ಅರಮನೆಗೆ ಮತ್ತೊಂದು ಕೆಟ್ಟಸುದ್ದಿ: ಜಯಚಾಮರಾಜೇಂದ್ರ ಒಡೆಯರ್ ಪುತ್ರಿ ನಿಧನ
Recommended Video

ಮೈಸೂರು, ಅಕ್ಟೋಬರ್ 19: ಮೈಸೂರು ರಾಜಮನೆತನಕ್ಕೆ ಸೂತಕದ ಛಾಯೆ ಬಿಡುತ್ತಿಲ್ಲ. ಇಂದು ಬೆಳಿಗ್ಗೆಯಷ್ಟೆ ರಾಜಮಾತೆ ಪ್ರಮೋದಾ ದೇವಿ ಅವರ ತಾಯಿ ಅಸುನೀಗಿದ್ದರು. ಈಗ ಸಂಜೆ ವೇಳೆಗೆ ಜಯಚಾಮರಾಜೇಂದ್ರ ಒಡೆಯರ ಪುತ್ರಿ ವಿಶಾಲಾಕ್ಷಿ ದೇವಿ ವಿಧಿವಶರಾಗಿದ್ದಾರೆ.
ಚಯರಾಜೇಂದ್ರ ಒಡೆಯರ್ ಅವರ ಕೊನೆಯ ಪುತ್ರಿ ಆಗಿದ್ದ ಇವರು ಈ ಹಿಂದಿನ ಮೈಸೂರಿನ ರಾಜ ನರಸಿಂಹರಾಜ ಒಡೆಯರ್ ಅವರ ಸಹೋದರಿ ಆಗಿದ್ದರು. ಬಹಳ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ವಿಶಾಲಾಕ್ಷಿ ಅವರು ಬೆಂಗಳೂರಿನಲ್ಲಿ ಇಂದು ಸಂಜೆ ವೇಳೆಗೆ ವಿಧಿವಶರಾಗಿದ್ದಾರೆ.
ವಿಶಾಲಾಕ್ಷಿ ಅವರ ಸಾವಿನೊಂದಿಗೆ ಮೈಸೂರಿನ ರಾಜಮನೆತನಕ್ಕೆ ಸಂಬಂಧಿಸಿದ ಇಬ್ಬರು ವ್ಯಕ್ತಿಗಳು ಒಂದೇ ದಿನ ಅಸುನೀಗಿದಂತಾಗಿದೆ. ಇಂದು ಬೆಳಿಗ್ಗೆಯಷ್ಟೆ ರಾಜಮಾತೆ ಪ್ರಮೋದಾ ದೇವಿ ಅವರ ತಾಯಿ ತೀರಿಕೊಂಡರು. ಈಗ ವಿಶಾಲಾಕ್ಷಿ ದೇವಿ ಅಸುನೀಗಿದ್ದಾರೆ.

ವಿಶಾಲಾಕ್ಷಿದೇವಿಯವರು ಬೆಂಗಳೂರಿನ ನಿವಾಸಿಯಾಗಿದ್ದು ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಪರಿಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನ ಬೆಂಗಳೂರಿನ ವಿಕ್ರಮ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವಿಶಾಲಾಕ್ಷಿದೇವಿ ಅವರಿಗೆ ಪ್ರಾಣಿಗಳನ್ನು ಕಂಡರೆ ಬಲು ಪ್ರೀತಿ. ಈ ಹಿಂದೆ ಅವರೇ ಚಿರತೆ ಮರಿಯೊಂದನ್ನು ಸಾಕಿದ್ದರು. ಬಳಿಕ ಅದು ದೊಡ್ಡದಾಗಿ ತನ್ನ ಭೇಟೆಯನ್ನು ತಾನೇ ಹುಡುಕಲು ಶಕ್ತವಾದ ಬಳಿಕ ಬಂಡೀಪುರ ಅರಣ್ಯಕ್ಕೆ ಬಿಟ್ಟಿದ್ದರು.

ಆ ನಂತರದ ದಿನಗಳಲ್ಲಿ ಈ ಚಿರತೆ ವಿಶಲಾಕ್ಷಿ ದೇವಿ ಅವರನ್ನು ಎಷ್ಟು ಹಚ್ಚಿಕೊಂಡಿತ್ತು ಎಂಬುದು ಅವರು ಅರಣ್ಯಕ್ಕೆ ಬಂದು ನಿರ್ಧಿಷ್ಠ ಸ್ಥಳದಲ್ಲಿ ಅದನ್ನು ಕೂಗಿದಲ್ಲಿ , ಆ ಚಿರತೆ ಅಲ್ಲಿಗೆ ಬರುತ್ತಿತ್ತು. ಅಷ್ಟರಮಟ್ಟಿಗೆ ಇಬ್ಬರ ನಡುವೆ ಬಾಂಧವ್ಯ ಮೂಡಿತ್ತು. ಅವರು ಹೆಚ್ಚು ಪ್ರಾಣಿ ಪ್ರಿಯರಾಗಿದ್ದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications