ಜೈಪುರ-ಬೆಂಗಳೂರು ಇಂಡಿಗೋ ವಿಮಾನದಲ್ಲಿ ಗಗನಸಖಿಯೊಂದಿಗೆ ಅನುಚಿತ ವರ್ತನೆ!
ಬೆಂಗಳೂರು ನವೆಂಬರ್ 20: ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನ 6E556 ನಲ್ಲಿ ಗಗನಸಖಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ರಾಜಸ್ಥಾನದ ಸಿಕರ್ ಜಿಲ್ಲೆಯ ರಣಧೀರ್ ಸಿಂಗ್ ಎಂಬ 33 ವರ್ಷದ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ.
ಮದ್ಯದ ಅಮಲಿನಲ್ಲಿದ್ದ ಆರೋಪಿ ಬಂಧನದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ ಎನ್ನಲಾಗಿದೆ. ಭಾನುವಾರ ಸಂಜೆ ವಿಮಾನ ಟೇಕ್ ಆಫ್ ಆಗಿತ್ತು. ಆಗ ಮದ್ಯದ ಅಮಲಿನಲ್ಲಿದ್ದ ಸಿಂಗ್ ಪದೇ ಪದೇ ಗಗನಸಖಿಯ ಕೈ ಹಿಡಿದು ಅನುಚಿತ ವರ್ತನೆಯಲ್ಲಿ ತೊಡಗಿದ್ದರು ಎಂದು ಇಂಡಿಗೋ ಅಧಿಕಾರಿ ವರುಣ್ ಕುಮಾರ್ ಅವರು ಹೇಳಿದ್ದಾರೆ.

ಸಹ ಪ್ರಯಾಣಿಕರು ಸಿಂಗ್ ಅವರ ನಡವಳಿಕೆಯನ್ನು ಗಮನಿಸಿ ತಕ್ಷಣವೇ ವಿಮಾನ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು. ತರುವಾಯ ಫ್ಲೈಟ್ ಕ್ಯಾಪ್ಟನ್, ಸಿಂಗ್ ಅವರನ್ನು ಅಶಿಸ್ತಿನ ಪ್ರಯಾಣಿಕ ಎಂದು ತಿಳಿದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಸಿಂಗ್ ವಿರುದ್ಧ ದೂರು ದಾಖಲಿಸಿದ್ದಾರೆ. ವರುಣ್ ಕುಮಾರ್ ವಿಮಾನ ನಿಲ್ದಾಣ ಪೊಲೀಸರಿಗೆ ಅಧಿಕೃತವಾಗಿ ಈ ಬಗ್ಗೆ ವರದಿ ನೀಡಿದ್ದು ತರುವಾಯ ಭಾನುವಾರ ಸಿಂಗ್ ಅವರನ್ನು ಬಂಧಿಸಲಾಯಿತು.
ಇದೇ ರೀತಿಯ ಘಟನೆಗಳು
ಈ ವರ್ಷದ ಆರಂಭದಲ್ಲಿ ಪೊಲೀಸರು ವರದಿ ಮಾಡಿದಂತೆ, ಜೂನ್ 24 ರಂದು ಮುಂಬೈ-ದೆಹಲಿ ವಿಮಾನದಲ್ಲಿ ಮಲವಿಸರ್ಜನೆ, ಮೂತ್ರ ವಿಸರ್ಜನೆ ಮತ್ತು ಉಗುಳುವುದು ಸೇರಿದಂತೆ ವಿಚಿತ್ರ ನಡವಳಿಕೆಯಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಏರ್ ಇಂಡಿಯಾ ವಿಮಾನದಲ್ಲಿದ್ದ ಫ್ಲೈಯರ್ ಅನ್ನು ಬಂಧಿಸಲಾಗಿತ್ತು. ರಾಮ್ ಸಿಂಗ್ ಎಂದು ಗುರುತಿಸಲಾದ ವ್ಯಕ್ತಿ ವಿಮಾನದ 9 ನೇ ಸಾಲಿನಲ್ಲಿ ಕೃತ್ಯಗಳನ್ನು ಎಸಗಿದ್ದಾನೆ ಎಂದು ವರದಿಯಾಗಿದೆ.
ದುರ್ವರ್ತನೆಯನ್ನು ಗಮನಿಸಿದ ಕ್ಯಾಬಿನ್ ಸಿಬ್ಬಂದಿ ಸದಸ್ಯರು ತಕ್ಷಣವೇ ಎಚ್ಚರಿಕೆಯನ್ನು ನೀಡಿದರು ಮತ್ತು ಇತರ ಪ್ರಯಾಣಿಕರಿಂದ ಅವರನ್ನು ಪ್ರತ್ಯೇಕಿಸಿದರು. ಈ ಬಗ್ಗೆ ಪೈಲಟ್-ಇನ್-ಕಮಾಂಡ್ಗೆ ತಿಳಿಸಲಾಯಿತು.
ಈ ವರ್ತನೆಯು ಹಲವಾರು ಪ್ರಯಾಣಿಕರಲ್ಲಿ ಆಕ್ರೋಶವನ್ನು ಉಂಟುಮಾಡಿತು. ಬಳಿಕ ಆರೋಪಿ ಪ್ರಯಾಣಿಕನನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು) ಮತ್ತು 510 (ಕುಡಿತದ ವ್ಯಕ್ತಿಯಿಂದ ಸಾರ್ವಜನಿಕವಾಗಿ ದುರ್ವರ್ತನೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಮತ್ತೊಂದು ಘಟನೆಯಲ್ಲಿ ಸ್ಪೈಸ್ಜೆಟ್ ವಿಮಾನದಲ್ಲಿ ಇಬ್ಬರು ಪ್ರಯಾಣಿಕರು ಗಗನಸಖಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಐಜಿಐ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಅಬ್ಸರ್ ಆಲಂ ಎಂಬಾತನನ್ನು IPC ಸೆಕ್ಷನ್ 354 ರ ಅಡಿಯಲ್ಲಿ ಬಂಧಿಸಲಾಯಿತು. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ವೀಡಿಯೊವು ಪ್ರಯಾಣಿಕರೊಬ್ಬರು ಸಿಬ್ಬಂದಿಯ ಮೇಲೆ ಕೂಗಾಡುತ್ತಿರುವುದನ್ನು ತೋರಿಸುತ್ತದೆ. ಬೋರ್ಡಿಂಗ್ ಸಮಯದಲ್ಲಿ ಪ್ರಯಾಣಿಕರೊಬ್ಬರು ಕ್ಯಾಬಿನ್ ಸಿಬ್ಬಂದಿಗೆ ಕಿರುಕುಳ ನೀಡಿದ್ದರಿಂದ ಅವರನ್ನು ಬಂಧಿಸಲಾಯಿತು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಬೇಸಿಗೆಯಲ್ಲಿ ತಂಪಾಗಿ ಇರಲು 30,000 ರೂ. ಒಳಗೆ ಸಿಗುವ ಟಾಪ್ 5 ಪೋರ್ಟಬಲ್ ಎಸಿಗಳು -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications