ಸಿದ್ದರಾಮಯ್ಯ ಹೊಗಳಿದ ಜೆಡಿಎಸ್ ಶಾಸಕ ಗೋಪಾಲಯ್ಯ
ಬೆಂಗಳೂರು, ಅ. 15 : 'ನಾನು ಬಿಬಿಎಂಪಿ ಸದಸ್ಯನಾಗಲು ಮತ್ತು ಶಾಸಕನಾಗಲು ಸಿದ್ದರಾಮಯ್ಯನವರ ಆಶೀರ್ವಾದ ಕಾರಣ' ಎಂದು ಹೇಳುವ ಮೂಲಕ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಜೆಡಿಎಸ್ ಶಾಸಕ ಗೋಪಾಲಯ್ಯ ಅಚ್ಚರಿ ಮೂಡಿಸಿದ್ದಾರೆ. ಗೋಪಾಲಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಅವರು ಶಾಸಕನಾಗಲು ನಾನು ಸಹಾಯ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬುಧವಾರ ಮಹಾಲಕ್ಷ್ಮಿ ಲೇಔಟ್ನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಗೋಪಾಲಯ್ಯ 'ನಾನು ಬಿಬಿಎಂಪಿ ಸದಸ್ಯನಾಗಲು ಸಿದ್ದರಾಮಯ್ಯ ಅವರು ಕಾರಣ, ಶಾಸಕನಾಗಲೂ ಅವರ ಆಶೀರ್ವಾದವೇ ಕಾರಣ. ಮುಖ್ಯಮಂತ್ರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರನ್ನು ಹೊಗಳಿದರು. [ವಿಧಾನಸಭಾ ಚುನಾವಣೆ ಫಲಿತಾಂಶ]

'ನಾನು ನೀವು ಬೆಳೆಸಿದ ಹುಡುಗ. ನನ್ನ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವಂತೆ' ಈ ಸಂದರ್ಭಲ್ಲಿ ಗೋಪಾಲಯ್ಯ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಜೆಡಿಎಸ್ ನಾಯಕರೊಬ್ಬರು ನಾನು ಶಾಸಕನಾಗಲು ಸಿದ್ದರಾಮಯ್ಯ ಅವರ ಆಶೀರ್ವಾದವೇ ಕಾರಣ ಎಂದು ಹೇಳಿರುವುದು ಅಚ್ಚರಿಗೆ ಕಾರಣವಾಗಿತ್ತು.
ಸಿಎಂ ಪ್ರತಿಕ್ರಿಯೆ : ಶಾಸಕ ಗೋಪಾಲಯ್ಯ ಹೇಳಿಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, 'ಗೋಪಾಲಯ್ಯ ಶಾಸಕನಾಗಲು ನನ್ನ ಸಹಾಯ ಇರಲಿಲ್ಲ, ಬಿಬಿಎಂಪಿ ಕಾರ್ಪೊರೇಟರ್ ಆಗಲು ನನ್ನ ಸಹಾಯವಿತ್ತು. ಏಕೆಂದರೆ ಆಗ ನಾನು ಜೆಡಿಎಸ್ ಪಕ್ಷದಲ್ಲಿದ್ದೆ' ಎಂದು ಸ್ಪಷ್ಟನೆ ನೀಡಿದ್ದಾರೆ.
ಅಂದಹಾಗೆ 2013ರ ವಿಧಾನಸಭೆ ಚುನಾವಣೆಯಲ್ಲಿ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನೆ.ಲ.ನರೇಂದ್ರಬಾಬು ಅವರು 50,757 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಗೋಪಾಲಯ್ಯ ಅವರು 66,127 ಮತಗಳನ್ನು ಪಡೆದು ಜಯಗಳಿಸಿದ್ದರು. ಆದ್ದರಿಂದ ಶಾಸಕ ಹೇಳಿಕೆ ಅಚ್ಚರಿ ಮೂಡಿಸಿತ್ತು. [ಮಾಹಿತಿ : http://www.indiavotes.com]
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications