ಭಾಗವತ್ ಬೆಂಬಲಿಸಿ ಮೋದಿಗೆ ಜಾಫರ್ ಷರೀಫ್ ಪತ್ರ
ಮೋಹನ್ ಭಾಗವತ್ ಅವರಲ್ಲಿರುವ ದೇಶಭಕ್ತಿಯನ್ನು ಯಾರೂ ಪ್ರಶ್ನಿಸುವಂತಿಲ್ಲ. ಈ ದೇಶದ ಪ್ರಜೆಗಳ ಬಗ್ಗೆ ಅವರಿಗೆ ಅಪಾರ ಪ್ರೀತಿ ಇದೆ. ಅಷ್ಟೇ ಅಲ್ಲ, ದೇಶಕ್ಕೆ ನಿಷ್ಠರು'' ಎಂದು ಷರೀಫ್ ಅವರು ಪತ್ರದಲ್ಲಿ ಹೇಳಿದ್ದಾರೆ.
ಬೆಂಗಳೂರು, ಏಪ್ರಿಲ್ 1: ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫರ್ ಷರೀಫ್, ರಾಷ್ಟ್ರಪತಿ ಹುದ್ದೆಗೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೇ ಸೂಕ್ತ ಎಂದು ತಿಳಿಸಿದ್ದಾರೆ.
''ಮೋಹನ್ ಭಾಗವತ್ ಅವರನ್ನು ರಾಷ್ಟ್ರಪತಿ ಹುದ್ದೆಗೆ ಬೆಂಬಲಿಸುವ ಬಗ್ಗೆ ಈ ಸಂದರ್ಭದಲ್ಲಿ ನಾನಾ ಅಭಿಪ್ರಾಯಗಳು ವ್ಯಕ್ತವಾಗಿದೆ. ದೊಡ್ಡ ದೇಶವೊಂದರಲ್ಲಿ ಇಂಥ ಭಿನ್ನ ಅಭಿಪ್ರಾಯಗಳು ಸರ್ವೇ ಸಾಮಾನ್ಯ. ಆದರೆ, ಮೋಹನ್ ಭಾಗವತ್ ಅವರಲ್ಲಿರುವ ದೇಶಭಕ್ತಿಯನ್ನು ಯಾರೂ ಪ್ರಶ್ನಿಸುವಂತಿಲ್ಲ. ಈ ದೇಶದ ಪ್ರಜೆಗಳ ಬಗ್ಗೆ ಅವರಿಗೆ ಅಪಾರ ಪ್ರೀತಿ ಇದೆ. ಅಷ್ಟೇ ಅಲ್ಲ, ದೇಶಕ್ಕೆ ನಿಷ್ಠರು'' ಎಂದು ಷರೀಫ್ ಅವರು ಪತ್ರದಲ್ಲಿ ಹೇಳಿದ್ದಾರೆ.

ಶಿವಸೇನೆಯು ಮೋಹನ್ ಭಾಗವತ್ ಅವರನ್ನು ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಅಭ್ಯರ್ಥಿಯನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿದೆ.
ಆದರೆ, ಮೋಹನ್ ಭಾಗವತ್ ಅವರನ್ನು ರಾಷ್ಟ್ರಪತಿ ಚುನಾವಣೆಗೆ ನಿಲ್ಲಿಸಿದರೆ, ತಾನು ಬೆಂಬಲಿಸುವುದಿಲ್ಲವೆಂದು ಈಗಾಗಲೇ ಕಾಂಗ್ರೆಸ್ ಪಕ್ಷ ಸ್ಪಷ್ಟಪಡಿಸಿದೆ.
ಅದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಜಾಫರ್ ಷರೀಫ್ ಅವರೀಗ ಭಾಗವತ್ ಅವರನ್ನು ಬೆಂಬಲಿಸಿ ಮೋದಿಯವರಿಗೆ ಪತ್ರ ಬರೆಯುವ ಮೂಲಕ ಪಕ್ಷದ ನಾಯಕರಿಗೆ ಬಹಿರಂಗವಾಗಿಯೇ ಸಡ್ಡು ಹೊಡೆದಿದ್ದಾರೆ.
ಅತ್ತ, ಮೋಹನ್ ಭಾಗವತ್ ಅವರು ''ತಾವು ರಾಷ್ಟ್ರಪತಿ ಹುದ್ದೆಯ ಆಕಾಂಕ್ಷಿಯಲ್ಲ'' ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications