ನರಭಕ್ಷಕ ಹುಲಿ ಕಾಡಿಗೆ ಬಿಟ್ಟಿದ್ದು ಏಕೆ : ಶೆಟ್ಟರ್ ಗರಂ
ಬೆಂಗಳೂರು, ಡಿ. 27: ಬೆಳಗಾವಿಯಲ್ಲಿ ಗೃಹಿಣಿಯೋರ್ವಳನ್ನು ಬಲಿ ಪಡೆದಿರುವ ಹುಲಿಯನ್ನು ಜನವಸತಿ ಸಮೀಪದ ಅರಣ್ಯ ಪ್ರದೇಶದಲ್ಲಿ ಬಿಟ್ಟಿರುವುದಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹುಲಿ ಆಗಲೇ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲ್ಲಂದೂರು ಅರಣ್ಯ ಪ್ರದೇಶದಲ್ಲಿ ಓರ್ವ ಮಹಿಳೆಯನ್ನು ಹತ್ಯೆ ಮಾಡಿತ್ತು. ಆಗ ಹುಲಿ ಹಿಡಿದಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಖಾನಾಪುರ ಅರಣ್ಯಕ್ಕೆ ತಂದು ಬಿಟ್ಟರು. ಇದರಿಂದ ಮತ್ತೋರ್ವ ಮಹಿಳೆ ಬಲಿಯಾಗಬೇಕಾಯಿತು ಎಂದು ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. [ಚಿಕ್ಕಮಗಳೂರು ಹುಲಿಗೆ ಬೆಳಗಾವಿ ಮಹಿಳೆ ಬಲಿ]
ಈ ಹುಲಿಗೆ ರೇಡಿಯೋ ಕಾಲರ್ ಐಡಿ ಹಾಕಲಾಗಿತ್ತು ಎಂದು ಅರಣ್ಯ ಇಲಾಖೆ ತಿಳಿಸಿದೆ. ಆದರೆ, ಈಗ ರೇಡಿಯೋ ಕಾಲರ್ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಆದ್ದರಿಂದ ಹುಲಿ ಪತ್ತೆ ಶೀಘ್ರ ಸಾಧ್ಯವಾಗುತ್ತಿಲ್ಲ ಎಂದು ಹೇಳುತ್ತಿದೆ. ಆದ್ದರಿಂದ ಇಲ್ಲಿ ತಪ್ಪು ಯಾರದ್ದು ಎಂಬುದರ ಕುರಿತು ಸಿಐಡಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಅರಣ್ಯ ಇಲಾಖೆ ಕ್ರಮ ಸರಿಯಲ್ಲ : ನರಭಕ್ಷಕ ಹುಲಿಯನ್ನು ಬೆಳಗಾವಿಗೆ ಸ್ಥಳಾಂತರಿಸಿದ್ದೇ ಸರಿಯಲ್ಲ ಎಂದು ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಆರೋಪಿಸಿದ್ದಾರೆ. [ನರಭಕ್ಷಕ ಹುಲಿ ಇನ್ನೂ ಸಿಕ್ಕಿಲ್ಲ]
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹುಲಿಗೆ ಮನುಷ್ಯರ ಭಯವಿರಲಿಲ್ಲ. ಇಂತಹ ಹುಲಿಯನ್ನು ಪುನಃ ಕಾಡಿಗೆ ಬಿಟ್ಟಿದ್ದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಈ ಹುಲಿ ತಾಯಿಯಿಂದ ಬೇಟೆ ವಿದ್ಯೆ ಕಲಿತಿಲ್ಲ. ಆದ್ದರಿಂದ ಕೇವಲ 2 ವರ್ಷ ವಯಸ್ಸಿನಲ್ಲಿಯೇ ಜಾನುವಾರು ಹಾಗೂ ಮನುಷ್ಯರ ಮೇಲೆ ದಾಳಿ ನಡೆಸುತ್ತಿದೆ. ಆದ್ದರಿಂದ ಈ ಹುಲಿಯನ್ನು ಹತ್ಯೆ ಮಾಡುವುದೇ ಸರಿಯಾದ ಮಾರ್ಗ ಎಂದು ಉಲ್ಲಾಸ್ ಕಾರಂತ್ ಹೇಳಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications