50 ಕೋಟಿ ರೂಪಾಯಿಗಳಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಮಾರಾಟ?

ಬೆಂಗಳೂರು, ಅ. 19: ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ತಮ್ಮನ್ನು 50 ರಿಂದ 60 ಕೋಟಿ ರೂಪಾಯಿಗಳಿಗೆ ತಮ್ಮನ್ನು ತಾವು ಮಾರಿಕೊಂಡಿದ್ದಾರೆ. ಅವರಿಗೆ ಜನರ ಬಳಿ ಮತ ಕೇಳುವ ನೈತಿಕತೆಯೇ ಇಲ್ಲ ಎಂದು ವಿರುದ್ಧ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿ. ಕೃಷ್ಣಮೂರ್ತಿ ವಾಗ್ದಾಳಿ ನಡೆಸಿದ್ದಾರೆ.

ಯಶವಂತಪುರ ವಾರ್ಡ್‌ನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಮುನಿರತ್ನ ಬಿಜೆಪಿಗೆ ಹೋಗಿದ್ದಾರೆ. ಅವರಿಗೆ ಮತ್ತೆ ಜನರ ಬಳಿ ಹೋಗಿ ಮತ ಕೇಳಲು ನೈತಿಕತೆ ಇಲ್ಲ.

ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಕಾರ್ಯಕರ್ತರನ್ನು ಸೆಳೆಯಲು ದೊಡ್ಡ ಪ್ರಯತ್ನ ನಡೆಸುತ್ತಿದ್ದಾರೆ. ನಾವು ಯಾವುದೇ ಕಾರಣಕ್ಕೂ ಆಮಿಷಕ್ಕೆ ಒಳಗಾಗದೇ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.

Jds Candidate Krhishnamurthy Barrage That Munirath Has Sold Himself Fro Rs 50 Crore

Recommended Video

      ಹುಷಾರು!! ಇನ್ನು 3 ದಿನ ಮಳೆರಾಯನ ತಡಿಯೋಕ್ ಆಗಲ್ಲ | Oneindia Kannada

      ಮತ್ತಿಕೆರೆಯ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ, ಯಶವಂತಪುರ, ಬಿಇಎಂಎಲ್‌ ಬಡಾವಣೆ, ಐಟಿಐ ಲೇಔಟ್‌, ಜ್ಞಾನಭಾರತಿ, ಶ್ರೀನಿವಾಸನಗರ ವಾರ್ಡ್‌ನಲ್ಲಿ ಮನೆ ಮನೆ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಆರ್. ಪ್ರಕಾಶ್ ಸೇರಿದಂತೆ ಮುಖಂಡರು, ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+