ವಿಧಾನಸಭೆಯಲ್ಲಿ ಯಡಿಯೂರಪ್ಪ ಪರ ವಹಿಸಿದ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿಯರು ವಿಧಾನಸಭೆಯಲ್ಲಿ ಇದ್ದಕ್ಕಿದ್ದಂತೆ ಬಿಎಸ್ ವೈ ಪರ ವಹಿಸಿ ಮಾತನಾಡಿರುವುದು ರಾಜಕೀಯ ವಲಯದಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಲ್ಲದೆ ಕುತೂಹಲವನ್ನು ಮೂಡಿಸಿದೆ.
ಬೆಂಗಳೂರು, ಫೆಬ್ರವರಿ 11: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪ್ರಕರಣ ಕುರಿತು ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಬಿಎಸ್ ವೈ ಪರ ವಹಿಸಿಕೊಂಡು ವಿಧಾನಸಭೆಯಲ್ಲಿ ಮಾತನಾಡಿದ್ದಾರೆ.
'ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾದ ಪ್ರಕರಣದಲ್ಲಿ ವಾದ-ಪ್ರತಿವಾದಕ್ಕೆ ನ್ಯಾಯಾಲಯ ಅವಕಾಶ ನೀಡದೇ ಏಕಾಏಕಿ ಅವರನ್ನು ಜೈಲಿಗೆ ಹಾಕಿದ್ದು ಸರಿಯಲ್ಲ' ಎಂದು ವಿಧಾನಸಭೆಯಲ್ಲಿ ಶುಕ್ರವಾರ ಹೇಳಿದರು. ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಅವರು ಬಿಎಸ್ ವೈ ಅವರು ಜೈಲಿನಿಂದ ಬಿಡುಗಡೆಯಾದಾಗ 'ವಿಕ್ಟರಿ' ಚಿಹ್ನೆ ತೋರಿಸಿದ್ದನ್ನು ವ್ಯಂಗ್ಯ ಮಾಡಿದ್ದರು. ಯಾರನ್ನೂ ಈ ರೀತಿ ಟೀಕೆಗೆ ಗುರಿಪಡಿಸಬಾರದು ಎಂದು ಎಚ್ ಡಿಕೆ ಆಕ್ಷೇಪಿಸಿದರು.[ಬದ್ಧತೆಯಿಲ್ಲದ ರಾಜ್ಯಪಾಲರ ಭಾಷಣ; ಕುಮಾರಸ್ವಾಮಿ ವ್ಯಂಗ್ಯ]

ಯಡಿಯೂರಪ್ಪನವರು 23 ದಿನ ಜೈಲಿನಲ್ಲಿದ್ದಾಗ ನಾನು ಖುಷಿ ಪಡಲಿಲ್ಲ, ವಿಚಾರಣೆ ಪೂರ್ಣವಾಗುವ ಮುನ್ನವೇ ತಪ್ಪಿತಸ್ಥ ಎಂದು ಸಾಬೀತಾಗುವ ಮುನ್ನವೇ ಜೈಲಿಗೆ ಕಳುಹಿಸಲಾಯಿತು. ನನ್ನ ಮೇಲೂ 3-4 ಪ್ರಕರಣಗಳಿವೆ. ಕ್ರಿಮಿನಲ್ ಪ್ರಕರಣಗಳನ್ನು ದುರುದ್ದೇಶ ಪೂರ್ವಕವಾಗಿ ದಾಖಲು ಮಾಡಲಾಗುತ್ತದೆ ಎಂದು ಅವರು ಹೇಳಿದರು. ಹಿಂದೆ ಅವರಿಗೆ ಆಗಿರುವುದು ಮುಂದೇ ಇಲ್ಲಿರುವ ಯಾರಿಗೂ ಆಗಬಾರದು ಎಂದು ತಿಳಿಸಿದರು.
ಎಚ್ ಡಿ ಕುಮಾರಸ್ವಾಮಿಯರು ಇದ್ದಕ್ಕಿದ್ದಂತೆ ಬಿಎಸ್ ವೈ ಪರ ವಹಿಸಿರುವುದು ರಾಜಕೀಯ ವಲಯದಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಲ್ಲದೆ ಕುತೂಹಲವನ್ನು ಮೂಡಿಸಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications