'ಜನಪದ ವಿವಿ' ಕನ್ನಡ-ಸಂಸ್ಕೃತಿ ಇಲಾಖೆಗೆ ವರ್ಗಾಯಿಸಿ: ಗೋವಿಂದ ಕಾರಜೋಳ
ಬೆಂಗಳೂರು, ಸೆಪ್ಟಂಬರ್ 19: ಹಾವೇರಿ ಜಿಲ್ಲೆಯಲ್ಲಿರುವ ಜನಪದ ವಿಶ್ವವಿದ್ಯಾಲಯವನ್ನು ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಬೇಕು. ಆಗ ಮಾತ್ರವೇ ಅಲ್ಲಿ ಚಟುವಟಿಕೆಗಳು ನಡೆಯುತ್ತವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ವಿಧಾನ ಪರಿಷತ್ನಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಅವರು, ಜಾನಪದ ವಿಶ್ವವಿದ್ಯಾಲಯ ನಮ್ಮ ಕಾಲದಲ್ಲಿಯೇ ಪ್ರಾರಂಭ ಆಗಿತ್ತು. ಕರ್ನಾಟಕದ ಮಧ್ಯಭಾಗದಲ್ಲಿ ಇರಬೇಕು ಎಂದು ಹಾವೇರಿಯಲ್ಲಿ ಜಾನಪದ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲಾಯಿತು.
ವಿಶ್ವವಿದ್ಯಾಲಯ ಎಂಬುದಿದ್ದರೆ ಅದು ಉನ್ನತ ಶಿಕ್ಷಣ ಇಲಾಖೆಯಲ್ಲಿಯೇ ಬರಲಿ ಕೆಲವರ ತಲೆಯಲ್ಲಿ ಇತ್ತು. ವಿಶ್ವವಿದ್ಯಾಲಯ ಸಹ ನಮ್ಮಿಂದಲೇ ಪ್ರಾರಂಭವೂ ಆಯಿತು. ಆದರೆ, ಆದೇಶ ಕೊಡುವಾಗ ಉನ್ನತ ಶಿಕ್ಷಣ ಇಲಾಖೆಯಲ್ಲಿರಲಿ ಅಂತಾ ಹೇಳಿ ಅಲ್ಲಿಗೆ ಸೇರಿಸಿಬಿಟ್ಟರು. ಆದ್ದರಿಂದ ಜಾನಪದ ವಿವಿಯ ಚಟುವಟಿಕೆಗಳು ಕುಂಠಿತಗೊಂಡಿವೆ ಎಂಬ ವಿಚಾರವನ್ನು ಅವರು ಕಲಾಪದಲ್ಲಿ ಪ್ರಸ್ತಾಪಿಸಿದರು.

2 ಇಲಾಖೆ ಸಚಿವರು ಚರ್ಚಿಸಿ
ಈ ಜನಪದ ಕಲಾವಿದರು, ಕವಿಗಳು, ಸಾಹಿತಿಗಳು ಎಲ್ಲರೂ ಕೆಳ ವರ್ಗದಿಂದ ಬಂದಿರುವವರು. ಕೆಳ ವರ್ಗದವರ ಬದುಕೇ ಜನಪದ ಕಲೆ ಆಗಿದೆ. ಆದ್ದರಿಂದ ಪಕ್ಕದಲ್ಲೇ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಇದ್ದಾರೆ. ನನ್ನ ಇನ್ನೊಂದು ಬದಿಯಲ್ಲಿ ಉನ್ನತ ಶಿಕ್ಷಣ ಸಚಿವರೂ ಇದ್ದಾರೆ. ಇಬ್ಬರು ಕುಳಿತು ಮಾತನಾಡಿ ಜಾನಪದ ವಿವಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಿ ಎಂದು ಗೋವಿಂದ್ ಕಾರಜೋಳ ಅವರು ಮನವಿ ಮಾಡಿದರು.
ಹಾಗೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಿದರೆ ಮಾತ್ರ ವಿಶ್ವವಿದ್ಯಾಲಯದಲ್ಲಿ ಚಟುವಟಿಕೆ ನಡೆಯುತ್ತವೆ. ಸಾಕಷ್ಟು ಜಾಗ, ಹಣ ಕೊಡಲಾಗಿದೆ. ಸುವ್ಯವಸ್ಥಿತ ಕಟ್ಟಡ ಕಟ್ಟಲಾಗಿದೆ. ಇದೆಲ್ಲವನ್ನು ಗಮನಿಸಿ ವಿಶ್ವವಿದ್ಯಾಲಯಕ್ಕೆ ನೇಮಕಾತಿ ಮಾಡುವಾಗಲೂ ಕೂಡ ಅರ್ಹತೆ ಇರುವ ಜನಪದ ಕಲಾವಿದರನ್ನೇ ನೇಮಕ ಮಾಡಿ. ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದಾಗ ನಾನು ಕೂಡ ವಿಶ್ವವಿದ್ಯಾಲಯಕ್ಕೆ ಹೋಗಿ ಬಂದಿದ್ದೇನೆ. ಆದ್ದರಿಂದ ಸಚಿವರು ಇದನ್ನು ಪರಿಶೀಲಿಸಬೇಕು ಎಂದು ಅವರು ಕೋರಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications