ಮೇ.23ರಿಂದ ಲಾಲ್ಬಾಗ್ನಲ್ಲಿ ಮಾವು ಹಲಸು ಮೇಳ
ಬೆಂಗಳೂರು, ಮೇ 21: ಬೆಂಗಳೂರಿನ ಮಾವು ಹಲಸು ಪ್ರೇಮಿಗಳಿಗೆ ಮತ್ತೊಂದು ಗುಡ್ ನ್ಯೂಸ್. ಕಳೆದ ತಿಂಗಳಿನಿಂದ ನಗರದ ವಿವಿಧ ಕಡೆಗಳಲ್ಲಿ ನಡೆಯುತ್ತಿದ್ದ ಮಾವು ಮತ್ತು ಹಲಸು ಮೇಳ ಈಗ ಲಾಲ್ಬಾಗ್ನಲ್ಲಿ ಆರಂಭವಾಗಲಿದೆ
ಮಾವು ಮತ್ತು ಹಲಸು ಬೆಳೆಗಾರರು ಹಾಗೂ ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸಿ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಹಣ್ಣನ್ನು ದೊರಕಿಸಿಕೊಡುವ ಉದ್ದೇಶದಿಂದ ಮೇ. 23ರಿಂದ ಜೂನ್ 15ರವರೆಗೆ ಈ ಮೇಳ ನಡೆಯಲಿದೆ.
ತೋಟಗಾರಿಕೆ ಇಲಾಖೆ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, ಹಾಪ್ಕಾಮ್ಸ್ ಇವರುಗಳ ಸಂಯುಕ್ತಾಶ್ರಯದಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ .

ರಾಸಾಯನಿಕ ಬಳಸದೇ ಸಹಜವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಮಾತ್ರ ಮೇಳದಲ್ಲಿ ಮಾರಾಟ ಮಾಡಲಾಗುವುದು. ಒಂದು ವೇಳೆ ರೈತರು ಮೋಸ ಮಾಡಿ ರಾಸಾಯನಿಕ ಬಳಸಿ ಮಾವನ್ನು ಹಣ್ಣು ಮಾಡಿದ್ದರೆ, ಅಂತಹ ಹಣ್ಣುಗಳ ಮಾರಾಟವನ್ನು ಸಂಪೂರ್ಣ ನಿಷೇಧಿಸಿದಲಾಗಿದೆ. ಮಾರಾಟಗಾರರಿಗೆ ಈಗಾಗಲೇ ಈ ಸೂಚನೆ ನೀಡಿದ್ದು ಸೂಚನೆ ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ಮೇಳದಲ್ಲಿ 90 ಸುಸಜ್ಜಿತ ಮಾರಾಟ ಮಳಿಗೆಗಳನ್ನು ಸಜ್ಜುಗೊಳಿಸಲಾಗಿದ್ದು, 75 ಮಳಿಗೆ ಮಾವಿನ ಹಣ್ಣಿಗೆ ಮೀಸಲಾದರೆ, 15 ಮಳಿಗೆಯಲ್ಲಿ ಹಲಸಿನ ಹಣ್ಣಿನ ಮಾರಾಟ ಮಾಡಲಾಗುತ್ತದೆ. ಬೆಳಗ್ಗೆ 8 ರಿಂದ ಸಂಜೆ 7ರವರೆಗೆ ಮಳಿಗೆಗಳು ತೆರೆದಿದ್ದು, ಗ್ರಾಹಕರು ಯೋಗ್ಯವಾದ ದರದಲ್ಲಿ ತಾಜಾ ಹಣ್ಣುಗಳನ್ನು ಖರೀದಿಸಬಹುದಾಗಿದೆ.
ಮೇಳದಲ್ಲಿ ವಿವಿಧ ಮಾವಿನ ತಳಿಗಳ ಸಿಂಧೂರ, ಮಲ್ಗೊಬಾ, ಬಾದಾಮಿ, ನೀಲಂ, ಮಲ್ಲಿಕಾ ಹಾಗೂ ಹಲಸಿನಲ್ಲಿ ಸ್ವರ್ಣ, ಲಾಲ್ಬಾಗ್ ಮಧುರ ತಳಿಯ ಹಣ್ಣುಗಳನ್ನು ಮಾರಾಟ ನಡೆಯಲಿದೆ. ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶ್ಯಾಮನೂರು ಶಿವಶಂಕರಪ್ಪ ಶುಕ್ರವಾರ ಮೇಳಕ್ಕೆ ಚಾಲನೆ ನೀಡಲಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications