ಯುನೈಟೆಡ್ ಬೆಂಗಳೂರು ದೂರು:ಭೂದಾಖಲೆ ಇಲಾಖೆಯಿಂದ ಮಲ್ಲಸಂದ್ರ ಕೆರೆ ಪರಿಶೀಲನೆ
ಬೆಂಗಳೂರು, ಅಕ್ಟೋಬರ್ 12: ಬೆಂಗಳೂರಿನ ಕೆರೆಗಳ ಒತ್ತುವರಿ ಮತ್ತು ಮಾಲಿನ್ಯದ ವಿರುದ್ಧ ಯುನೈಟಟೆಡ್ ಬೆಂಗಳೂರು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಮೇರೆಗೆ ಭೂದಾಖಲೆ ಇಲಾಖೆಯ ಅಧಿಕಾರಿಗಳು ಮಲ್ಲಸಂದ್ರ ಕೆರೆ ಪರಿಶೀಲನೆ ನಡೆಸಿದರು.
ನ್ಯಾಯಾಲಯದ ಆದೇಶವಿದ್ದರೂ ನಗರದ ಕೆರೆಗಳ ಸಂರಕ್ಷಣೆ ಮಾಡುವಲ್ಲಿ ಅಧಿಕಾರಿಗಳು ನಿರಾಸಕ್ತಿ ತೋರಿಸುತ್ತಿದ್ದಾರೆ ಅವರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಯುನೈಟೆಡ್ ಬೆಂಗಳೂರು ಲೋಕಾಯುಕ್ತ ಸಂಸ್ಥೆಗೆ ಸ್ವಾತಂತ್ರ್ಯ ಹೋರಾಟಗಾರ ಎಚ್ಎಸ್ ದೊರೆಸ್ವಾಮಿ ನೇತೃತ್ವದಲ್ಲಿ ದೂರು ನೀಡಿತ್ತು.

ನಗರದ ಕೆರೆಗಳ ಸ್ಥಿತಿಗತಿ ಬಗ್ಗೆ ಅಧ್ಯಯನ ಮಾಡಿ ವರದಿ ಹಾಗೂ ಕೆರೆಗಳ ರಕ್ಷಣೆ ಕುರಿತು ಹೋರಾಟದ ಮಾಹಿತಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಲಾಯಿತು. ಯುನೈಟೆಡ್ ಬೆಂಗಳೂರು ಸಂಘಟನೆಯು ಸುಮಾರು 27 ಕೆರೆಗಳ ತಪಾಸಣೆ ನಡೆಸಿದ್ದು, ಕೆರೆಗಳ ನಾಶ, ಒತ್ತುವರಿ, ಕಟ್ಟಡ ನಿರ್ಮಾಣ ತ್ಯಾಜ್ಯ, ಕೈಗಾರಿಕಾ ತ್ಯಾಜ್ಯ ಸೇರಿದಂತೆ ಹಲವು ಬಗೆಯ ತ್ಯಾಜ್ಯಗಳನ್ನು ಸುರಿದು ಕೆರೆಗಳನ್ನು ಅವಸಾನದ ಸಂಚಿಗೆ ದೂಡಲಾಗುತ್ತಿದೆ.
Reps frm Revenue Dept, @Namma_Bengaluru & #UnitedBengaluru surveying #Mallasandra Gudde lake to assess extent of encroachment
— United Bengaluru (@unitedbengaluru) October 12, 2018
Given the extent of pollution & encroachment of lakes in #Bengaluru, it's unfortunate tht BWSSB,BDA & KSPCB Officials didn’t participate in the survey! pic.twitter.com/GeMe8fUoPW
ನಗರದ ಕೆರೆಗಳ ರಕ್ಷಣೆಗೆ 1985ರಲ್ಲಿ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ಎನ್ ಲಕ್ಷ್ಮಣ್ ರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿತು. ಸಮಿತಿಯ ಅಧ್ಯಯನ ನಡೆಸಿ ವರದಿ ನೀಡಿದೆ. 2011ರಲ್ಲಿ ನ್ಯಾ. ಎನ್ಕೆ ಪಾಟೀಲ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಯಿತು. ಅಲ್ಲದೇ, ನ್ಯಾಯಾಲಯವು ಸಹ ವಿಚಾರಣೆ ನಡೆಸಿ ಕೆರೆಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದೆ. ಆದರೆ ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ.
ಕೆರೆಯ ಸಮೀಪ 2015ರಲ್ಲಿ ಒತ್ತುವರಿಯಾಗಿದೆ. 2015ರಿಂದ 18ರವರೆಗೆ ರಸ್ತೆ ನಿರ್ಮಾಣ ಮಾಡಲು, ಲೇಔಟ್ ಮಾಡಲು ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಬಿಡಿಎ, ಜಲಮಂಡಳಿ ಯಾವುದೇ ಇಲಾಖೆಗಳು ಕೆರೆಗಳನ್ನು ಸಂರಕ್ಷಣೆ ಮಾಡುವ ಕುರಿತು ಆಲೋಚಿಸುತ್ತಿಲ್ಲ. ಕೆರೆಗಳನ್ನು ಉಳಿಸಲು ಲೋಕಾಯುಕ್ತರು ನೀಡಿದ್ದ ಆದೇಶಕ್ಕೂ ಕೂಡ ಬೆಲೆ ಇಲ್ಲದಂತಾಗಿದೆ.

ಅಕ್ಟೋಬರ್ 16ರಂದು ಮತ್ತೊಂದು ಕೆರೆಯ ಸಮೀಕ್ಷೆ ನಡೆಯಲಿದೆ. ಆ ಸಂದರ್ಭದಲ್ಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಸಹಕಾರ ನೀಡುತ್ತಾರಾ ಎಂದು ಕಾದು ನೋಡಬೇಕಿದೆ ಎಂದು ಯುನೈಟೆಡ್ ಬೆಂಗಳೂರು ಕನ್ವೀನರ್ ಸುರೇಶ್ ಎನ್.ಆರ್. ತಿಳಿಸಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications