2 ಹಂತಗಳಲ್ಲಿ ಜಯದೇವ ಮೇಲ್ಸೇತುವೆ ತೆರವು ಕಾರ್ಯ, ಎಲ್ಲಿ ಮೊದಲು?
ಬೆಂಗಳೂರು, ಏಪ್ರಿಲ್ 30: ನಮ್ಮ ಮೆಟ್ರೋ ನಿರ್ಮಾಣಕ್ಕಾಗಿ ಜಯದೇವ ಮೇಲ್ಸೇತುವೆಯನ್ನು ತೆರವುಗೊಳಿಸುವುದು ಅನಿವಾರ್ಯವಾಗಿದೆ. ಒಟ್ಟು 2 ಹಂತಗಳಲ್ಲಿ ತೆರವು ಕಾರ್ಯ ಕೈಗೊಳ್ಳಲಾಗುತ್ತಿದೆ.
ಮೇ ಅಂತ್ಯದಲ್ಲಿ ಬನ್ನೇರುಘಟ್ಟದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ತಲುಪುವ ಕಡೆಗಿನ ಫ್ಲೈಓವರ್ನ್ನು ಮೊದಲು ತೆರವುಗೊಳಿಸಲಾಗುತ್ತದೆ. ಬಳಿಕ ಮುಖ್ಯ ಮೇಲ್ಸೇತುವೆ ಭಾಗವನ್ನು ನಂತರದ ದಿನದಲ್ಲಿ ತೆರವುಗೊಳಿಸಲಾಗುತ್ತದೆ. 12 ವರ್ಷಗಳ ಹಳೆಯ ಸೇತುವೆಯನ್ನು ತೆರವುಗೊಳಿಸಲು ಎರಡರಿಂದ ಮೂರು ತಿಂಗಳ ಕಾಲಾವಕಾಶ ಬೇಕಾಗುತ್ತದೆ.
ಜಯದೇವ ಮೇಲ್ಸೇತುವೆ ತೆರವು ಕಾರ್ಯ ಸದ್ಯಕ್ಕಿಲ್ಲ, ಕಾರಣಗಳು ಇಲ್ಲಿವೆ
ಮೆಟ್ರೋ ನಿಗಮ ಫ್ಲೈಓವರ್ ತೆರವು ಕಾರ್ಯಕ್ಕೆ ನೀಡಿದ್ದ ಗಡುವು ಮುಕ್ತಾಯವಾಗಿದೆ. ಜಯದೇವ ಆಸ್ಪತ್ರೆ ಜಂಕ್ಷನ್ನಲ್ಲಿ ಸುಗಮ ಸಂಚಾರ ಕಲ್ಪಿಸಲು , ಸುತ್ತಮುತ್ತಲಿನ ಕಟ್ಟಡಗಳನ್ನು ತೆರವುಗೊಳಿಸಬೇಕಿದೆ. ಹೀಗಾಗಿ ಮೇಲುರಸ್ತೆ ತೆರವು ಕಾರ್ಯ ವಿಳಂಬವಾಗಿದೆ. ಈಗಾಗಲೇ ಸಂಚಾರ ಪೊಲೀಸರ ನೆರವಿನೊಂದಿಗೆ ಕಟ್ಟಡ ತೆರವು ಕಾರ್ಯ ಆರಂಭವಾಗಿದೆ.
ಬಿಎಂಆರ್ಸಿಎಲ್ ಮಾರ್ಚ್ ಅಂತ್ಯದಲ್ಲೇ ಆರಂಭಿಸಬೇಕಿತ್ತು
ಬಿಎಂಆರ್ಸಿಎಲ್ ತಿಳಿಸಿದ ಹಾಗೆ ಮಾರ್ಚ್ ಅಂತ್ಯ ಅಥವಾ ಏಪ್ರಿಲ್ ತಿಂಗಳ ಆರಂಭದಲ್ಲೇ ತೆರವು ಕಾರ್ಯವನ್ನು ಆರಂಭಿಸಬೇಕಿತ್ತು. ಆದರೆ ಹಲವಾರು ಕಾರಣಗಳಿಂದ ಮುಂದೂಡಿದೆ.
ಹೆಬ್ಬಾಳ ಜಂಕ್ಷನ್ನಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆ
ಮೇಲ್ಸೇತುವೆ ತೆರವಿಗೂ ಮುನ್ನ ಪರ್ಯಾಯ ವ್ಯವಸ್ಥೆ
ರೀಚ್ 5 ಹಾಗೂ ರೀಚ್ 6ರ ನಮ್ಮ ಮೆಟ್ರೋ ಕಾಮಗಾರಿ ಆರಂಭಕ್ಕೂ ಮುನ್ನ ಬಿಎಂಆರ್ಸಿಎಲ್ ವಾಹನ ಸವಾರರಿಗೆ ಅನನುಕೂಲವಾಗದಂತೆ ನೋಡಿಕೊಳ್ಳುವುದು ಕೂಡ ಕರ್ತವ್ಯವಾಗಿದೆ. 300ಕ್ಕೂ ಹೆಚ್ಚು ಕೆಲಸಗಾರರು ಮತದಾನ ಮಾಡಲು ಊರಿಗೆ ತೆರಳಿರುವ ಕಾರಣ ಕಾಮಗಾರಿ ವಿಳಂಬವಾಗುತ್ತಿದೆ.
ಹೆಬ್ಬಾಳ ಜಂಕ್ಷನ್ ನಲ್ಲಿ ಸದ್ಯದಲ್ಲೇ ಮಿನಿ ಪಾರ್ಕ್ ನಿರ್ಮಾಣ!
ಮೈಕೋ ಲೇಔಟ್ನಲ್ಲಿ ಆಗಲೇ ಪರ್ಯಾಯ ಮಾರ್ಗ
ಮೈಕೋ ಲೇಔಟ್ನಲ್ಲಿ ಟ್ರಾಫಿಕ್ ಪೊಲೀಸರೂ ಈಗಾಗಲೇ ಗುರಪ್ಪನಪಾಳ್ಯಕ್ಕೆ ತೆರಳುವವರು ಸರ್ವೀಸ್ ರಸ್ತೆ ಮೂಲಕ ತೆರಳಲು ಸೂಚಿಸಿದ್ದಾರೆ.
ಎರಡು ಹಂತದಲ್ಲಿ ಮೇಲ್ಸೇತುವೆ ತೆರವು ಕಾರ್ಯ
ಒಟ್ಟು ಎರಡು ಹಂತಗಳಲ್ಲಿ ಜಯದೇವ ಮೇಲ್ಸೇತುವೆ ತೆರವು ಕಾರ್ಯ ನಡೆಸಲಾಗುತ್ತದೆ. ಮೇ ಅಂತ್ಯದಲ್ಲಿ ಬನ್ನೇರುಘಟ್ಟದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ತಲುಪುವ ಕಡೆಗಿನ ಫ್ಲೈಓವರ್ನ್ನು ಮೊದಲು ತೆರವುಗೊಳಿಸಲಾಗುತ್ತದೆ. ಬಳಿಕ ಮುಖ್ಯ ಮೇಲ್ಸೇತುವೆ ಭಾಗವನ್ನು ನಂತರದ ದಿನದಲ್ಲಿ ತೆರವುಗೊಳಿಸಲಾಗುತ್ತದೆ. 12 ವರ್ಷಗಳ ಹಳೆಯ ಸೇತುವೆಯನ್ನು ತೆರವುಗೊಳಿಸಲು ಎರಡರಿಂದ ಮೂರು ತಿಂಗಳ ಕಾಲಾವಕಾಶ ಬೇಕಾಗುತ್ತದೆ.