ಇಬ್ಬರು ಸ್ವಾಮಿಗಳ ಕೈಯಲ್ಲಿ ಅಮ್ಮನ ರಾಜಕೀಯ ಭವಿಷ್ಯ!
ಬೆಂಗಳೂರು, ಮೇ.11: ಸುಮಾರು 19 ವರ್ಷಗಳ ಕಾಲ ಕಾನೂನು ಸಮರದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರಿಗೆ ಅಂತಿಮವಾಗಿ ಜಯ ಲಭಿಸಿದೆ. ಈ ಸುದೀರ್ಘದ ಹೋರಾಟದಲ್ಲಿ ಒಬ್ಬ ಸ್ವಾಮಿ ಜಯಾಗೆ ಜೈಲು ದರ್ಶನ ಮಾಡಿಸಿದರೆ, ಮತ್ತೊಬ್ಬ ಸ್ವಾಮಿಗಳು ಕೇಸಿನಿಂದ 'ನಿರ್ದೋಷಿ' ಎಂದು ಆದೇಶ ಇತ್ತಿದ್ದಾರೆ.
ಮೇ. 11ರ ಬೆಳಗ್ಗೆ ಕರ್ನಾಟಕ ಹೈಕೋರ್ಟಿನ ಜಡ್ಜ್ ಸಿ.ಆರ್ ಕುಮಾರಸ್ವಾಮಿ ಅವರು ಎರಡು ಸಾಲಿನ ಆದೇಶ ಓದಿ, ಜೆ ಜಯಲಲಿತಾ ಸೇರಿದಂತೆ ನಾಲ್ವರು ಅಪರಾಧಿಗಳನ್ನು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಿರ್ದೋಷಿಗಳು ಎಂದು ಘೋಷಿಸಿದರು.
ಜಾಮೀನು ಸಿಕ್ಕಿದ್ದೇಕೆ?: ಜಯಾ ವಿರುದ್ಧ ಸೂಕ್ತ ದಾಖಲೆಗಳಿಲ್ಲ. ಜಯಾ ಸಲ್ಲಿಸಿದ ಆಸ್ತಿ ಗಳಿಕೆ ವಿವರಗಳಲ್ಲಿ ಯಾವುದೇ ದೋಷ ಕಂಡು ಬಂದಿಲ್ಲ. ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ಅದೇಶದಲ್ಲಿ ಹೇಳಿದಂತೆ ಜಯಾ ಅವರು ಇಲ್ಲಿ ತನಕ ನಡೆದುಕೊಂಡಿದ್ದಾರೆ, ಹೀಗಾಗಿ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳನ್ನು ನಿರ್ದೋಷಿ ಎಂದು ಪರಿಗಣಿಸಬೇಕಾಗಿದೆ ಎಂದು ಕುಮಾರಸ್ವಾಮಿ ಆದೇಶಿಸಿದ್ದಾರೆ.

ಜನತಾ ಪಾರ್ಟಿ ನಾಯಕರಾಗಿದ್ದ(ಈಗ ಬಿಜೆಪಿ ಸೇರಿರುವ) ಡಾ. ಸುಬ್ರಮಣ್ಯಂ ಸ್ವಾಮಿ ಅವರು ಜಯಲಲಿತಾ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಪ್ರಮಾನದಲ್ಲಿ 66.65 ಕೋಟಿ ರು ಆಸ್ತಿಯನ್ನು ಅಕ್ರಮವಾಗಿ ಗಳಿಕೆ(1991 ರಿಂದ 1996ರ ಅವಧಿ) ಮಾಡಿರುವ ಆರೋಪ ಹೊರೆಸಿ ಕೇಸ್ ದಾಖಲಿಸಿದರು. ಅಲ್ಲಿಂದ ಇಂದಿನ ತನಕ ಜಯಲಲಿತಾ ಅವರಿಗೆ 'ಸ್ವಾಮಿ' ಭೀತಿ ಎದುರಾಗಿತ್ತು. [ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಟೈಮ್ ಲೈನ್]
ಸೆ.27,2014ರಂದು ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ಅವರು ಜಯಲಲಿತಾ, ಶಶಿಕಲಾ, ಇಳವರಸಿ, ದಿನಕರನ್ ಅವರ ವಿರುದ್ದ ಮಾಡಲಾಗಿರುವ ಆರೋಪ ಭ್ರಷ್ಟಾಚಾರ ತಡೆ ಖಾಯ್ದೆ ಸೆಕ್ಷನ್ 13(1)ಇ ಅಡಿ ಸಾಬೀತಾಗಿದೆ ಎಂದು ತೀರ್ಪು ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದಾದ ಬಳಿಕ ಸುಪ್ರೀಂಕೋರ್ಟಿನಲ್ಲಿ ಜಾಮೀನು ಪಡೆದು ಪರಪ್ಪನ ಅಗ್ರಹಾರದಿಂದ ಚೆನ್ನೈನ ಪೊಯಿಸ್ ಗಾರ್ಡನ್ ನಿವಾಸಕ್ಕೆ ತೆರಳಿ ಸೈಲಂಟ್ ಆಗಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ 21 ದಿನಗಳನ್ನು ಕಳೆದ ಜಯಲಲಿತಾ ಅವರು ಅನಾರೋಗ್ಯಕ್ಕೆ ಟ್ರೀಟ್ ಮೆಂಟ್ ತೆಗೆದುಕೊಳ್ಳತೊಡಗಿದ್ದರು. [ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಮ್ಮ?]
ಸುಪ್ರೀಂಕೋರ್ಟ್ ಆದೇಶದ ಅನ್ವಯ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಏಕಸದಸ್ಯ ಪೀಠ ಜ.5ರಂದು ವಿಚಾರಣೆ ಆರಂಭಿಸಿತು. ಈ ನಡುವೆ ಎಸ್ ಪಿಪಿ ನೇಮಕ ಗೊಂದಲ ಮತ್ತೊಮ್ಮೆ ವಿಚಾರಣೆ ವಿಳಂಬಗೊಳಿಸಿತು. ಕೊನೆಗೂ ಈಗ ಅಂತಿಮ ಘಟ್ಟ ತಲುಪಿ ಫಲಿತಾಂಶ ಮೇ.11ರ ಬೆಳಗ್ಗೆ ಜಯಾ ಪರವಾಗಿ ಹೊರಬಿದ್ದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications