ಏ.22 ರಂದು ಜಯಂತ್ ಕಾಯ್ಕಿಣಿ ಅವರ 2 ಪುಸ್ತಕ ಲೋಕಾರ್ಪಣೆ
ಬೆಂಗಳೂರು, ಏಪ್ರಿಲ್ 21: ಖ್ಯಾತ ಕವಿ, ಕಥೆಗಾರ, ಚಿತ್ರ ಸಾಹಿತಿ ಜಯಂತ ಕಾಯ್ಕಿಣಿ ಅವರ 'ಗುಲ್ ಮೋಹರ್ ನುಡಿನೋಟಗಳು' ಮತ್ತು 'ಜಯಂತ ಕಾಯ್ಕಿಣಿ ರೂಪಾಂತರಿಸಿದ ನಾಟಕಗಳು' ಎಂಬ ಎರಡು ಪುಸ್ತಕಗಳು ಏ.22 ರಂದು ಬಿಡುಗಡೆಯಾಗಲಿವೆ.
ಅಂಕಿತಾ ಪ್ರಕಾಶನ ಹೊರತರುತ್ತಿರುವ ಈ ಪುಸ್ತಕಗಳು ಬೆಂಗಳೂರಿನ ಬಸವನಗುಡಿಯ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಡ್ ಕಲ್ಚರ್ ನ ವಾಡಿಯಾ ಸಭಾಂಗಣದಲ್ಲಿ ಏ.22 ರಂದು ಬೆಳಿಗ್ಗೆ 10:30 ಕ್ಕೆ ಲೋಕಾರ್ಪಣೆಗೊಳ್ಳಲಿವೆ.

ಭಾಷೆ, ಲಿಪಿ,ಕಲೆ, ಸಂಗೀತ, ವಿಜ್ಞಾನ, ಸಾಹಿತ್ಯಗಳ ಸಂಯುಕ್ತ ಆಸಕ್ತಿಯ ಪಯಣಿಗ, 'ನುಡಿ' ತಂತ್ರಾಂಶದ ರೂವಾರಿ ಕೆ.ಪಿ.ರಾವ್ ಮತ್ತು ಐತಿಹ್ಯಗಳನ್ನು ಮಾನವಿಕ ಆಸಕ್ತಿಯಿಂದ ವಿಸ್ತರಿಸುವ ಕಥನಕಾರ, ಕೃಷಿ ವಿಜ್ಞಾನಿ ಕೆ.ಎನ್.ಗಣೇಶಯ್ಯ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಗುಲ್ ಮೋಹರ್ ನುಡಿನೋಟಗಳು ಮತ್ತು 'ಸೇವಂತಿ ಪ್ರಸಂಗ', 'ಜತೆಗಿರುವನು ಚಂದಿರ', 'ಇಂತಿ ನಿನ್ನ ಅಮೃತಾ' ಈ ಮೂರು ರೂಪಾಂತರಿಸಿದ ನಾಟಕಗಳ ಕೃತಿ ಬಿಡುಗಡೆಗೆ ಸಹೃದಯರಿಗೆ ಆತ್ಮೀಯ ಆಹ್ವಾನವಿದೆ.
More From
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ










Click it and Unblock the Notifications