Get Updates
Get notified of breaking news, exclusive insights, and must-see stories!

ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆಯಿಂದಾಗಿ ಸೋಲು : ಬಿಎಸ್‌ವೈ

Recommended Video

      ಜಯನಗರದಲ್ಲಿ ಬಿಜೆಪಿ ಸೋಲಿಗೆ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಕಾರಣ ಅಂದ್ರು ಬಿ ಎಸ್ ವೈ | Oneindia Kannada

      ಬೆಂಗಳೂರು, ಜೂನ್ 13 : 'ಜಯನಗರದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡ ಕಾರಣ ಬಿಜೆಪಿ ಅಭ್ಯರ್ಥಿ ಅಲ್ಪ ಮತಗಳಿಂದ ಪರಾಭವಗೊಳ್ಳುವಂತಾಯಿತು' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

      ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, 'ಜಯನಗರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಬಿ.ಎನ್.ಪ್ರಹ್ಲಾದ್ ಅವರು ಕಡಿಮೆ ಅಂತರದಿಂದ ಸೋತಿದ್ದಾರೆ. ನಮ್ಮ ಕಾರ್ಯಕರ್ತರು ಚುನಾವಣೆಯಲ್ಲಿ ಹಗಲಿರುಳು ಕೆಲಸ ಮಾಡಿದ್ದಾರೆ, ಅವರಿಗೆ ಕೃತಜ್ಞತೆ ಸಲ್ಲಿಸುವೆ' ಎಂದರು.

      'ಕಡೆಗಳಿಗೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಂಡವು. ಆದ್ದರಿಂದ, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಲ್ಪ ಮತಗಳ ಅಂತರದಿಂದ ಪರಾಭವಗೊಳ್ಳುವಂತಾಯಿತು' ಎಂದು ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದರು.

      Jayanagar elections : We lost because of Congress-JDS alliance says BSY

      'ಬಿ.ಎನ್.ಪ್ರಹ್ಲಾದ್ ಬಾಬು ಅವರು ಹೊಸ ಮುಖ. ಜನರಿಗೆ ಅವರ ಪರಚಯವಿರಲಿಲ್ಲ. ಆದರೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಎಲ್ಲಾ ಕಾರ್ಯಕರ್ತರ ಶ್ರಮದಿಂದ ಇಷ್ಟು ಮತಗಳು ಸಿಕ್ಕಿವೆ' ಎಂದು ಯಡಿಯೂರಪ್ಪ ಹೇಳಿದರು.

      ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಬುಧವಾರ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ 54,457 ಮತಗಳನ್ನು ಪಡೆದು ಜಯಗಳಿಸಿದರು. ಬಿಜೆಪಿಯ ಬಿ.ಎನ್.ಪ್ರಹ್ಲಾದ್ 51,568 ಮತಗಳನ್ನು ಪಡೆದಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+