ಜಯದೇವ ಮೇಲ್ಸೇತುವೆ ತೆರವು ಕಾರ್ಯ ಸದ್ಯಕ್ಕಿಲ್ಲ, ಕಾರಣಗಳು ಇಲ್ಲಿವೆ
ಬೆಂಗಳೂರು, ಏ.24: ಜಯದೇವ ಮೇಲ್ಸೇತುವೆ ತೆರವು ಕಾರ್ಯ ದಿನದಿಂದ ದಿನಕ್ಕೆ ವಿಳಂಬವಾಗುತ್ತಾ ಹೋಗುತ್ತಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈಗಾಗಲೇ ತೆರವು ಕಾರ್ಯ ಆರಂಭಗೊಂಡು ಒಂದು ತಿಂಗಳು ಕಳೆಯಬೇಕಿತ್ತು, ಆದರೆ ಇದುವರೆಗೂ ಕಾರ್ಯ ಆರಂಭಗೊಂಡಿಲ್ಲ. ಇದಕ್ಕೆ ಬಿಎಂಆರ್ಸಿಎಲ್ ನೇರ ಕಾರಣವಾಗಿದೆ.
ಮೆಟ್ರೋ ಕಾಮಗಾರಿಗೆ ಅಗತ್ಯವಿರುವ ಭೂಮಿಯ ಸ್ವಾಧೀನ ಪ್ರಕ್ರಿಯೆ ತಡವಾಗಿದೆ. ಹೀಗಾಗಿ ಮೇಲು ರಸ್ತೆ ತೆರವು ಕಾರ್ಯವನ್ನು ಒಂದೆರೆಡು ತಿಂಗಳುಗಳ ಕಾಲ ಮುಂದೂಡಲಾಗಿದೆ.
ಮೆಟ್ರೋ ಅಧಿಕಾರಿಗಳು ಮಾರ್ಚ್ ಅಂತ್ಯದ ವೇಳೆಗೆ ಫ್ಲೈಓವರ್ ತೆರವು ಗೊಳಿಸುವುದಾಗಿ ಹೇಳಿದ್ದರು ಆದರೆ ಅಂತಹ ಯಾವುದೇ ಲಕ್ಷಣಗಳೂ ಗೋಚರಿಸುತ್ತಿಲ್ಲ.

ಮೆಟ್ರೋ ನಿಗಮ ನೀಡಿದ್ದ ಗಡುವು ಮೀರಿದೆ
ಮೆಟ್ರೋ ನಿಗಮ ಫ್ಲೈಓವರ್ ತೆರವು ಕಾರ್ಯಕ್ಕೆ ನೀಡಿದ್ದ ಗಡುವು ಮುಕ್ತಾಯವಾಗಿದೆ. ಜಯದೇವ ಆಸ್ಪತ್ರೆ ಜಂಕ್ಷನ್ನಲ್ಲಿ ಸುಗಮ ಸಂಚಾರ ಕಲ್ಪಿಸಲು , ಸುತ್ತಮುತ್ತಲಿನ ಕಟ್ಟಡಗಳನ್ನು ತೆರವುಗೊಳಿಸಬೇಕಿದೆ. ಹೀಗಾಗಿ ಮೇಲುರಸ್ತೆ ತೆರವು ಕಾರ್ಯ ವಿಳಂಬವಾಗಿದೆ. ಈಗಾಗಲೇ ಸಂಚಾರ ಪೊಲೀಸರ ನೆರವಿನೊಂದಿಗೆ ಕಟ್ಟಡ ತೆರವು ಕಾರ್ಯ ಆರಂಭವಾಗಿದೆ.

ಗೊಟ್ಟಿಗೆರೆ-ನಾಗವಾರ ಮೆಟ್ರೋ ಕಾಮಗಾರಿ ಚುರುಕು
ಗೊಟ್ಟಿಗೆರೆ-ನಾಗವಾರ ಮಾರ್ಗ ನಿರ್ಮಾಣ ಕಾಮಗಾರಿ ಚುರುಕಿನಿಂದ ಸಾಗಿದೆ. ಐಐಎಂಬಿ ಜಂಕ್ಷನ್ನಲ್ಲಿ ಡಕ್ಟ್ಗಳನ್ನು ಅಳವಡಿಸಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಕಾರ್ಮಿಕರು ಮತದಾನ ಮಾಡಲು ಊರಿಗೆ ತೆರಳಿದ್ದಾರೆ. ಅವರು ವಾಪಸಾದ ಬಳಿಕ ಕಾಮಗಾರಿಯು ಮತ್ತಷ್ಟು ವೇಗ ಪಡೆದುಕೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

ಫ್ಲೈಓವರ್ ತೆರವಿಗೆ ಸಕಲ ಸಿದ್ಧತೆ
ಜಯದೇವ ಜಂಕ್ಷನ್ನಲ್ಲಿನ ಫ್ಲೈಓವರ್ ತೆರವಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ಅಥವಾ ಎರಡು ತಿಂಗಳಲ್ಲಿ ತೆರವು ಕಾರ್ಯ ಆರಂಭಗೊಳ್ಳಲಿದೆ. ನಂತರ ಎರಡು ತಿಂಗಳೊಳಗೆ ತೆರವು ಕಾರ್ಯ ಮುಗಿಯಲಿದೆ.

ಬಿಟಿಎಂ ರಸ್ತೆ ಹೆಚ್ಚು ಅಪಾಯಕಾರಿ
ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ಬಹುತೇಕರು ಬಿಟಿಎಂ ಬಡಾವಣೆಯ ರಸ್ತೆಗಳ ಮೂಲಕ ಬನ್ನೇರುಘಟ್ಟ ರಸ್ತೆಯನ್ನು ತಲುಪುತ್ತಾರೆ. ಈ ರಸ್ತೆಗಳು ವಾಹನ ಸವಾರರಿಗೆ ಅಪಾಯಕಾರಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications