ಜಯದೇವ ಮೇಲ್ಸೇತುವೆ ತೆರವು ಕಾರ್ಯ ಸದ್ಯಕ್ಕಿಲ್ಲ, ಕಾರಣಗಳು ಇಲ್ಲಿವೆ
ಬೆಂಗಳೂರು, ಏ.24: ಜಯದೇವ ಮೇಲ್ಸೇತುವೆ ತೆರವು ಕಾರ್ಯ ದಿನದಿಂದ ದಿನಕ್ಕೆ ವಿಳಂಬವಾಗುತ್ತಾ ಹೋಗುತ್ತಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈಗಾಗಲೇ ತೆರವು ಕಾರ್ಯ ಆರಂಭಗೊಂಡು ಒಂದು ತಿಂಗಳು ಕಳೆಯಬೇಕಿತ್ತು, ಆದರೆ ಇದುವರೆಗೂ ಕಾರ್ಯ ಆರಂಭಗೊಂಡಿಲ್ಲ. ಇದಕ್ಕೆ ಬಿಎಂಆರ್ಸಿಎಲ್ ನೇರ ಕಾರಣವಾಗಿದೆ.
ಮೆಟ್ರೋ ಕಾಮಗಾರಿಗೆ ಅಗತ್ಯವಿರುವ ಭೂಮಿಯ ಸ್ವಾಧೀನ ಪ್ರಕ್ರಿಯೆ ತಡವಾಗಿದೆ. ಹೀಗಾಗಿ ಮೇಲು ರಸ್ತೆ ತೆರವು ಕಾರ್ಯವನ್ನು ಒಂದೆರೆಡು ತಿಂಗಳುಗಳ ಕಾಲ ಮುಂದೂಡಲಾಗಿದೆ.
ಮೆಟ್ರೋ ಅಧಿಕಾರಿಗಳು ಮಾರ್ಚ್ ಅಂತ್ಯದ ವೇಳೆಗೆ ಫ್ಲೈಓವರ್ ತೆರವು ಗೊಳಿಸುವುದಾಗಿ ಹೇಳಿದ್ದರು ಆದರೆ ಅಂತಹ ಯಾವುದೇ ಲಕ್ಷಣಗಳೂ ಗೋಚರಿಸುತ್ತಿಲ್ಲ.

ಮೆಟ್ರೋ ನಿಗಮ ನೀಡಿದ್ದ ಗಡುವು ಮೀರಿದೆ
ಮೆಟ್ರೋ ನಿಗಮ ಫ್ಲೈಓವರ್ ತೆರವು ಕಾರ್ಯಕ್ಕೆ ನೀಡಿದ್ದ ಗಡುವು ಮುಕ್ತಾಯವಾಗಿದೆ. ಜಯದೇವ ಆಸ್ಪತ್ರೆ ಜಂಕ್ಷನ್ನಲ್ಲಿ ಸುಗಮ ಸಂಚಾರ ಕಲ್ಪಿಸಲು , ಸುತ್ತಮುತ್ತಲಿನ ಕಟ್ಟಡಗಳನ್ನು ತೆರವುಗೊಳಿಸಬೇಕಿದೆ. ಹೀಗಾಗಿ ಮೇಲುರಸ್ತೆ ತೆರವು ಕಾರ್ಯ ವಿಳಂಬವಾಗಿದೆ. ಈಗಾಗಲೇ ಸಂಚಾರ ಪೊಲೀಸರ ನೆರವಿನೊಂದಿಗೆ ಕಟ್ಟಡ ತೆರವು ಕಾರ್ಯ ಆರಂಭವಾಗಿದೆ.

ಗೊಟ್ಟಿಗೆರೆ-ನಾಗವಾರ ಮೆಟ್ರೋ ಕಾಮಗಾರಿ ಚುರುಕು
ಗೊಟ್ಟಿಗೆರೆ-ನಾಗವಾರ ಮಾರ್ಗ ನಿರ್ಮಾಣ ಕಾಮಗಾರಿ ಚುರುಕಿನಿಂದ ಸಾಗಿದೆ. ಐಐಎಂಬಿ ಜಂಕ್ಷನ್ನಲ್ಲಿ ಡಕ್ಟ್ಗಳನ್ನು ಅಳವಡಿಸಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಕಾರ್ಮಿಕರು ಮತದಾನ ಮಾಡಲು ಊರಿಗೆ ತೆರಳಿದ್ದಾರೆ. ಅವರು ವಾಪಸಾದ ಬಳಿಕ ಕಾಮಗಾರಿಯು ಮತ್ತಷ್ಟು ವೇಗ ಪಡೆದುಕೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

ಫ್ಲೈಓವರ್ ತೆರವಿಗೆ ಸಕಲ ಸಿದ್ಧತೆ
ಜಯದೇವ ಜಂಕ್ಷನ್ನಲ್ಲಿನ ಫ್ಲೈಓವರ್ ತೆರವಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ಅಥವಾ ಎರಡು ತಿಂಗಳಲ್ಲಿ ತೆರವು ಕಾರ್ಯ ಆರಂಭಗೊಳ್ಳಲಿದೆ. ನಂತರ ಎರಡು ತಿಂಗಳೊಳಗೆ ತೆರವು ಕಾರ್ಯ ಮುಗಿಯಲಿದೆ.

ಬಿಟಿಎಂ ರಸ್ತೆ ಹೆಚ್ಚು ಅಪಾಯಕಾರಿ
ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ಬಹುತೇಕರು ಬಿಟಿಎಂ ಬಡಾವಣೆಯ ರಸ್ತೆಗಳ ಮೂಲಕ ಬನ್ನೇರುಘಟ್ಟ ರಸ್ತೆಯನ್ನು ತಲುಪುತ್ತಾರೆ. ಈ ರಸ್ತೆಗಳು ವಾಹನ ಸವಾರರಿಗೆ ಅಪಾಯಕಾರಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications