ನಾಲ್ಕು ದಿನದಲ್ಲಿ 200 ಬಡ ರೋಗಿಗಳ ಜೀವ ಉಳಿಸಿದ ಜಯದೇವ ವೈದ್ಯರು
ಬೆಂಗಳೂರು, ಅಕ್ಟೋಬರ್ 16: ನಗರದ ಹೆಮ್ಮೆಯ ಜಯದೇವ ಹೃದ್ರೋಗ ಆಸ್ಪತ್ರೆ ಮತ್ತೊಮ್ಮೆ ಬೆಂಗಳೂರಿನ ಜನ ಹೆಮ್ಮೆಯಿಂದ ಎದೆ ಉಬ್ಬಿಸುವ ಕಾರ್ಯ ಮಾಡಿದೆ.
ಮೊದಲಿನಿಂದಲೂ ತಮ್ಮ ಅಪ್ರತಿಮ ಶುಶ್ರೂಷೆ ಹಾಗೂ ಬಡವರ ಪರ ಕಾಳಜಿಯಿಂದ ಹೆಸರಾಗಿರುವ ಜಯದೇವ ಹೃದ್ರೋಗ ಆಸ್ಪತ್ರೆಯು ಇದೀಗ ಸೇವೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದು ಕೇವಲ 4 ದಿನದಲ್ಲಿ 200 ಬಡರೋಗಿಗಳಿಗೆ ಉಚಿತವಾಗಿ ಆಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.
ಹೌದು, ಕೇವಲ ನಾಲ್ಕೇ ದಿನದಲ್ಲಿ 200 ರೋಗಿಗಳ ಆಂಜಿಯೋಪ್ಲಾಸ್ಟಿಯನ್ನು ಸಮರೋಪಾಧಿಯಲ್ಲಿ ಮಾಡಿ ಅಷ್ಟೂ ಜನರ ಜೀವ ಉಳಿಸಿದ್ದಾರೆ. ಇವರ ಈ ಸಾಧನೆ ಹೊಸ ಮೈಲಿಗಲ್ಲಾಗಿದೆ.

ಜಯದೇವ ಆಸ್ಪತ್ರೆಯು ಡಾ.ಗೋವಿಂದರಾಜು ಸುಬ್ರಹ್ಮಣಿ ಹಾರ್ಟ್ ಫೌಂಡೇಶನ್ ಹಾಗೂ ಅಮೆರಿಕದ ಮೆಡ್ಟ್ರಾನಿಕ್ ವ್ಯಾಸ್ಕುಲರ್ ಡಿವಿಷನ್ ಅವರ ಸಹಭಾಗಿತ್ವದಲ್ಲಿ 200 ಜನರಿಗೆ ಆಪರೇಷನ್ ಮಾಡಿ ಸ್ಟಂಟ್ ಅಳವಡಿಸಿದೆ.
ಉಚಿತವಾಗಿ ಸ್ಟಂಟ್ ಅಳವಡಿಸಿಕೊಂಡ ಎಲ್ಲ 200 ರೋಗಿಗಳೂ ಸಹ ಬಡವರೇ ಆಗಿದ್ದರು ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಸಿ.ಎನ್.ಮಂಜುನಾಥ ಅವರು ಹೇಳಿದ್ದಾರೆ. ಈ ರೋಗಿಗಳಲ್ಲಿ ನಮ್ಮ ಆಸ್ಪತ್ರೆಯ ಜೊತೆಗೆ ಹೊರ ರಾಜ್ಯದ ಕೆಲವು ರೋಗಿಗಳೂ ಇದ್ದರು.

ಈ ಬೃಹತ್ ಕಾರ್ಯಾಚರಣೆಯಲ್ಲಿ ಏಳು ಕ್ಯಾಥ್ ಲ್ಯಾಬ್ಗಳು, 75 ನುರಿತ ವೈದ್ಯರು ಹಾಗೂ ತಂತ್ರಜ್ಞರು, ಹಲವು ನರ್ಸ್ಗಳು, ಡಿ ದರ್ಜೆ ನೌಕರರು ಸತತವಾಗಿ ಕೆಲವ ಮಾಡಿ ಇಷ್ಟೂ ಆಪರೇಷನ್ಗಳು ಯಶಸ್ವಿ ಆಗಲು ಸಹಕರಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗಷ್ಟೆ ಡಾ.ಸಿ.ಎನ್.ಮಂಜುನಾಥ ಅವರು 'ವೈದ್ಯರು ಸೇವೆ ಮಾಡುವ ಅವಶ್ಯಕತೆ' ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ವಿಡಿಯೋ ವೈರಲ್ ಆಗಿ ಭಾರಿ ಮನ್ನಣೆ ಗಳಿಸಿತ್ತು. ಈಗ ಅವರು ಅದನ್ನು ಮತ್ತೊಮ್ಮೆ ಮಾಡಿ ತೋರಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications