ಹೆಂಡತಿಯನ್ನು ಬಿಟ್ಟು ಜಲ್ಲಿಕಟ್ಟಿಗಾಗಿ ಗಂಡ ತಮಿಳುನಾಡಿಗೆ ಪರಾರಿ
ಬೆಂಗಳೂರು, ಜನವರಿ 23: ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟಿಗಾಗಿ ಹೆಂಡತಿಯನ್ನು ಬಿಟ್ಟು ಗಂಡ ತಮಿಳುನಾಡಿಗೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ತಮಿಳುನಾಡು ಮೂಲದ ಕಾಳಿದಾಸ ಎನ್ನುವವರೇ ಪರಾರಿಯಾದ ಗಂಡ. ಎರಡು ತಿಂಗಳ ಹಿಂದೆಯಷ್ಟೇ ಅವರು ಕುಮುದಾ ಎಂಬ ಯುವತಿಯನ್ನು ವರಿಸಿದ್ದರು. ವಿವಾಹವಾದ ನಂತರ ಬೆಂಗಳೂರಿನ ವಸಂತ ನಗರದಲ್ಲಿ ವಾಸವಾಗಿದ್ದರು. ತನ್ನೂರಿನಲ್ಲಿಯೂ ಜಲ್ಲಿಕಟ್ಟಿಗಾಗಿ ಹೋರಾಟ ಪ್ರಾರಂಭವಾಗಿದೆ ಎಂದು ತಿಳಿಯುತ್ತಿದ್ದಂತೆ ರಾತ್ರೋರಾತ್ರಿ ತಮಿಳುನಾಡಿಗೆ ಪರಾರಿಯಾಗಿದ್ದಾರೆ. ಕುಮುದಾ ಪತ್ತಿಗೆ ಕರೆ ಮಾಡಿದರೂ ಪ್ರತಿಕ್ರಿಯೆ ನೀಡಿಲ್ಲ.[LIVE: ಚೆನ್ನೈನಲ್ಲಿ ನಿಷೇಧಾಜ್ಞೆ ಶಾಲಾ, ಕಾಲೇಜುಗಳಿಗೆ ರಜೆ]

ಬಳಿಕ ಭಾನುವಾರ ಕಾಳಿದಾಸ ಪತ್ನಿಗೆ ಕರೆ ಮಾಡಿ ಜಲ್ಲಿಕಟ್ಟು ಹೋರಾಟ ಮುಂದುವರೆದಿದ್ದು, ಜಲ್ಲಕಟ್ಟು ಆಚರಣೆಯೂ ನೆಡಯಲಿದೆ. ನಾನು ಬೆಂಗಳೂರಿಗೆ ಬರಲ್ಲ ಎಂದು ಹೇಳಿದ್ದಾರೆ. ಅದಕ್ಕೆ ಪತ್ನಿ ಮನೆಗೆ ಬರುವಂತೆ ಅಂಗಲಾಚಿದ್ದು, ಕೋಪದಿಂದ ಬರಲೇ ಬೇಕು ಎಂದಾಗ ನಾನು ಈಗಲೇ ಬರುವುದಿಲ್ಲ. ನೀನು ಬೇಕಿದ್ದರೆ ಬೇರೆ ಮದುವೆಯಾಗು ಎಂದು ಖಾರವಾಗಿ ಮಾತನಾಡಿದ್ದಾನೆ ಎಂದು ಪತ್ನಿ ಕುಮುದಾ ತಿಳಿಸಿದ್ದಾರೆ.
ಕಾಳಿದಾಸನಿಗೆ ಜಲ್ಲಿಕಟ್ಟು ಕ್ರೀಡೆ ಅಂದರೆ ಪಂಚಪ್ರಾಣ ತಮಿಳುನಾಡಿನಲ್ಲಿ ಕಾಳಿದಾಸ ಅನೇಕ ಬಾರಿ ಕ್ರೀಡೆಯಲ್ಲಿ ಪಾಲ್ಗೊಂಡಿದ್ದಾನೆ. ಇನ್ನು ಇದರ ಬಗ್ಗೆ ಹೋರಾಟ ಎಂದರೆ ಸುಮ್ಮನಿರುತ್ತಾನಾ ತಮಿಳುನಾಡಿಗೆ ಹೋಗಿದ್ದಾನೆ ಬರುತ್ತಾನೆ ಎಂದು ಬಂಧುಗಳು ತಿಳಿಸಿದ್ದಾರೆ. ಬೆಂಗಳೂರಿನ ಹೈಗೌಂಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications