ಜನವರಿ 16ರಿಂದ ಜಯದೇವ ಮೇಲ್ಸೇತುವೆ ತೆರವು ಕಾರ್ಯ ಆರಂಭ
ಬೆಂಗಳೂರು, ಜನವರಿ 14: ಜಯದೇವ ಮೇಲ್ಸೇತುವೆ ತೆರವು ಕಾರ್ಯ ಜನವರಿ 16ರಿಂದ ಆರಂಭಗೊಳ್ಳಲಿದೆ.
ನಮ್ಮ ಮೆಟ್ರೋ ನಿರ್ಮಾಣಕ್ಕಾಗಿ ಜಯದೇವ ಮೇಲ್ಸೇತುವೆಯನ್ನು ತೆರವುಗೊಳಿಸುವುದು ಅನಿವಾರ್ಯವಾಗಿದೆ. ಒಟ್ಟು 2 ಹಂತಗಳಲ್ಲಿ ತೆರವು ಕಾರ್ಯ ಕೈಗೊಳ್ಳಲಾಗುತ್ತಿದೆ. ವಾಹನ ಸವಾರರಿಗೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗುತ್ತಿದೆ. 2017ರಲ್ಲಿಯೇ ಜಯದೇವ ಮೇಲ್ಸೇತುವೆ ತೆರವಿಗೆ ಅನುಮತಿ ದೊರೆತಿತ್ತು.

ಯಾವ್ಯಾವ ವಾಹನಗಳಿಗೆ ಓಡಾಡಲು ಅವಕಾಶ
ಕೇವಲ ಬಿಎಂಟಿಸಿ, ದ್ವಿಚಕ್ರ ವಾಹನ ಮತ್ತು ಆಂಬ್ಯುಲೆನ್ಸ್ ಗೆ ಮಾತ್ರ ಅಂಡರ್ ಪಾಸ್ ಕೆಳಗೆ ಓಡಾಡಲು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10ರವರೆಗೂ ಅವಕಾಶ ನೀಡಲಾಗುತ್ತದೆ. ಕಾರು ಸೇರಿದಂತೆ ಇನ್ನಿತರೆ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗುತ್ತದೆ. ಬನ್ನೇರುಘಟ್ಟ ರಸ್ತೆಯಿಂದ ಜಯದೇವ ಜಂಕ್ಷನ್ ಮಾರ್ಗದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ.

2019ರಲ್ಲೇ ಕಾಮಗಾರಿ ಆರಂಭಿಸಬೇಕಿತ್ತು
2019ರ ಮೇ ತಿಂಗಳಿನಲ್ಲಿಯೇ ಕಾಮಗಾರಿ ಆರಂಭವಾಗಬೇಕಿತ್ತು. ಆದರೆ ಬದಲಿ ಮಾರ್ಗದಲ್ಲಿ ಜಲಮಂಡಳಿ, ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದ ಕಾರಣ ತಡವಾಗಿದೆ.
ಮೇ ಅಂತ್ಯದಲ್ಲಿ ಬನ್ನೇರುಘಟ್ಟದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ತಲುಪುವ ಕಡೆಗಿನ ಫ್ಲೈಓವರ್ನ್ನು ಮೊದಲು ತೆರವುಗೊಳಿಸಲಾಗುತ್ತದೆ. ಬಳಿಕ ಮುಖ್ಯ ಮೇಲ್ಸೇತುವೆ ಭಾಗವನ್ನು ನಂತರದ ದಿನದಲ್ಲಿ ತೆರವುಗೊಳಿಸಲಾಗುತ್ತದೆ. 12 ವರ್ಷಗಳ ಹಳೆಯ ಸೇತುವೆಯನ್ನು ತೆರವುಗೊಳಿಸಲು ಎರಡರಿಂದ ಮೂರು ತಿಂಗಳ ಕಾಲಾವಕಾಶ ಬೇಕಾಗುತ್ತದೆ.

ಮೇಲ್ಸೇತುವೆ ತೆರವಿಗೂ ಮುನ್ನ ಪರ್ಯಾಯ ವ್ಯವಸ್ಥೆ
ರೀಚ್ 5 ಹಾಗೂ ರೀಚ್ 6ರ ನಮ್ಮ ಮೆಟ್ರೋ ಕಾಮಗಾರಿ ಆರಂಭಕ್ಕೂ ಮುನ್ನ ಬಿಎಂಆರ್ಸಿಎಲ್ ವಾಹನ ಸವಾರರಿಗೆ ಅನನುಕೂಲವಾಗದಂತೆ ನೋಡಿಕೊಳ್ಳುವುದು ಕೂಡ ಕರ್ತವ್ಯವಾಗಿದೆ. 300ಕ್ಕೂ ಹೆಚ್ಚು ಕೆಲಸಗಾರರು ಮತದಾನ ಮಾಡಲು ಊರಿಗೆ ತೆರಳಿರುವ ಕಾರಣ ಕಾಮಗಾರಿ ವಿಳಂಬವಾಗುತ್ತಿದೆ.

ಮೈಕೋ ಲೇಔಟ್ನಲ್ಲಿ ಆಗಲೇ ಪರ್ಯಾಯ ಮಾರ್ಗ
ಮೈಕೋ ಲೇಔಟ್ನಲ್ಲಿ ಟ್ರಾಫಿಕ್ ಪೊಲೀಸರೂ ಈಗಾಗಲೇ ಗುರಪ್ಪನಪಾಳ್ಯಕ್ಕೆ ತೆರಳುವವರು ಸರ್ವೀಸ್ ರಸ್ತೆ ಮೂಲಕ ತೆರಳಲು ಸೂಚಿಸಿದ್ದಾರೆ.

ಎರಡು ಹಂತದಲ್ಲಿ ಮೇಲ್ಸೇತುವೆ ತೆರವು ಕಾರ್ಯ
ಒಟ್ಟು ಎರಡು ಹಂತಗಳಲ್ಲಿ ಜಯದೇವ ಮೇಲ್ಸೇತುವೆ ತೆರವು ಕಾರ್ಯ ನಡೆಸಲಾಗುತ್ತದೆ. ಮೇ ಅಂತ್ಯದಲ್ಲಿ ಬನ್ನೇರುಘಟ್ಟದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ತಲುಪುವ ಕಡೆಗಿನ ಫ್ಲೈಓವರ್ನ್ನು ಮೊದಲು ತೆರವುಗೊಳಿಸಲಾಗುತ್ತದೆ. ಬಳಿಕ ಮುಖ್ಯ ಮೇಲ್ಸೇತುವೆ ಭಾಗವನ್ನು ನಂತರದ ದಿನದಲ್ಲಿ ತೆರವುಗೊಳಿಸಲಾಗುತ್ತದೆ. 12 ವರ್ಷಗಳ ಹಳೆಯ ಸೇತುವೆಯನ್ನು ತೆರವುಗೊಳಿಸಲು ಎರಡರಿಂದ ಮೂರು ತಿಂಗಳ ಕಾಲಾವಕಾಶ ಬೇಕಾಗುತ್ತದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications