ಜಪಾನಿ ಉದ್ಯಮಿಗಳೇ ಕರ್ನಾಟಕದ ರಾಯಭಾರಿಗಳು ಆಗಲಿ: ಸಚಿವರ ಕರೆ
ಬೆಂಗಳೂರು, ಜುಲೈ 11: ಜಪಾನ್ ನಿಂದ ರಾಜ್ಯಕ್ಕೆ ಹೆಚ್ಚಿನ ಹೂಡಿಕೆ ತರಲು ಪೂರಕವಾಗಿ ಈಗಾಗಲೇ ಹೂಡಿಕೆ ಮಾಡಿರುವ ಜಪಾನ್ ದೇಶದ ಕಂಪನಿಗಳೇ ಕರ್ನಾಟಕದ ರಾಯಭಾರಿಗಳಾಗಿ ಕಾರ್ಯ ನಿರ್ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಇಲ್ಲಿ ಕರೆ ನೀಡಿದರು.
ಇಲ್ಲಿನ ಜಪಾನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ (ಜೆಸಿಸಿಐ) ಇಲ್ಲಿ ಏರ್ಪಡಿಸಿದ್ದ ರಾಜ್ಯದಲ್ಲಿ ನೆಲೆಯೂರಿರುವ ಜಪಾನ್ ಮೂಲದ ಉದ್ಯಮ ಸಂಸ್ಥೆಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕ ಹೇಗೆ ಹೂಡಿಕೆ ಸ್ನೇಹಿ? ಇಲ್ಲಿ ಲಭ್ಯ ಇರುವ ಮಾನವ ಸಂಪನ್ಮೂಲ, ಕಾನೂನು ಸುವ್ಯವಸ್ಥೆ, ಹವಾಮಾನ ಇತ್ಯಾದಿ ವಿಷಯಗಳ ಬಗ್ಗೆ ತಮ್ಮ ದೇಶದ ಇತರ ಕಂಪನಿಗಳಿಗೂ ತಿಳಿಸುವಂತೆ ಅವರು ಕರೆ ನೀಡಿದರು.
ಬಂಡವಾಳ ಹೂಡಿಕೆ ಅವಕಾಶಗಳು
ತಮ್ಮ ನೇತೃತ್ವದ ನಿಯೋಗ ಇತ್ತೀಚೆಗಷ್ಟೆ ಜಪಾನ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಸ್ಪರ ಲಾಭದ ಅವಕಾಶಗಳಿರುವ ಹಲವಾರು ಹೂಡಿಕೆ ಸಾಧ್ಯತೆಗಳನ್ನು ಗುರುತಿಸಲಾಯಿತು. ಅದೊಂದು ಫಲಪ್ರದವಾದ ಭೇಟಿಯಾಗಿತ್ತು. ಇದೇ ವೇಳೆ, ಜಪಾನ್ ನ ಹಲವಾರು ಅಂಶಗಳು, ಅದರಲ್ಲೂ ಅಲ್ಲಿನ ಸಾರಿಗೆ ವ್ಯವಸ್ಥೆ ವೈಯಕ್ತಿಕವಾಗಿ ತಮಗೆ ಅತ್ಯಂತ ಹೆಚ್ಚಿನ ಅಚ್ಚರಿ ಮೂಡಿಸಿತು ಎಂದು ವಿವರಿಸಿದರು.
ಬರುವ ಫೆಬ್ರುವರಿ 12-14ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಎಲ್ಲ ಉದ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಅವರು ಈ ಸಂದರ್ಭದಲ್ಲಿ ಮಾತನಾಡಿ, ಹೂಡಿಕೆ ಆಧಾರದ ಮೇಲೆ ರಿಯಾಯಿತಿ ಗಳನ್ನು ನೀಡುವ ವ್ಯವಸ್ಥೆ ರೂಪಿಸಲಾಗಿದ್ದು, ತಮ್ಮ ದೇಶದ ಇತರ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡುವ ಹಾಗೆ ಮಾಡಬೇಕು ಎಂದರು.
ಬೆಂಗಳೂರಿನಲ್ಲಿನ ಜಪಾನ್ ಕಾನ್ಸುಲೇಟ್ ಜನರಲ್ ಟ್ಸುಟೊಮು ನಕಾನೆ, ಉಪ ಕಾನ್ಸುಲೇಟ್ ಜನರಲ್ ಹೊಕುಟೊ ಕಾಯ ಸೇರಿದಂತೆ ನೂರಕ್ಕೂ ಹೆಚ್ಚು ಜಪಾನಿ ಉದ್ಯಮಿಗಳು ಈ ಸಂದರ್ಭದಲ್ಲಿ ಇದ್ದರು.
ಇತ್ತಿಚೆಗೆ ಜಪಾನ್ ಹಾಗೂ ದಕ್ಷಿಣ ಕೋರಿಯಾ ಪ್ರವಾಸ ಮಾಡಿರುವ ರಾಜ್ಯ ಸಚಿವ ಎಂಬಿ ಪಾಟೀಲ್ ಅವರು ರೂ.6540 ಕೋಟಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications