Get Updates
Get notified of breaking news, exclusive insights, and must-see stories!

ಅಧಿಕಾರಕ್ಕೆ ಬಂದರೆ ಮಹಾದಾಯಿ ಯೋಜನೆ ಪೂರ್ಣಗೊಳಿಸುವ ಸಂಕಲ್ಪ

ಬೆಂಗಳೂರು: ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಸಾಕಷ್ಟು ರೈತಪರ ಯೋಜನೆಗಳನ್ನ ಘೋಷಿಸಿದ್ದು, ಈ ಪೈಕಿ ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಂಕಲ್ಪ ಮಾಡಿದಂತಿದೆ. ಅದರಲ್ಲೂ ಮಹಾದಾಯಿ, ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ಬಗ್ಗೆ ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಆಶ್ವಾಸನೆ ನೀಡಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಮಹಾದಾಯಿ ಯೋಜನೆಯಿಂದ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಸಾಕಷ್ಟು ಪ್ರಯೋಜನ ಆಗಲಿದೆ. ಸ್ಥಳೀಯರಿಗೆ ಕುಡಿಯುವ ನೀರು ಒದಗಿಸಲು ಯೋಜನೆ ಅತ್ಯಗತ್ಯವಾಗಿದೆ. ಇದೇ ವಿಚಾರ ಮುಂದಿಟ್ಟುಕೊಂಡು ಜೆಡಿಎಸ್ ಪ್ರಣಾಳಿಕೆಯಲ್ಲಿ ಮಹಾದಾಯಿ ಯೋಜನೆ ಬಗ್ಗೆ ಭರವಸೆ ನೀಡಲಾಗಿದೆ. ಹಾಗಾದರೆ ಮಹಾದಾಯಿ ಯೋಜನೆ ವಿಚಾರವಾಗಿ ಪ್ರಣಾಳಿಕೆಯಲ್ಲಿ ಜೆಡಿಎಸ್ ನೀಡಿರುವ ಭರವಸೆ ಏನು? ಬನ್ನಿ ತಿಳಿಯೋಣ.

JDS assured about to clear water problem in Hubli-Dharwad with Mahadayi project

20 ಲಕ್ಷ ಜನತೆಗೆ ಕುಡಿಯುವ ನೀರು

ಮಹಾದಾಯಿ ಯೋಜನೆ ಬಗ್ಗೆ ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಹೀಗೆ ಪ್ರಸ್ತಾಪಿಸಿದೆ, ಈ ಯೋಜನೆ ಅಡಿ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ವಾಸಿಸುವ 20 ಲಕ್ಷ ಜನತೆಗೆ ಕುಡಿವ ನೀರಿಗಾಗಿ ಮಹಾದಾಯಿ ನದಿ ಪಾತ್ರದಿಂದ ಮಲಪ್ರಭಾ ನದಿಯ ಉಪನದಿ ಪಾತ್ರಕ್ಕೆ ತಿರುಗಿಸುವ ಯೋಜನೆ. ಮಹಾದಾಯಿ ಜಲವಿವಾದ ನ್ಯಾಯಮಂಡಳಿ ರಾಜ್ಯಕ್ಕೆ 13.42 TMC ನೀರನ್ನು ಹಂಚಿಕೆ ಮಾಡಿದ್ದು, ಅದರಂತೆ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಮಹಾದಾಯಿ ಯೋಜನೆಯ ವಿಸ್ತೃತ ವರದಿಗೆ ಕೇಂದ್ರ ಜಲಶಕ್ತಿ ಮತ್ತು ಪರಿಸರ ಮಂತ್ರಾಲಯಗಳಿಂದ ಅಗತ್ಯವಿರುವ ಅನುಮತಿ ಬಾಕಿ ಇವೆ. ಯೋಜನೆಗೆ ಅಗತ್ಯವಿರುವ ಅನುಮತಿ ಪಡೆದು, ಅನುದಾನ ನೀಡಿ ತ್ವರಿತವಾಗಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂಬ ಭರವಸೆಯನ್ನ ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದೆ. ಈ ಮೂಲಕ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕುಡಿವ ನೀರಿನ ಸಮಸ್ಯೆ ಬಗೆಹರಿಸುವ ಆಶ್ವಾಸನೆ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗದ ಕೃಷ್ಣಾ ಮೇಲ್ದಂಡೆ ಯೋಜನೆ ಜೊತೆಗೆ ಮಹಾದಾಯಿ ಯೋಜನೆಯ ಬಗ್ಗೆಯೂ ಜೆಡಿಎಸ್ ಪ್ರಣಾಳಿಕೆಯಲ್ಲಿ ಪಸ್ತಾಪ ಮಾಡಲಾಗಿದೆ.

ವಿಜಯಪುರ, ಬಾಗಲಕೋಟೆ, ಕಲಬುರಗಿಗೆ ಬಂಪರ್!

ಕೃಷ್ಣಾ ಜಲವಿವಾದ ನ್ಯಾಯಮಂಡಳಿಯಿಂದ ಕೃಷ್ಣಾ ಮೇಲ್ದಂಡೆ ಯೋಜನೆಗೆ 303 TMC ಹಂಚಿಕೆಯಾಗಿದೆ. ಇದರಲ್ಲಿ ಸ್ಕೀಮ್ -A ಅಡಿಯಲ್ಲಿ 173 TMC ಮತ್ತು ಸ್ಕೀಮ್ -B ಅಡಿ 130 TMC ನೀರು ಹಂಚಿಕೆ ಮಾಡಲಾಗಿದೆ. ಒಟ್ಟು 303 TMC ನೀರು ರಾಜ್ಯಕ್ಕೆ ಸಿಕ್ಕಿದೆ. ಹೀಗೆ ಸ್ಕೀಮ್-A ಅಡಿ ಹಂಚಿಕೆಯಾಗಿರುವ 173 TMC ನೀರನ್ನು ಬಳಸಿಕೊಂಡು ಬರಪೀಡಿತ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಟ್ಟು 16 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಆಶ್ವಾಸನೆ ನೀಡಿದೆ ಜೆಡಿಎಸ್. ಈ ಯೋಜನೆಗೆ ಇಲ್ಲಿಯವರೆಗೆ ₹30,000 ಕೋಟಿ ವೆಚ್ಚಮಾಡಲಾಗಿದೆ ಎಂಬ ಮಾಹಿತಿ ನೀಡಲಾಗಿದೆ.

JDS assured about to clear water problem in Hubli-Dharwad with Mahadayi project

ಗ್ರಾಮಗಳ ರಕ್ಷಣೆಗೆ ಕ್ರಮದ ಭರವಸೆ

ಇನ್ನು ಸ್ಕೀಮ್-B ಅಡಿಯಲ್ಲಿ ರಾಜ್ಯಕ್ಕೆ ಸಿಕ್ಕಿರುವ 130 TMC ನೀರನ್ನು ಬಳಸಿಕೊಂಡು ಒಟ್ಟಾರೆ 14 ಲಕ್ಷ ಎಕರೆಗೆ ನೀರಾವರಿ ಕಲ್ಪಿಸುವ ಉದ್ದೇಶವನ್ನು ಜೆಡಿಎಸ್ ತಿಳಿಸಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅಡಿಯಲ್ಲಿ 20 ಗ್ರಾಮಗಳು ಮುಳುಗಡೆ ಆಗುತ್ತಿದ್ದು, ಈ ಗ್ರಾಮಗಳ ಸ್ಥಳಾಂತರ ಮತ್ತು ಗ್ರಾಮಸ್ಥರಿಗೆ ಪುನರ್ವಸತಿ ಕೇಂದ್ರಗಳ ನಿರ್ಮಾಣಕ್ಕೆ ಆದ್ಯತೆ ನೀಡುವ ಆಶ್ವಾಸನೆ ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಒಟ್ಟಾರೆ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇರುವಾಗ ಜೆಡಿಎಸ್ ಪ್ರಣಾಳಿಕೆ ರಿಲೀಸ್ ಮಾಡಿದೆ. ಈ ಮೂಲಕ JDS ಅಧಿಕಾರಕ್ಕೆ ಬಂದರೆ ರೈತಪರ ಯೋಜನೆಗಳ ಜೊತೆಗೆ ನಗರಗಳ ಅಭಿವೃದ್ಧಿಗೂ ಒತ್ತು ನೀಡುತ್ತದೆ ಎಂಬ ಆಶ್ವಾಸನೆ ನೀಡಿದೆ. ಆದರೆ ಈ ಆಶ್ವಾಸನೆಗಳು ಮತದಾರ ಪ್ರಭುವಿನ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬುದನ್ನ ಕಾದು ನೋಡಬೇಕಿದೆ. ಮೇ 10ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಕೂಡ ಪ್ರಕಟವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+