2 ಹಂತಗಳಲ್ಲಿ ಜಯದೇವ ಮೇಲ್ಸೇತುವೆ ತೆರವು ಕಾರ್ಯ, ಎಲ್ಲಿ ಮೊದಲು?
ಬೆಂಗಳೂರು, ಏಪ್ರಿಲ್ 30: ನಮ್ಮ ಮೆಟ್ರೋ ನಿರ್ಮಾಣಕ್ಕಾಗಿ ಜಯದೇವ ಮೇಲ್ಸೇತುವೆಯನ್ನು ತೆರವುಗೊಳಿಸುವುದು ಅನಿವಾರ್ಯವಾಗಿದೆ. ಒಟ್ಟು 2 ಹಂತಗಳಲ್ಲಿ ತೆರವು ಕಾರ್ಯ ಕೈಗೊಳ್ಳಲಾಗುತ್ತಿದೆ.
ಮೇ ಅಂತ್ಯದಲ್ಲಿ ಬನ್ನೇರುಘಟ್ಟದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ತಲುಪುವ ಕಡೆಗಿನ ಫ್ಲೈಓವರ್ನ್ನು ಮೊದಲು ತೆರವುಗೊಳಿಸಲಾಗುತ್ತದೆ. ಬಳಿಕ ಮುಖ್ಯ ಮೇಲ್ಸೇತುವೆ ಭಾಗವನ್ನು ನಂತರದ ದಿನದಲ್ಲಿ ತೆರವುಗೊಳಿಸಲಾಗುತ್ತದೆ. 12 ವರ್ಷಗಳ ಹಳೆಯ ಸೇತುವೆಯನ್ನು ತೆರವುಗೊಳಿಸಲು ಎರಡರಿಂದ ಮೂರು ತಿಂಗಳ ಕಾಲಾವಕಾಶ ಬೇಕಾಗುತ್ತದೆ.
ಮೆಟ್ರೋ ನಿಗಮ ಫ್ಲೈಓವರ್ ತೆರವು ಕಾರ್ಯಕ್ಕೆ ನೀಡಿದ್ದ ಗಡುವು ಮುಕ್ತಾಯವಾಗಿದೆ. ಜಯದೇವ ಆಸ್ಪತ್ರೆ ಜಂಕ್ಷನ್ನಲ್ಲಿ ಸುಗಮ ಸಂಚಾರ ಕಲ್ಪಿಸಲು , ಸುತ್ತಮುತ್ತಲಿನ ಕಟ್ಟಡಗಳನ್ನು ತೆರವುಗೊಳಿಸಬೇಕಿದೆ. ಹೀಗಾಗಿ ಮೇಲುರಸ್ತೆ ತೆರವು ಕಾರ್ಯ ವಿಳಂಬವಾಗಿದೆ. ಈಗಾಗಲೇ ಸಂಚಾರ ಪೊಲೀಸರ ನೆರವಿನೊಂದಿಗೆ ಕಟ್ಟಡ ತೆರವು ಕಾರ್ಯ ಆರಂಭವಾಗಿದೆ.

ಬಿಎಂಆರ್ಸಿಎಲ್ ಮಾರ್ಚ್ ಅಂತ್ಯದಲ್ಲೇ ಆರಂಭಿಸಬೇಕಿತ್ತು
ಬಿಎಂಆರ್ಸಿಎಲ್ ತಿಳಿಸಿದ ಹಾಗೆ ಮಾರ್ಚ್ ಅಂತ್ಯ ಅಥವಾ ಏಪ್ರಿಲ್ ತಿಂಗಳ ಆರಂಭದಲ್ಲೇ ತೆರವು ಕಾರ್ಯವನ್ನು ಆರಂಭಿಸಬೇಕಿತ್ತು. ಆದರೆ ಹಲವಾರು ಕಾರಣಗಳಿಂದ ಮುಂದೂಡಿದೆ.

ಮೇಲ್ಸೇತುವೆ ತೆರವಿಗೂ ಮುನ್ನ ಪರ್ಯಾಯ ವ್ಯವಸ್ಥೆ
ರೀಚ್ 5 ಹಾಗೂ ರೀಚ್ 6ರ ನಮ್ಮ ಮೆಟ್ರೋ ಕಾಮಗಾರಿ ಆರಂಭಕ್ಕೂ ಮುನ್ನ ಬಿಎಂಆರ್ಸಿಎಲ್ ವಾಹನ ಸವಾರರಿಗೆ ಅನನುಕೂಲವಾಗದಂತೆ ನೋಡಿಕೊಳ್ಳುವುದು ಕೂಡ ಕರ್ತವ್ಯವಾಗಿದೆ. 300ಕ್ಕೂ ಹೆಚ್ಚು ಕೆಲಸಗಾರರು ಮತದಾನ ಮಾಡಲು ಊರಿಗೆ ತೆರಳಿರುವ ಕಾರಣ ಕಾಮಗಾರಿ ವಿಳಂಬವಾಗುತ್ತಿದೆ.

ಮೈಕೋ ಲೇಔಟ್ನಲ್ಲಿ ಆಗಲೇ ಪರ್ಯಾಯ ಮಾರ್ಗ
ಮೈಕೋ ಲೇಔಟ್ನಲ್ಲಿ ಟ್ರಾಫಿಕ್ ಪೊಲೀಸರೂ ಈಗಾಗಲೇ ಗುರಪ್ಪನಪಾಳ್ಯಕ್ಕೆ ತೆರಳುವವರು ಸರ್ವೀಸ್ ರಸ್ತೆ ಮೂಲಕ ತೆರಳಲು ಸೂಚಿಸಿದ್ದಾರೆ.

ಎರಡು ಹಂತದಲ್ಲಿ ಮೇಲ್ಸೇತುವೆ ತೆರವು ಕಾರ್ಯ
ಒಟ್ಟು ಎರಡು ಹಂತಗಳಲ್ಲಿ ಜಯದೇವ ಮೇಲ್ಸೇತುವೆ ತೆರವು ಕಾರ್ಯ ನಡೆಸಲಾಗುತ್ತದೆ. ಮೇ ಅಂತ್ಯದಲ್ಲಿ ಬನ್ನೇರುಘಟ್ಟದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ತಲುಪುವ ಕಡೆಗಿನ ಫ್ಲೈಓವರ್ನ್ನು ಮೊದಲು ತೆರವುಗೊಳಿಸಲಾಗುತ್ತದೆ. ಬಳಿಕ ಮುಖ್ಯ ಮೇಲ್ಸೇತುವೆ ಭಾಗವನ್ನು ನಂತರದ ದಿನದಲ್ಲಿ ತೆರವುಗೊಳಿಸಲಾಗುತ್ತದೆ. 12 ವರ್ಷಗಳ ಹಳೆಯ ಸೇತುವೆಯನ್ನು ತೆರವುಗೊಳಿಸಲು ಎರಡರಿಂದ ಮೂರು ತಿಂಗಳ ಕಾಲಾವಕಾಶ ಬೇಕಾಗುತ್ತದೆ.
-
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ












Click it and Unblock the Notifications