ಶಶಿಕಲಾಗೆ ವಿಶೇಷ ಸವಲತ್ತು ನೀಡಲು ಸೂಚಿಸಿರಲಿಲ್ಲ: ಸಿದ್ದರಾಮಯ್ಯ

Recommended Video

      ಶಶಿಕಲಾ ನಟರಾಜನ್ ಗೆ ರಾಜಾತಿಥ್ಯ ಕೊಡುವ ಸಿದ್ದರಾಮಯ್ಯ ಹೇಳಿಕೆ | Oneindia Kannada

      ಬೆಂಗಳೂರು, ಮಾರ್ಚ್ 07: ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡುವಂತೆ ಬಂಧೀಖಾನೆ ಇಲಾಖೆಯ ಅಂದಿನ ಡಿಜಿಪಿಗೆ ನಾನು ಸೂಚನೆ ನೀಡಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

      ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಶಶಿಕಲಾ ಅವರಿಗೆ ಹಾಸಿಗೆ ಮತ್ತು ದಿಂಬು ಸೌಲಭ್ಯ ಒದಗಿಸಿದ್ದಾಗಿ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ಅವರು ನೀಡಿರುವ ಹೇಳಿಕೆ ಸುಳ್ಳು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

      ಶಶಿಕಲಾ ಅವರಿಗೆ ಕಾರಾಗೃಹದಲ್ಲಿ ಮೂಲಭೂತ ಸೌಕರ್ಯಗಳನ್ನೂ ಒದಗಿಸಿಲ್ಲ ಎಂದು ತಮಿಳುನಾಡಿನ ಒಂದು ನಿಯೋಗ ತಮ್ಮ ಕಚೇರಿಗೆ ಬಂದು ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಹಾಗೂ ಜೈಲಿನ ಮ್ಯಾನುಯಲ್ ಪ್ರಕಾರ ಒದಗಿಸಬೇಕಾದ ಸೌಲಭ್ಯಗಳನ್ನು ಮಾತ್ರ ಶಶಿಕಲಾ ಅವರಿಗೆ ಕೊಡುವಂತೆ ಸತ್ಯನಾರಾಯಣರಾವ್ ಅವರಿಗೆ ಸೂಚಿಸಲಾಗಿತ್ತು. ಆದರೆ, ರಾಜಾತಿಥ್ಯ ಒದಗಿಸುವಂತೆ ಹೇಳಿರಲಿಲ್ಲ ಎಂದು ಹೇಳಿದರು.

      Jail row: Siddaramaiah denies former DIG allegation

      ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳ ತನಿಖೆಯನ್ನು ಎಸಿಬಿಗೆ ವಹಿಸಲಾಗಿದೆ. ಹೀಗಾಗಿ ಸತ್ಯನಾರಾಯಣರಾವ್ ಅವರು ಆಧಾರ ರಹಿತ ಆರೋಪವನ್ನು ತಮ್ಮ ವಿರುದ್ಧ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+