲ್ಲ. ಆಗ ಸುಜಯ್ ಗ್ರಾಹಕ ನ್ಯಾಯಾಲಯದ ಮೊರೆ ಹೋದರು.
ಅಂತಿಮವಾಗಿ ವಿಚಾರಣೆ ನಡೆಸಿದ ಗ್ರಾಹಕ ನ್ಯಾಯಾಲಯ 4.75 ಲಕ್ಷ ಹಣವನ್ನು ಶೇ.10 ರಷ್ಡು ಬಡ್ಡಿಯ ಸಮೇತ ಹಾಗೂ 3 ಲಕ್ಷ ರೂಪಾಯಿ ಪರಿಹಾರವನ್ನು ಆರು ವಾರಗಳಲ್ಲಿ ಪಾವತಿಸಲು ಆದೇಶ ನೀಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications