ಶನಿವಾರಕ್ಕೊಮ್ಮೆ ನಿಗದಿಯಾದ ಸಿಎಂ ಜನತಾ ದರ್ಶನಕ್ಕೆ ಚಾಲನೆ
Recommended Video

ಬೆಂಗಳೂರು, ಸೆಪ್ಟೆಂಬರ್ 1: ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರ ಅಧಿಕೃತ ನಿವಾಸ ಜೆಪಿನಗರದಲ್ಲಿ ಮನೆಮುಂದೆ ಪ್ರತಿನಿತ್ಯ ಸಾವಿರಾರು ಜನರ ಸಾರ್ವಜನಿಕರು ಸಿಎಂ ಭೇಟಿ ಮಾಡಲು ಬರುವುದನ್ನು ತಪ್ಪಿಸಲು ಇನ್ನುಮುಂದೆ ಪ್ರತಿ ಶನಿವಾರ ಮಾತ್ರ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಯಲಿದೆ.
ಕಳೆದ ಮೂರು ತಿಂಗಳ ಅವಧಿಯಲ್ಲಿ ಪ್ರತಿದಿನ ಎಚ್ಡಿ ಕುಮಾರಸ್ವಾಮಿ ಜನತಾ ದರ್ಶನ ನಡೆಸುವರೆಂದು ರಜ್ಯದ ನಾನಾ ಕಡೆಗಳಿಂದ ಸಾವಿರಾರು ಜನರು ಬರುತ್ತಿದ್ದರು.
ಅನೇಕ ಸಲ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಇಲ್ಲದ ಸಂದರ್ಭದಲ್ಲೂ ಮಹಿಳೆಯರು, ಮಕ್ಕಳು, ಅಂಗವಿಕಲರು, ವೃದ್ಧರು ಹೀಗೆ ಸಾವಿರಾರು ಜನ ಜೆಪಿನಗರದ ನಿವಾಸ ಬಳಿ ಕಾಯುತ್ತಿದ್ದುದನ್ನು ತಪ್ಪಿಸಲು ಸ್ವತಃ ಸಿಎಂ ಕುಮಾರಸ್ವಾಮಿ ಪ್ರತಿದಿನ ಜನತಾ ದರ್ಶನ ಇರುವುದಿಲ್ಲ ಎಂದು ಘೋಷಿಸಿದ್ದರು.

ಜತೆಗೆ ಶನಿವಾರ ಮಾತ್ರ ಗೃಹ ಕಚೇರಿ ಕೃಷ್ಣಾದಲ್ಲಿ ಒಂದು ದಿನ ಜನತಾ ದರ್ಶನ ನಡೆಸುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಒಂದರಂದು ಶನಿವಾರ ಮೊದಲ ಶನಿವಾರದ ಜನತಾ ದರ್ಶಮ ನಡೆಯಲಿದ್ದು, ಈಗಾಗಲೇ ಬೆಳಗ್ಗೆಯಿಂದಲೇ ಸಾವಿರಾರು ಜನ ಕೃಷ್ಣಾದೆದುರು ಮುಖ್ಯಮಂತ್ರಿಗಳಿಗಾಗಿ ಕಾಯುತ್ತಿದ್ದಾರೆ.
2006ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕುಮಾರಸ್ವಾಮಿ ಜನತಾ ದರ್ಶನ ಆರಂಭಿಸಿದ್ದರು.ಹೀಗಾಗಿ ಜನತಾ ದರ್ಶನಕ್ಕೆ ಹೆಸರಾದ ಕುಮಾರಸ್ವಾಮಿ ಆಡಳಿತ ನಡೆಸಲು ಕಷ್ಟವಾಗುವಷ್ಟರ ಮಟ್ಟಿಗೆ ನಿತ್ಯ ಜನ ಹರಿದುಬರುತ್ತಿದ್ದರು.
ಇನ್ನು ಮುಂದೆ ಶನಿವಾರ ಬೆಳಿಗ್ಗೆ 11 ರಿಂದ ಸಂಜೆ 4:30ರ ವರವರೆಗೆ ಮಾತ್ರ ಸಿಎಂ ಅವರು ಸಾರ್ವಜನಿಕರನ್ನು ಭೇಟಿ ಆಗಲಿದ್ದಾರೆ.
ಹೀಗಾಗಿ ಅದಕ್ಕೊಂದು ಶಿಸ್ತು ತರಲು ಜನತಾ ದರ್ಶನ ದಿನವನ್ನು ನಿಗದಿ ಮಾಡಲಾಗಿದೆ. ಜನತಾದರ್ಶನದ ಕೋಶ ಅಧಿಕಾರಿಗಳು ಹಾಜರಿದ್ದು ಜನರಿಂದ ಸಿಎಂ ಜತೆ ಅಧಿಕಾರಿಗಳು ಖೂಡ ಜನರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications