ಮೇ.23ರಿಂದ ಲಾಲ್ಬಾಗ್ನಲ್ಲಿ ಮಾವು ಹಲಸು ಮೇಳ
ಬೆಂಗಳೂರು, ಮೇ 21: ಬೆಂಗಳೂರಿನ ಮಾವು ಹಲಸು ಪ್ರೇಮಿಗಳಿಗೆ ಮತ್ತೊಂದು ಗುಡ್ ನ್ಯೂಸ್. ಕಳೆದ ತಿಂಗಳಿನಿಂದ ನಗರದ ವಿವಿಧ ಕಡೆಗಳಲ್ಲಿ ನಡೆಯುತ್ತಿದ್ದ ಮಾವು ಮತ್ತು ಹಲಸು ಮೇಳ ಈಗ ಲಾಲ್ಬಾಗ್ನಲ್ಲಿ ಆರಂಭವಾಗಲಿದೆ
ಮಾವು ಮತ್ತು ಹಲಸು ಬೆಳೆಗಾರರು ಹಾಗೂ ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸಿ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಹಣ್ಣನ್ನು ದೊರಕಿಸಿಕೊಡುವ ಉದ್ದೇಶದಿಂದ ಮೇ. 23ರಿಂದ ಜೂನ್ 15ರವರೆಗೆ ಈ ಮೇಳ ನಡೆಯಲಿದೆ.
ತೋಟಗಾರಿಕೆ ಇಲಾಖೆ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, ಹಾಪ್ಕಾಮ್ಸ್ ಇವರುಗಳ ಸಂಯುಕ್ತಾಶ್ರಯದಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ .

ರಾಸಾಯನಿಕ ಬಳಸದೇ ಸಹಜವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಮಾತ್ರ ಮೇಳದಲ್ಲಿ ಮಾರಾಟ ಮಾಡಲಾಗುವುದು. ಒಂದು ವೇಳೆ ರೈತರು ಮೋಸ ಮಾಡಿ ರಾಸಾಯನಿಕ ಬಳಸಿ ಮಾವನ್ನು ಹಣ್ಣು ಮಾಡಿದ್ದರೆ, ಅಂತಹ ಹಣ್ಣುಗಳ ಮಾರಾಟವನ್ನು ಸಂಪೂರ್ಣ ನಿಷೇಧಿಸಿದಲಾಗಿದೆ. ಮಾರಾಟಗಾರರಿಗೆ ಈಗಾಗಲೇ ಈ ಸೂಚನೆ ನೀಡಿದ್ದು ಸೂಚನೆ ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ಮೇಳದಲ್ಲಿ 90 ಸುಸಜ್ಜಿತ ಮಾರಾಟ ಮಳಿಗೆಗಳನ್ನು ಸಜ್ಜುಗೊಳಿಸಲಾಗಿದ್ದು, 75 ಮಳಿಗೆ ಮಾವಿನ ಹಣ್ಣಿಗೆ ಮೀಸಲಾದರೆ, 15 ಮಳಿಗೆಯಲ್ಲಿ ಹಲಸಿನ ಹಣ್ಣಿನ ಮಾರಾಟ ಮಾಡಲಾಗುತ್ತದೆ. ಬೆಳಗ್ಗೆ 8 ರಿಂದ ಸಂಜೆ 7ರವರೆಗೆ ಮಳಿಗೆಗಳು ತೆರೆದಿದ್ದು, ಗ್ರಾಹಕರು ಯೋಗ್ಯವಾದ ದರದಲ್ಲಿ ತಾಜಾ ಹಣ್ಣುಗಳನ್ನು ಖರೀದಿಸಬಹುದಾಗಿದೆ.
ಮೇಳದಲ್ಲಿ ವಿವಿಧ ಮಾವಿನ ತಳಿಗಳ ಸಿಂಧೂರ, ಮಲ್ಗೊಬಾ, ಬಾದಾಮಿ, ನೀಲಂ, ಮಲ್ಲಿಕಾ ಹಾಗೂ ಹಲಸಿನಲ್ಲಿ ಸ್ವರ್ಣ, ಲಾಲ್ಬಾಗ್ ಮಧುರ ತಳಿಯ ಹಣ್ಣುಗಳನ್ನು ಮಾರಾಟ ನಡೆಯಲಿದೆ. ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶ್ಯಾಮನೂರು ಶಿವಶಂಕರಪ್ಪ ಶುಕ್ರವಾರ ಮೇಳಕ್ಕೆ ಚಾಲನೆ ನೀಡಲಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications