ಜಯದೇವ ಫ್ಲೈಓವರ್ ತೆರವು ಕಾರ್ಯ ಅಕ್ಟೋಬರ್ನಲ್ಲಿ?
ಬೆಂಗಳೂರು, ಮೇ 10: ನಮ್ಮ ಮೆಟ್ರೋ ಎರಡನೇ ಹಂತದ ಮಾರ್ಗ ನಿರ್ಮಾಣಕ್ಕಾಗಿ ಜಯದೇವ ಮೇಲ್ಸೇತುವೆಯನ್ನು ತೆರವುಗೊಳಿಸುವುದು ಅನಿವಾರ್ಯವಾಗಿದ್ದು, ತೆರವು ಕಾರ್ಯವನ್ನು ದಿನದಿಂದ ದಿನಕ್ಕೆ ಮುಂದೂಡಲಾಗುತ್ತಿದೆ.
ಗೊಟ್ಟಿಗೆರೆ-ನಾಗವಾರ ಮೆಟ್ರೋ ಮಾರ್ಗ ಇದಾಗಿದೆ. ಇಲ್ಲಿ ಮೇಲ್ಸೇತುವೆ ತೆರವು ಕಾರ್ಯ ನಡೆಯುವುದರಿಂದ ಬಿಟಿಎಂ ಲೇಔಟ್, ಜಯನಗರ, ಬನ್ನೇರುಘಟ್ಟ ಪ್ರದೇಶಕ್ಕೆ ತೊಂದರೆ ಉಂಟಾಗಲಿದೆ.
ಇದುವರೆಗೆ ಆರ್ವಿ ರಸ್ತೆ-ಸಿಲ್ಕ್ ಬೋರ್ಡ್ ನಡುವೆ ಕೇವಲ ಶೇ.15ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. ಕೆಲಸಗಾರರು ರಜೆಯ ಮೇಲೆ ಊರುಗಳಿಗೆ ತೆರಳಿರುವುದರಿಂದ ಕಾಮಗಾರಿ ನಿಧಾನವಾಗುತ್ತಿದೆ.
ಕಾಮಗಾರಿಯು ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ನಮಗೆ ತೊಂದರೆಯಾಗುತ್ತಿದೆ. ಇನ್ನು ಬನ್ನೇರುಘಟ್ಟ ಹಾಗೂ ಸೆಂಟ್ರಲ್ ಸಿಲ್ಕ್ ಬೋರ್ಡ್ ಸಂಪರ್ಕಿಸುವ ಫ್ಲೈಓವರ್ ನಿರ್ಮಾಣ ಕಾರ್ಯವನ್ನು ಮೊದಲು ಪೂರ್ಣಗೊಳಿಸಿ, 2017ರಲ್ಲೇ ಬಿಎಂಆರ್ಸಿಎಲ್ ಡೆಡ್ಲೈನ್ ನೀಡಿತ್ತು ಹಲವಾರು ಬಾರಿ ಗಡುವು ಮೀರಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಮಗಾರಿ ವಿಳಂಬ ಏಕೆ
ರೀಚ್ 5 ಹಾಗೂ ರೀಚ್ 6ರ ನಮ್ಮ ಮೆಟ್ರೋ ಕಾಮಗಾರಿ ಆರಂಭಕ್ಕೂ ಮುನ್ನ ಬಿಎಂಆರ್ಸಿಎಲ್ ವಾಹನ ಸವಾರರಿಗೆ ಅನನುಕೂಲವಾಗದಂತೆ ನೋಡಿಕೊಳ್ಳುವುದು ಕೂಡ ಕರ್ತವ್ಯವಾಗಿದೆ. 300ಕ್ಕೂ ಹೆಚ್ಚು ಕೆಲಸಗಾರರು ಮತದಾನ ಮಾಡಲು ಊರಿಗೆ ತೆರಳಿರುವ ಕಾರಣ ಕಾಮಗಾರಿ ವಿಳಂಬವಾಗುತ್ತಿದೆ.

ಪರ್ಯಾಯ ಮಾರ್ಗ ಯಾವುದು
ಮೈಕೋ ಲೇಔಟ್ನಲ್ಲಿ ಟ್ರಾಫಿಕ್ ಪೊಲೀಸರೂ ಈಗಾಗಲೇ ಗುರಪ್ಪನಪಾಳ್ಯಕ್ಕೆ ತೆರಳುವವರು ಸರ್ವೀಸ್ ರಸ್ತೆ ಮೂಲಕ ತೆರಳಲು ಸೂಚಿಸಿದ್ದಾರೆ.

ಒಟ್ಟು ಎರಡು ಹಂತದಲ್ಲಿ ಮೇಲ್ಸೇತುವೆ ತೆರವು ಕಾರ್ಯ
ಒಟ್ಟು ಎರಡು ಹಂತಗಳಲ್ಲಿ ಜಯದೇವ ಮೇಲ್ಸೇತುವೆ ತೆರವು ಕಾರ್ಯ ನಡೆಸಲಾಗುತ್ತದೆ. ಮೇ ಅಂತ್ಯದಲ್ಲಿ ಬನ್ನೇರುಘಟ್ಟದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ತಲುಪುವ ಕಡೆಗಿನ ಫ್ಲೈಓವರ್ನ್ನು ಮೊದಲು ತೆರವುಗೊಳಿಸಲಾಗುತ್ತದೆ. ಬಳಿಕ ಮುಖ್ಯ ಮೇಲ್ಸೇತುವೆ ಭಾಗವನ್ನು ನಂತರದ ದಿನದಲ್ಲಿ ತೆರವುಗೊಳಿಸಲಾಗುತ್ತದೆ. 12 ವರ್ಷಗಳ ಹಳೆಯ ಸೇತುವೆಯನ್ನು ತೆರವುಗೊಳಿಸಲು ಎರಡರಿಂದ ಮೂರು ತಿಂಗಳ ಕಾಲಾವಕಾಶ ಬೇಕಾಗುತ್ತದೆ ಎಂದು ತಿಳಿಸಿದ್ದರು ಆದರೆ ಈಗಿರುವ ಮಾಹಿತಿ ಪ್ರಕಾರ ಕಾರ್ಯ ಆರಂಭವಾಗುವುದೇ ಅಕ್ಟೋಬರ್ ನಲ್ಲಿ.

ಬಿಎಂಆರ್ಸಿಎಲ್ ಮಾರ್ಚ್ ಅಂತ್ಯದಲ್ಲೇ ಆರಂಭಿಸಬೇಕಿತ್ತು
ಬಿಎಂಆರ್ಸಿಎಲ್ ತಿಳಿಸಿದ ಹಾಗೆ ಮಾರ್ಚ್ ಅಂತ್ಯ ಅಥವಾ ಏಪ್ರಿಲ್ ತಿಂಗಳ ಆರಂಭದಲ್ಲೇ ತೆರವು ಕಾರ್ಯವನ್ನು ಆರಂಭಿಸಬೇಕಿತ್ತು. ಆದರೆ ಹಲವಾರು ಕಾರಣಗಳಿಂದ ಮುಂದೂಡಿದೆ. ಇದೀಗ ಕೆಲಸಗಾರರು ಊರುಗಳಿಗೆ ತೆರಳಿರುವುದರಿಂದ ಅಕ್ಟೋಬರ್ನಲ್ಲಿ ಕಾಮಗಾರಿ ಆರಂಭಿಸುವ ಸಾಧ್ಯತೆ ಇದೆ. ಒಟ್ಟು ಎರಡು ಹಂತದಲ್ಲಿ ತೆರವು ಕಾರ್ಯ ನಡೆಯಲಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications