ಡಿಆರ್ ಡಿಓ ಡೈರೆಕ್ಟರ್ ಆಗಿ ಜೆ. ಮಂಜುಳಾ ನೇಮಕ
ಬೆಂಗಳೂರು, ಸೆಪ್ಟೆಂಬರ್, 09 : ಡಿಆರ್ ಡಿಓ (defeance Research and Development Organization) ಸಂಸ್ಥೆಯ ನಿರ್ದೇಶಕ ಹುದ್ದೆಗೆ ಇದೇ ಮೊದಲ ಬಾರಿ ಒಬ್ಬ ಮಹಿಳೆ ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಿದ್ದಾರೆ.
ದಿಆರ್ ಡಿಓ ಸಂಸ್ಥೆಗೆ ನೂತನ ಡೈರೆಕ್ಟರ್ ಜನರಲ್ ಆಗಿ ನೇಮಕವಾದ ಜೆ. ಮಂಜುಳ ಅವರು ಮೊದಲು ಬೆಂಗಳೂರಿನ ಡಿಎಆರ್ ಇ (Defence Avionics Research Establishment) ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ ಕ್ಲಸ್ಟರ್ ಆಗಿ ಅಧಿಕಾರಿ ವಹಿಸಿಕೊಳ್ಳಲಿದ್ದಾರೆ.[ಭಾರತೀಯ ಮೂಲದ ಮಹಿಳೆ ಟ್ವಿಟರ್ ಸಿಇಓ ಆಗ್ತಾರಾ?]

ಈ ಮೊದಲು ವಿಶೇಷ ವಿಜ್ಞಾನಿಯಾಗಿ ಹಾಗೂ ಡೈರೆಕ್ಟರ್ ಜನರಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಡಿ ನಾಯಕ್ ಅವರ ಸ್ಥಾನವನ್ನು ಸಿ. ಜೆ ಮಂಜುಳ ನಿರ್ವಹಿಸಲಿದ್ದು, ಆರು ಪ್ರಾಯೋಗಾಲಯಗಳ ಹೆಚ್ಚುವರಿ ಅಧಿಕಾರಿಯಾಗಿ ಮುನ್ನಡೆಯಲಿದ್ದಾರೆ.
ಮಂಜುಳ ಅವರು ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಷನ್ ಪದವಿಯನ್ನು ಅಲ್ಯೂಮ್ನ ಆಫ್ ಒಸ್ಮಾನಿಯಾ ವಿಶ್ವವಿದ್ಯಾಲಯದಿಂದ ಪಡೆದಿದ್ದಾರೆ. ಡಿಆರ್ ಡಿಓ ಸಂಸ್ಥೆಗೆ 1987ರ ನಂತರ ಸೇರಿದ ಇವರು ಇದಕ್ಕೂ ಮೊದಲು ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಲಿಟೆಡ್ ನಲ್ಲಿ ಅಲ್ಪಾವಧಿ ಸೇವೆ ಸಲ್ಲಿಸಿದ್ದಾರೆ.[ಮೋದಿ ಸಲಹೆ: ಡಿಆರ್ ಡಿಓ ನಡೆ ಏನು?]
ಹೈದರಾಬಾದಿನ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ರಿಸರ್ಚ್ ಲ್ಯಾಬೋರೇಟರಿ ಸಂಸ್ಥೆಯಲ್ಲಿಯೂ ಅಧಿಕಾರ ನಿರ್ವಹಿಸಿದ ಮಂಜುಳ ವೇಗದ ಸಿಗ್ನಲ್ ವ್ಯವಸ್ಥೆ , ಆರ್ ಎಫ್ (Radio Frequency) ವ್ಯವಸ್ಥೆ, ಮಿಲಿಟರಿ ಮತ್ತು ಪ್ಯಾರಾ ಮಿಲಿಟರಿ ಬಳಸುವ ವಿವಿಧ ವ್ಯವಸ್ಥೆಗೆ ನಿಯಂತ್ರಕ ತಂತ್ರಾಂಶ ಅಭಿವೃದ್ಧಿಕಾರರಾಗಿ ಕಾರ್ಯನಿರ್ವಹಿಸಿದ್ದಾರೆ.
ಮಂಜುಳಾ ಅವರ ವಿಶೇಷ ಆಸಕ್ತಿ ಕ್ಷೇತ್ರ ಕಾನ್ಫಿಗರೇಷನ್ ಆಫ್ ಕಮ್ಯೂನಿಕೇಶನ್ ಮತ್ತು ರಾಡರ್ ಇಎಸ್ಎಂ (Electronic Support Measures) ಮತ್ತು ಇಸಿಎಂ( Electronic Contract Manufacturing) ಆಗಿದೆ. ಇವರ ಅದ್ಭುತ ಸೇವೆಯನ್ನು ಪರಿಗಣಿಸಿದ ಡಿಆರ್ ಡಿ ಓ ಸಂಸ್ಥೆಯು 2011ರಲ್ಲಿ ಉತ್ತಮ ವಿಜ್ಞಾನಿ ಎಂಬ ಪ್ರಶಸ್ತಿ ನೀಡಿ ಗೌರವಿಸಿದೆ. ಜೊತೆಗೆ 2014ರಲ್ಲಿ ವುಮೆನ್ ಅಮಿತ್ ಪ್ರಶಸ್ತಿಯೂ ಸಂದಿದೆ.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications