ಶನಿವಾರಕ್ಕೊಮ್ಮೆ ನಿಗದಿಯಾದ ಸಿಎಂ ಜನತಾ ದರ್ಶನಕ್ಕೆ ಚಾಲನೆ
Recommended Video

ಬೆಂಗಳೂರು, ಸೆಪ್ಟೆಂಬರ್ 1: ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರ ಅಧಿಕೃತ ನಿವಾಸ ಜೆಪಿನಗರದಲ್ಲಿ ಮನೆಮುಂದೆ ಪ್ರತಿನಿತ್ಯ ಸಾವಿರಾರು ಜನರ ಸಾರ್ವಜನಿಕರು ಸಿಎಂ ಭೇಟಿ ಮಾಡಲು ಬರುವುದನ್ನು ತಪ್ಪಿಸಲು ಇನ್ನುಮುಂದೆ ಪ್ರತಿ ಶನಿವಾರ ಮಾತ್ರ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಯಲಿದೆ.
ಕಳೆದ ಮೂರು ತಿಂಗಳ ಅವಧಿಯಲ್ಲಿ ಪ್ರತಿದಿನ ಎಚ್ಡಿ ಕುಮಾರಸ್ವಾಮಿ ಜನತಾ ದರ್ಶನ ನಡೆಸುವರೆಂದು ರಜ್ಯದ ನಾನಾ ಕಡೆಗಳಿಂದ ಸಾವಿರಾರು ಜನರು ಬರುತ್ತಿದ್ದರು.
ಅನೇಕ ಸಲ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಇಲ್ಲದ ಸಂದರ್ಭದಲ್ಲೂ ಮಹಿಳೆಯರು, ಮಕ್ಕಳು, ಅಂಗವಿಕಲರು, ವೃದ್ಧರು ಹೀಗೆ ಸಾವಿರಾರು ಜನ ಜೆಪಿನಗರದ ನಿವಾಸ ಬಳಿ ಕಾಯುತ್ತಿದ್ದುದನ್ನು ತಪ್ಪಿಸಲು ಸ್ವತಃ ಸಿಎಂ ಕುಮಾರಸ್ವಾಮಿ ಪ್ರತಿದಿನ ಜನತಾ ದರ್ಶನ ಇರುವುದಿಲ್ಲ ಎಂದು ಘೋಷಿಸಿದ್ದರು.

ಜತೆಗೆ ಶನಿವಾರ ಮಾತ್ರ ಗೃಹ ಕಚೇರಿ ಕೃಷ್ಣಾದಲ್ಲಿ ಒಂದು ದಿನ ಜನತಾ ದರ್ಶನ ನಡೆಸುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಒಂದರಂದು ಶನಿವಾರ ಮೊದಲ ಶನಿವಾರದ ಜನತಾ ದರ್ಶಮ ನಡೆಯಲಿದ್ದು, ಈಗಾಗಲೇ ಬೆಳಗ್ಗೆಯಿಂದಲೇ ಸಾವಿರಾರು ಜನ ಕೃಷ್ಣಾದೆದುರು ಮುಖ್ಯಮಂತ್ರಿಗಳಿಗಾಗಿ ಕಾಯುತ್ತಿದ್ದಾರೆ.
2006ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕುಮಾರಸ್ವಾಮಿ ಜನತಾ ದರ್ಶನ ಆರಂಭಿಸಿದ್ದರು.ಹೀಗಾಗಿ ಜನತಾ ದರ್ಶನಕ್ಕೆ ಹೆಸರಾದ ಕುಮಾರಸ್ವಾಮಿ ಆಡಳಿತ ನಡೆಸಲು ಕಷ್ಟವಾಗುವಷ್ಟರ ಮಟ್ಟಿಗೆ ನಿತ್ಯ ಜನ ಹರಿದುಬರುತ್ತಿದ್ದರು.
ಇನ್ನು ಮುಂದೆ ಶನಿವಾರ ಬೆಳಿಗ್ಗೆ 11 ರಿಂದ ಸಂಜೆ 4:30ರ ವರವರೆಗೆ ಮಾತ್ರ ಸಿಎಂ ಅವರು ಸಾರ್ವಜನಿಕರನ್ನು ಭೇಟಿ ಆಗಲಿದ್ದಾರೆ.
ಹೀಗಾಗಿ ಅದಕ್ಕೊಂದು ಶಿಸ್ತು ತರಲು ಜನತಾ ದರ್ಶನ ದಿನವನ್ನು ನಿಗದಿ ಮಾಡಲಾಗಿದೆ. ಜನತಾದರ್ಶನದ ಕೋಶ ಅಧಿಕಾರಿಗಳು ಹಾಜರಿದ್ದು ಜನರಿಂದ ಸಿಎಂ ಜತೆ ಅಧಿಕಾರಿಗಳು ಖೂಡ ಜನರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications