Get Updates
Get notified of breaking news, exclusive insights, and must-see stories!

Industry investment: ತುಮಕೂರಿನ ಟೌನ್‌ಶಿಫ್ ಕಾರ್ಯಾಚರಣೆಗೆ ಮಹೂರ್ತ ಫಿಕ್ಸ್

ಬೆಂಗಳೂರು, ಜೂನ್ 28: ಜಪಾನ್ ಪ್ರವಾಸದಲ್ಲಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು, ರಾಜ್ಯ ಸರ್ಕಾರದ ವಾಣಿಜ್ಯ ಪಾಲುದಾರಿಕೆ ವೃದ್ಧಿಸುವುದು ಮತ್ತು ರಾಜ್ಯದಲ್ಲಿನ ಬಂಡವಾಳ ಹೂಡಿಕೆ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ಸಾಧ್ಯತೆಗಳನ್ನು ಅಲ್ಲಿನ ಕಂಪನಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಜೊತೆಗೆ ರಾಜ್ಯದ ಜನರಿಗೆ ಒಂದಷ್ಟು ಸಿಹಿ ಸುದ್ದಿಗಳನ್ನು ನೀಡಿದ್ದಾರೆ.

ಸಚಿವ ಎಂಬಿ ಪಾಟೀಲ್ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗವು ಜಪಾನಿನ ಬಹುರಾಷ್ಟ್ರೀಯ ಕಂಪನಿಗಳಾದ ಯಮಹಾ ಮೋಟರ್ ಕಾರ್ಪ್ (ವೈಎಂಸಿ), ಐಚಿ ತೋಕೆ ಹಾಗೂ ಬ್ರದರ್ ಇಂಡಸ್ಟ್ರೀಸ್‌ನ ಮುಖ್ಯಸ್ಥರ ಜೊತೆ ನಗೋಯಾ ನಗರದಲ್ಲಿ ಗುರುವಾರ ಸರಣಿ ಸಭೆಗಳನ್ನು ನಡೆಸಿತು.

Japanese Industrial Township JIT of Tumakuru likely to Launch Operation in 2024 Year End

ಸಭೆಯಲ್ಲಿ ಕರ್ನಾಟಕವು ಬಂಡವಾಳ ಹೂಡಿಕೆಯ ಪ್ರಮುಖ ತಾಣವನ್ನಾಗಿ, ಕೈಗಾರಿಕೆ ಸ್ಥಾನಮಾನ ಬಲಪಡಿಸುವ ಕುರಿತು ಚರ್ಚಿಸಿದರು. ಇದೇ ವೇಳೆ ಬ್ರದರ್‌ ಇಂಡಸ್ಟ್ರೀಸ್‌ನ ಅಧ್ಯಕ್ಷ ಇಚಿರೊ ಸಸಾಕಿ, ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಮಕೊಟೊ ಹೋಶಿ ಅವರ ಜೊತೆಗಿನ ಭೇಟಿ ಸಂದರ್ಭದಲ್ಲಿ ಬೆಂಗಳೂರು ಮೂಲದ ನವೋದ್ಯಮ ಇಥೆರಿಯಲ್‌ ಮಷಿನ್ಸ್‌ ಜೊತೆ ಪಾಲುದಾರಿಕೆ ಮಾಡಿಕೊಳ್ಳುವ ಇಂಗಿತ ವ್ಯಕ್ತಪಡಿಸಿದೆ ಎನ್ನಲಾಗಿದೆ.

ಕೈಗಾರಿಕಾ ಟೌನ್‌ಶಿಪ್ ಆರಂಭ

ತುಮಕೂರಿನ ಬಳಿ ಇರುವ ಜಪಾನ್‌ ಕೈಗಾರಿಕಾ ಟೌನ್‌ಶಿಪ್‌ನಲ್ಲಿ (ಜೆಐಟಿ) ಕಂಪನಿಯ ಕಾರ್ಖಾನೆಯು ಈ ವರ್ಷದ ಡಿಸೆಂಬರ್‌ನಲ್ಲಿ ಕಾರ್ಯಾರಂಭ ಮಾಡಲಿದೆ. ಮಷಿನ್‌ಟೂಲ್ಸ್ ವಲಯದಲ್ಲಿ ವಹಿವಾಟು ವಿಸ್ತರಣೆ ಬಗ್ಗೆ ಕಂಪನಿಯು ಒಲವು ವ್ಯಕ್ತಪಡಿಸಿದೆ. ಕಂಪನಿಯು ತಯಾರಿಸುವ ಇಂಧನ ದಕ್ಷತೆಯ ಯಂತ್ರೋಪಕರಣಗಳು ವಾಹನ ಬಿಡಿಭಾಗ ತಯಾರಿಕೆಯ ಉದ್ಯಮಗಳಿಗೆ ಕರ್ನಾಟಕವು ಹೆಚ್ಚು ಸೂಕ್ತವಾಗಿದೆ ಎಂಬುದರ ಮೇಲೆ ಬೆಳಕು ಚೆಲ್ಲಲಾಯಿತು.

ಆಟೊಮೊಬೈಲ್ ಹಾಗೂ ವಿದ್ಯುತ್‌ಚಾಲಿತ ವಾಹನ ತಯಾರಿಕಾ ವಲಯಕ್ಕೆ ರಾಜ್ಯ ಸರ್ಕಾರ ಒದಗಿಸುತ್ತಿರುವ ಉತ್ತೇಜಕರ ರಿಯಾಯಿತಿ ಹಾಗೂ ಸೌಲಭ್ಯಗಳನ್ನು ಬಳಸಿಕೊಳ್ಳಲು ಮುಂದಾಗಬೇಕು ಎಂದು ಸಚಿವರು ಯಮಹಾ ಕಂಪನಿಗೆ ಮನವಿ ಮಾಡಿಕೊಂಡರು.

Japanese Industrial Township JIT of Tumakuru likely to Launch Operation in 2024 Year End

ಅನಿಲ, ನೀರಿನ ಮೀಟರ್‌ ಸೇರಿದಂತೆ ಅತ್ಯಾಧುನಿಕ ಅಳತೆ ಹಾಗೂ ನಿಯಂತ್ರಣ ಸಾಧನಗಳ ತಯಾರಿಸುವ ಐಚಿ ತೋಕೆ ಡೆಂಕಿ ಕಂಪನಿ ಜೊತೆಗಿನ ಮಾತುಕತೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ತಲೆದೋರುವ ನೀರಿನ ಕೊರತೆ ಸಮಸ್ಯೆ ನೀಗಿಸುವ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಲಾಯಿತು.

ಜಲಮಂಡಳಿ, ನಗರಾಭಿವೃದ್ಧಿ ಇಲಾಖೆಗೆ ಸಹಕಾರ

ಮೂಲ ಸೌಲಭ್ಯ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲುದಾರಿಕೆ ಬಗ್ಗೆ ಕಂಪನಿಯು ಒಲವು ವ್ಯಕ್ತಪಡಿಸಿದೆ. ಬೆಂಗಳೂರು ನೀರು ಪೂರೈಕೆ ಮತ್ತು ಒಳಚರಂಡಿ ಮಂಡಳಿ (BWSSB) ಹಾಗೂ ನಗರಾಭಿವೃದ್ಧಿ ಇಲಾಖೆಯ ಜೊತೆಗೆ ಪಾಲುದಾರಿಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರವು ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿನ ಲೆಕ್ಕಕ್ಕೆ ಸಿಗದೇ ಪೋಲು ತಪ್ಪಿಸಿ, ನೀರಿನ ಕೊರತೆಗೆ ಕಡಿವಾಣ ಹಾಕಲು ಈ ಕಂಪನಿಯ ನೆರವು ಪಡೆಯಲಾಗುವುದು. ಕಂಪನಿ ತಯಾರಿಸುವ ಗರಿಷ್ಠ ಸಾಮರ್ಥ್ಯದ ಯುವಿ ತಂತ್ರಜ್ಞಾನದ ನೀರಿನ ಮೀಟರ್‌ಗಳು ನೀರಿನ ಅಭಾವ ನಿವಾರಿಸಲು ನೆರವಾಗಲಿವೆ.

'ವೈಎಂಸಿ'ಯ ಹೊಸ ಉದ್ದಿಮೆ ಅಭಿವೃದ್ಧಿ ಕೇಂದ್ರದ ಚೀಫ್‌ ಜನರಲ್‌ ಮ್ಯಾನೇಜರ್‌ ಹಜಿಮೆ ಆವೊಟಾ, ಸಂಚಾರ ಸೇವಾ ವಹಿವಾಟಿನ ಜನರಲ್‌ ಮ್ಯಾನೇಜರ್‌ ಶುಂಗೊ ತೆರಜಿಮಾ ಮತ್ತಿತರ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಕಂಪನಿಯ ನೀರಿನ ಸಲಕರಣೆ ಮಾರಾಟ ವಿಭಾಗದ ಜನರಲ್‌ ಮ್ಯಾನೇಜರ್‌ ಕಜುಹಿಸಾ ಇಸೊಮುರಾ, ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಕಜುಹಿಸಾ ಮೊರಿ, ಕರ್ನಾಟಕದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಸಭೆಯಲ್ಲಿ ಪಾಲ್ಗೊಂಡರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+