ಶಾಸಕ ವಿಜಯಕುಮಾರ್ ನಿಧನ: ಜಯನಗರ ಚುನಾವಣೆ ಮುಂದೂಡಿಕೆ
Recommended Video

ಬೆಂಗಳೂರು, ಮೇ 4:ಜಯನಗರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ನಿಧನರಾದ ಹಿನ್ನಲೆಯಲ್ಲಿ ಈ ಕ್ಷೇತ್ರದ ಮತದಾನವನ್ನು ಚುನಾವಣಾ ಆಯೋಗ ಮುಂದೂಡಿ ಆದೇಶ ಹೊರಡಿಸಿದೆ.
ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಜಯನಗರ ಚುನಾವಣೆಯನ್ನು ಚುನಾವಣಾ ಆಯೋಗ ಮುಂದೂಡಿದೆ. ಈ ಕುರಿತು ಈ ಬಗ್ಗೆ ಚುನಾವಣಾ ಆಯೋಗ ಅಧಿಕೃತ ಘೋಷಣೆ ಹೊರಡಿಸಿದೆ. ಜಯದೇವ ಹೃದ್ರೋಗ ಆಸ್ಪತ್ರೆ ವೈದ್ಯಾಧಿಕಾರಿಗಳಿಂದ ಮರಣ ಪ್ರಮಾಣ ಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಜಯನಗರ ವಿಧಾನ ಸಭಾ ಚುನಾವಣೆ ಮುಂದೂಡಲಾಗಿದೆ.
ಜಯನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಅವರು ಕಣಕ್ಕಿಳಿದಿದ್ದರು. ಜೆಡಿಎಸ್ನಿಂದ ಕಾಳೇಗೌಡ ಅವರು ಕಣಕ್ಕಿಳಿದಿದ್ದರು. ಕ್ಷೇತ್ರದ ಮತ್ತೊಬ್ಬ ಪ್ರಮುಖ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಅವರು ಪಕ್ಷೇತರವಾಗಿ ಕಣಕ್ಕಿಳಿದಿದ್ದರು.

ಜಯನಗರದಲ್ಲಿ ಈ ಬಾರಿ ವಿಜಯ್ ಕುಮಾರ್ ಹಾಗೂ ಸೌಮ್ಯರೆಡ್ಡಿ ನಡುವೆ ನೇರ ಸ್ಪರ್ಧೆ ಎಂದೇ ಬಿಂಬಿಸಲಾಗುತ್ತಿತ್ತು. ಇದೀಗ ವಿಜಕುಮಾರ್ ಅವರು ನಿಧನ ಹೊಂದಿದ್ದು, ಚುನಾವಣೆ ನಡೆದಾಗ ಬಿಜೆಪಿ ಯಾರಿಗೆ ಟಿಕೆಟ್ ನೀಡಲಿದೆ ಹಾಗೂ ಸಜ್ಜನ ರಾಜಕಾರಣಿ ಎಂದು ಹೆಸರಾಗಿದ್ದ ವಿಜಯಕುಮಾರ್ ಅವರ ಸಾವು ಕಾಂಗ್ರೆಸ್ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ಕಾದು ನೋಡಬೇಕಿದೆ. ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳಲ್ಲಿ ಯಾವುದೇ ಬದಲಾವಣೆಯಿಲ್ಲ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications