ವಿಶ್ವಶಾಂತಿಗಾಗಿ ಜೈನ ಮುನಿಗಳ ನೇತೃತ್ವದಲ್ಲಿ 8 ದಿನಗಳ ಕಠಿಣ ಉಪವಾಸ
ಬೆಂಗಳೂರು ಆಗಸ್ಟ್ 1 2019: "ವಿಶ್ವದ ಎಲ್ಲಾ ಸಮಾಜದ ಮಾನವರಲ್ಲಿ ಹೆಚ್ಚಾಗುತ್ತಿರುವ ಸಂಘರ್ಷವನ್ನು ತಪ್ಪಿಸುವ ಮೂಲಕ ಸಮಾಜದ ವರ್ಗಗಳ ಮಧ್ಯೆ ಪ್ರೀತಿಯನ್ನು ಹರಡುವುದು ಇಂದಿನ ತುರ್ತು ಅಗತ್ಯವಾಗಿದೆ" ಎಂದು ಉಪಾಧ್ಯಾಯ್ ಪ್ರವೀಣ್ ಋಷಿಜಿ ಕರೆ ನೀಡಿದರು.
ನಗರದ ಅರಮನೆ ಮೈದಾನದಲ್ಲಿ ಗುರು ಆನಂದ ಚಾತುರ್ಮಾಸ ಸಮಿತಿ ಹಮ್ಮಿಕೊಂಡಿದ್ದ ಆಚಾರ್ಯ ಪೂಜ್ಯ ಆನಂದ್ ಋಷಿಜಿ ಅವರ 120 ನೇ ಜನ್ಮ ದಿನದ ಅಂಗವಾಗಿ ಆಯೋಜಿಸಲಾಗಿದ್ದ ವಿಶ್ವಶಾಂತಿಗಾಗಿ ಕಠಿಣ ಉಪವಾಸ ವ್ರತದ ಸಮಾರೋಪ ಸಮಾರಂಭದ ನೇತೃತ್ವವಹಿಸಿ ಅವರು ಮಾತನಾಡಿದರು.
ಇಂದಿನ ಪ್ರಸ್ತುತ ಕಾಲಘಟ್ಟದಲ್ಲಿ ಸಮಾಜದ ಮಾನವರ ಮಧ್ಯೆ ಸಂಘರ್ಷದ ಪರಿಸ್ಥಿತಿಗಳು ಹೆಚ್ಚಾಗುತ್ತಿವೆ. ಈ ಸಂಘರ್ಷಗಳನ್ನು ತಡೆಯುವ ಮೂಲಕ ಜನರ ಮಧ್ಯೆ ಪ್ರೀತಿಯನ್ನು ಬೆಳೆಸುವುದು ನಮ್ಮ ಉದ್ದೇಶವಾಗಿದೆ. ಈ ಕಠಿಣ ಉಪವಾಸ ವೃತದಲ್ಲಿ ಕುಷ್ಠರೋಗಿಗಳು, ಮಹಿಳೆಯರು, ವೃದ್ದರು ಪಾಲ್ಗೊಂಡಿದ್ದರು. ಕೇವಲ ನೀರು ಕುಡಿದು 192 ಗಂಟೆಗಳ ಕಾಲ ಉಪವಾಸ ಮಾಡುವುದು ಸುಲಭದ ಕೆಲಸವಲ್ಲ. ಆದರೆ, ತಮ್ಮ ಭಕ್ತಿಯ ಹಾಗೂ ವಿಶ್ವಶಾಂತಿಗಾಗಿ ಈ ವೃತವನ್ನು ಹಮ್ಮಿಕೊಂಡಿದ್ದರು. ಎಲ್ಲಾ ವರ್ಗ, ಜಾತಿಯ ಜನರು ಈ ಮಹತ್ ಕಾರ್ಯದಲ್ಲಿ ಪಾಲ್ಗೊಂಡಿದ್ದು ಬಹಳ ಸಂತಸದ ವಿಷಯ ಎಂದು ಹೇಳಿದರು.

ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರಚಾರದ ಹಿನ್ನಲೆಯಲ್ಲಿ ಗುರುದೇವ್ ಪ್ರವೀಣ್ ಜಿ ಅವರು ಪ್ರಾರ್ಥನೆಯ ನೇತೃತ್ವ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಉಪವಾಸ ನಿರತರೆಲ್ಲರೂ ವಿಶ್ವಶಾಂತಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜೈನ ಸಮುದಾಯದ 5 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD









Click it and Unblock the Notifications