ಸಂಚಾರ ದಟ್ಟಣೆ : ಜಾಲಹಳ್ಳಿ ಜಂಕ್ಷನ್ನಲ್ಲಿ ಅಂಡರ್ ಪಾಸ್ ನಿರ್ಮಾಣ
ಬೆಂಗಳೂರು, ನವೆಂಬರ್ 21: ಜಾಲ ಹಳ್ಳಿ ಜಂಕ್ಷನ್ ಬಳಿ ಸಂಚಾರ ದಟ್ಟಣೆ ವಿಪರೀತವಾಗಿದೆ, ಶಿವಮೊಗ್ಗ, ತುಮಕೂರು ಇನ್ನಿತರೆ ಪ್ರದೇಶಗಳಿಂದ ಬೆಂಗಳೂರು ಆಗಮಿಸುವವರು ಇದೇ ಮಾರ್ಗದಲ್ಲಿಯೇ ಸಾಮಾನ್ಯವಾಗಿ ಬರುತ್ತಾರೆ, ಬಸ್ಗಳು ಕೂಡ ಇದೇ ಮಾರ್ಗದಲ್ಲಿಯೇ ಬರುತ್ತದೆ ಹಾಗಾಗಿ ವಾಹನ ದಟ್ಟಣೆ ಜತೆಗೆ ಜನದಟ್ಟಣೆಯೂ ವಿಪರೀತವಾಗಿದೆ.
ಜಂಕ್ಷನ್ ಬಳಿ ಏಷ್ಯಾದಲ್ಲಿ ಅತಿ ದೊಡ್ಡ ಪೀಣ್ಯ ಕೈಗಾರಿಕಾ ಪ್ರದೇಶ, ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕೆಗಳು, ಸಾವಿರಾರು ಗಾರ್ಮೆಂಟ್ಸ್ ಕಂಪನಿಗಳು ಇರುವುದರಿಂದ ನಿತ್ಯ ಸಾವಿರಾರು ಸಂಖ್ಯೆಯ ಉದ್ಯೋಗಿಗಳು ಜಂಕ್ಷನ್ ಮೂಲಕ ಹಾದು ಹೋಗಲಿದ್ದಾರೆ.ಹೀಗಾಗಿ ಅಧಿಕ ಪ್ರಮಾಣ ಸಂಚಾರ ದಟ್ಟಣೆ ಉಂಟಾಗಿದೆ.

ಹಗಲಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜನದಟ್ಟಣೆ
ಹಗಲು ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿರ ಜಾಲಹಳ್ಳಿ ಕ್ರಾಸ್ ಜಂಕ್ಷನ್ ಬಳಿ ಭಾರಿ ಪ್ರಮಾಣದ ಸಂಚಾರ ದಟ್ಟಣೆ ಉಂಟಾಗುತ್ತದೆ. ಇದರಿಂದ ಪೀಣ್ಯ ಕೈಗಾರಿಕಾ ಪ್ರದೇಶ ಎರಡನೇ ಹಂತದ ರಿಂಗ್ ರಸ್ತೆ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸುಬ್ರಾತೋ ಮುಖರ್ಜಿ ರಸ್ತೆಯಲ್ಲಿ ಸಾರ್ವಜನಿಕರು ಪ್ರತಿ ನಿತ್ಯ ಸಂಚಾರ ದಟ್ಟಣೆ ಸಮಸ್ಯೆ ಎದುರಿಸಲೇ ಬೇಕಾದ ಪರಿಸ್ಥಿತಿ ಎದುರಾಗಿದೆ.

ಮೇಲ್ಸೇತುವೆ ನಿರ್ಮಾಣ ಸಾಧ್ಯವಿಲ್ಲ
ಈ ಭಾಗದಲ್ಲಿ ಮೇಲ್ಸೇತುವೆ ನಿರ್ಮಾಣ ಕಾರ್ಯ ಅಸಾಧ್ಯವಾದ ಮಾತಾಗಿದೆ ಏಕೆಂದರೆ ಈಗಾಗೇ ಮೆಟ್ರೋ ಕಾರಿಡಾರ್ ಹಾಗೂ ರಾಷ್ಟ್ರೀಯ ಹೆದ್ದಾರಿಕ್ಕೆ ಎಲಿವೇಟೆಡ್ ಕಾರಿಡಾರ್ ನಿರ್ಮಿಸಲಾಗಿದೆ. ಹಾಗಾಗಿ ಅಲ್ಲಿ ಎಲಿವೇಟೆಡ್ ಕಾರಿಡಾರ್ ಅಥವಾ ರಾಷ್ಟ್ರೀಯ ಹೆದ್ದಾರಿ ನಾಲ್ಕಕ್ಕೆ ಅಂಡರ್ ಪಾಸ್ ನಿರ್ಮಾಣ ಸಾಧ್ಯವಿಲ್ಲ.

ಗಂಟೆಗೆ 15 ಕಿ.ಮೀ ವೇಗದಲ್ಲಿ ವಾಹನ ಸಂಚಾರ
ಜಾಲಹಳ್ಳಿ ಕ್ರಾಸ್ ಬಳಿ ಗಂಟೆಗೆ 15 ಕಿ,ಮೀ ಮಾತ್ರ ಸಂಚರಿಸಬಹುದು, ಜಂಕ್ಷನ್ ಬಳಿ ಮಾಲ್, ಬಿಎಂಟಿಸಿ, ಬಸ್ ನಿಲ್ದಾಣಗಳು, ಮೆಟ್ರೋ ನಿಲ್ದಾಣ, ಬಸ್ ನಿಲ್ದಾಣಗಳು, ಹೋಟೆಲ್, ಕೈಗಾರಿಕೆಗಳು ಇರುವುದರಿಂದ ಬೆಳಗ್ಗೆ 9ರಿಂದ 10 ಪೀಕ್ ಅವಧಿಯಲ್ಲಿ ಕೇವಲ 10-15 ಕಿಮೀ ಮಾತ್ರ ಸಂಚಾರ ಮಾಡಬಹುದಾಗಿದೆ.

ಗಂಟೆಗೆ 10 ಸಾವಿರಕ್ಕಿಂತಲೂ ಹೆಚ್ಚು ವಾಹನ
ಜಾಲಹಳ್ಳಿ ಕ್ರಾಸ್ ಜಂಕ್ಷನ್ ನಲ್ಲಿ ಪೀಕ್ ಅವಧಿಯಲ್ಲಿ ಗಂಟೆಗೆ 15 ಸಾವಿರ ವಾಹನಗಳು ಸಂಜೆ 6-7ರ ಅವಧಿಯಲ್ಲಿ 15 ಸಾವಿರ ವಾಹನಗಳು ಸಂಚರಿಸಲಿದೆ. ಸರಾಸರಿ ಬೆಳಗ್ಗೆ 6 ರಿಂದ ಸಂಜೆ 10 ರವರೆಗೆ ಒಂದು ಗಂಟೆಗಳಲ್ಲಿ ಸರಾಸರಿ 10 ಸಾವಿರ ವಾಹನಗಳು ಸಂಚಾರ ಮಾಡುತ್ತದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications