'ಜನಪದ ವಿವಿ' ಕನ್ನಡ-ಸಂಸ್ಕೃತಿ ಇಲಾಖೆಗೆ ವರ್ಗಾಯಿಸಿ: ಗೋವಿಂದ ಕಾರಜೋಳ
ಬೆಂಗಳೂರು, ಸೆಪ್ಟಂಬರ್ 19: ಹಾವೇರಿ ಜಿಲ್ಲೆಯಲ್ಲಿರುವ ಜನಪದ ವಿಶ್ವವಿದ್ಯಾಲಯವನ್ನು ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಬೇಕು. ಆಗ ಮಾತ್ರವೇ ಅಲ್ಲಿ ಚಟುವಟಿಕೆಗಳು ನಡೆಯುತ್ತವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ವಿಧಾನ ಪರಿಷತ್ನಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಅವರು, ಜಾನಪದ ವಿಶ್ವವಿದ್ಯಾಲಯ ನಮ್ಮ ಕಾಲದಲ್ಲಿಯೇ ಪ್ರಾರಂಭ ಆಗಿತ್ತು. ಕರ್ನಾಟಕದ ಮಧ್ಯಭಾಗದಲ್ಲಿ ಇರಬೇಕು ಎಂದು ಹಾವೇರಿಯಲ್ಲಿ ಜಾನಪದ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲಾಯಿತು.
ವಿಶ್ವವಿದ್ಯಾಲಯ ಎಂಬುದಿದ್ದರೆ ಅದು ಉನ್ನತ ಶಿಕ್ಷಣ ಇಲಾಖೆಯಲ್ಲಿಯೇ ಬರಲಿ ಕೆಲವರ ತಲೆಯಲ್ಲಿ ಇತ್ತು. ವಿಶ್ವವಿದ್ಯಾಲಯ ಸಹ ನಮ್ಮಿಂದಲೇ ಪ್ರಾರಂಭವೂ ಆಯಿತು. ಆದರೆ, ಆದೇಶ ಕೊಡುವಾಗ ಉನ್ನತ ಶಿಕ್ಷಣ ಇಲಾಖೆಯಲ್ಲಿರಲಿ ಅಂತಾ ಹೇಳಿ ಅಲ್ಲಿಗೆ ಸೇರಿಸಿಬಿಟ್ಟರು. ಆದ್ದರಿಂದ ಜಾನಪದ ವಿವಿಯ ಚಟುವಟಿಕೆಗಳು ಕುಂಠಿತಗೊಂಡಿವೆ ಎಂಬ ವಿಚಾರವನ್ನು ಅವರು ಕಲಾಪದಲ್ಲಿ ಪ್ರಸ್ತಾಪಿಸಿದರು.

2 ಇಲಾಖೆ ಸಚಿವರು ಚರ್ಚಿಸಿ
ಈ ಜನಪದ ಕಲಾವಿದರು, ಕವಿಗಳು, ಸಾಹಿತಿಗಳು ಎಲ್ಲರೂ ಕೆಳ ವರ್ಗದಿಂದ ಬಂದಿರುವವರು. ಕೆಳ ವರ್ಗದವರ ಬದುಕೇ ಜನಪದ ಕಲೆ ಆಗಿದೆ. ಆದ್ದರಿಂದ ಪಕ್ಕದಲ್ಲೇ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಇದ್ದಾರೆ. ನನ್ನ ಇನ್ನೊಂದು ಬದಿಯಲ್ಲಿ ಉನ್ನತ ಶಿಕ್ಷಣ ಸಚಿವರೂ ಇದ್ದಾರೆ. ಇಬ್ಬರು ಕುಳಿತು ಮಾತನಾಡಿ ಜಾನಪದ ವಿವಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಿ ಎಂದು ಗೋವಿಂದ್ ಕಾರಜೋಳ ಅವರು ಮನವಿ ಮಾಡಿದರು.
ಹಾಗೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಿದರೆ ಮಾತ್ರ ವಿಶ್ವವಿದ್ಯಾಲಯದಲ್ಲಿ ಚಟುವಟಿಕೆ ನಡೆಯುತ್ತವೆ. ಸಾಕಷ್ಟು ಜಾಗ, ಹಣ ಕೊಡಲಾಗಿದೆ. ಸುವ್ಯವಸ್ಥಿತ ಕಟ್ಟಡ ಕಟ್ಟಲಾಗಿದೆ. ಇದೆಲ್ಲವನ್ನು ಗಮನಿಸಿ ವಿಶ್ವವಿದ್ಯಾಲಯಕ್ಕೆ ನೇಮಕಾತಿ ಮಾಡುವಾಗಲೂ ಕೂಡ ಅರ್ಹತೆ ಇರುವ ಜನಪದ ಕಲಾವಿದರನ್ನೇ ನೇಮಕ ಮಾಡಿ. ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದಾಗ ನಾನು ಕೂಡ ವಿಶ್ವವಿದ್ಯಾಲಯಕ್ಕೆ ಹೋಗಿ ಬಂದಿದ್ದೇನೆ. ಆದ್ದರಿಂದ ಸಚಿವರು ಇದನ್ನು ಪರಿಶೀಲಿಸಬೇಕು ಎಂದು ಅವರು ಕೋರಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications