ಜಯ ಕರ್ನಾಟಕ ಸಂಘಟನೆಯ ಸ್ಥಾಪಕ ಮುತ್ತಪ್ಪ ರೈ ಸ್ಥಿತಿ ಗಂಭೀರ
ಬೆಂಗಳೂರು, ಮೇ 13: ಜಯ ಕರ್ನಾಟಕ ಸಂಘಟನೆಯ ಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮಾಜಿ ಭೂಗತ ಪಾತಕಿ, ರಿಯಲ್ ಎಸ್ಟೇಟ್ ಉದ್ಯಮಿ ಮುತ್ತಪ್ಪ ರೈ ನಿಧನರಾಗಿದ್ದಾರೆ ಎಂಬ ಸುದ್ದಿ ಹಬ್ಬಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಪೂರ್ವ ವಲಯ ಡಿಸಿಪಿ ಈಶ್ವರಪ್ಪ, ರೈ ಸಾವಿನ ಸುದ್ದಿ ಸುಳ್ಳು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.
Recommended Video
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿಎನ್. ಮುತ್ತಪ್ಪ ರೈಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಪುತ್ತೂರಿನಲ್ಲಿರುವ ಅವರ ಸಂಬಂಧಿಕರು ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಜಯ ಕರ್ನಾಟಕ ಸಂಘಟನೆಯ ವಕ್ತಾರರಾದ ಪ್ರಕಾಶ್ ರೈ ಹೇಳಿದ್ದಾರೆ.
ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ರೈ, ಕಳೆದ ತಿಂಗಳು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಪುತ್ತೂರು ತಾಲೂಕಿನ ಕೆಯ್ಯೂರಿನ ಎನ್.ಮುತ್ತಪ್ಪ ರೈಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ.

ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ನ ನಿಕಟಪೂರ್ವ ಅಧ್ಯಕ್ಷರೂ ಆಗಿರುವ ಮುತ್ತಪ್ಪ ರೈಯವರು ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದಾರೆ. ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಏಪ್ರಿಲ್ 28ರಂದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 13ರ ರಾತ್ರಿ ವೇಳೆಗೆ ಎನ್. ಮುತ್ತಪ್ಪ ರೈಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕಳೆದ ಎರಡು ವರ್ಷಗಳಿಂದ ಮೆದುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ಅವರು ಇತ್ತೀಚೆಗೆ ಅತ್ಯಂತ ಕೃಶಕಾಯರಾಗಿ ತಮ್ಮ ಬಿಡದಿ ಮನೆಯಲ್ಲಿ ಕಾಣಿಸಿಕೊಂಡಿದ್ದರು.
ನವದೆಹಲಿ, ಚೆನ್ನೈ, ಬೆಂಗಳೂರು ಸೇರಿದಂತೆ ವಿವಿಧ ಕಡೆ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಲಿವರ್ ಕ್ಯಾನ್ಸರ್ ಗುಣವಾಯಿತು ಆದರೆ ಮೆದುಳಿನಲ್ಲಿ ಕ್ಯಾನ್ಸರ್ ಗಡ್ಡೆ ಪತ್ತೆ ಆಯಿತು. ಕೆಲವು ತಿಂಗಳಷ್ಟೆ ಬದುಕುವುದಾಗಿ ವೈದ್ಯರು ಹೇಳಿಬಿಟ್ಟಿದ್ದಾರೆ ಹಾಗಾಗಿ ಕೊನೆಯ ದಿನಗಳನ್ನು ಕಳೆಯಲು ಬಿಡದಿಗೆ ಬಂದಿದ್ದೇನೆ' ಎಂದು ಜನವರಿ ತಿಂಗಳಿನಲ್ಲಿ ಸುದ್ದಿಗೋಷ್ಠಿ ಹೇಳಿದ್ದನ್ನು ಇಲ್ಲಿಸ್ಮರಿಸಬಹುದು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications