ಕುಟುಂಬಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಕ್ಯಾನ್ಸರ್ಗೆ ಬಲಿ
ಬೆಂಗಳೂರು, ಜೂನ್ 05: ಕುಟುಂಬ, ಸಂಸಾರಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ಜಯನಗರ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಭಾನುವಾರ ಲಿವರ್ ಕ್ಯಾನ್ಸರ್ನಿಂದ ಸಾವನ್ನಪ್ಪಿದ್ದಾರೆ.
ಲಿವರ್ ಕ್ಯಾನ್ಸರ್ ಕೊನೆಯ ಹಂತದಲ್ಲಿರುವಾಗ ಕಳೆದ ಜನವರಿಯಿಂದ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿರುವುದು ತಿಳಿದಿದ್ದು, ಚಿಕಿತ್ಸೆ ಪಡೆಯಲು 15 ದಿನಗಳ ರಜೆ ತೆಗೆದುಕೊಂಡಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಆದರೆ, ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೇ ಮಂಜುನಾಥ್ ಸಾವನ್ನಪ್ಪಿದ್ದಾರೆ. ಹುಟ್ಟೂರು ಹಾಸನಕ್ಕೆ ಇನ್ಸ್ಪೆಕ್ಟರ್ ಮಂಜುನಾಥ್ ಮೃತದೇಹ ರವಾನೆ ಮಾಡಲಾಗಿದ್ದು, ಹಾಸನದಲ್ಲಿ ಅಂತಿಮ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಮೃತ ಇನ್ಸ್ಪೆಕ್ಟರ್ ಮಂಜುನಾಥ್ ಅವರಿಗೆ ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದು, ಮಂಜುನಾಥ್ ಅವರಿಗೆ ಪತ್ನಿ ಹಾಗೂ ಚಿಕ್ಕ ಮಗನಿದ್ದಾನೆ. ದಕ್ಷ ಹಾಗೂ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುವ ಮೂಲಕ ಹಂತ ಹಂತವಾಗಿ ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಾ ಬಂದಿದ್ದ ಮಂಜುನಾಥ್ ಬೆಂಗಳೂರಿನ ಜಯನಗರ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದರು. ಆದರೆ, ಗುಣಪಡಿಸಲಾಗದ ಮಾರಕ ರೋಗದಿಂದ ಎಲ್ಲರನ್ನು ಅಗಲಿದ್ದಾರೆ.
ಹಾಸನ ಮೂಲದವರಾದ ಇನ್ಸ್ಪೆಕ್ಟರ್ ಮಂಜುನಾಥ್ ಯುಆರ್ 2007ನೇ ಬ್ಯಾಚ್ ನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ವೃತ್ತಿಗೆ ಸೇರಿಕೊಂಡಿದ್ದರು. ಕಳೆದ 2021 ರಲ್ಲಿ ಮುಖ್ಯಮಂತ್ರಿ ಪದಕಕ್ಕೂ ಭಾಜನರಾಗಿದ್ದರು. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ತಮ್ಮ 15 ವರ್ಷಗಳ ಸೇವೆಯಲ್ಲಿ ಹಲವಾರು ಪ್ರಕರಣಗಳನ್ನು ಪರಿಹರಿಸಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದಾರೆ. ಅವರನ್ನು ಕೆಲವೆಡೆ ಪೀಪಲ್ಸ್ ಮ್ಯಾನ್ ಎಂದು ಕರೆಯಲಾಗುತ್ತಿತ್ತು. ಜೊತೆಗೆ, ರಾಜ್ಯದ ಹಲವಾರು ಸಂಸ್ಥೆಗಳಿಂದ ಗುರುತಿಸಿ ಸನ್ಮಾನಿಸಲಾಗಿತ್ತು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications