ಬಿನ್ನಿಪೇಟೆ ಉಪಚುನಾವಣೆಯಲ್ಲಿ ಜೆಡಿಎಸ್ ಗೆಲುವು: ಅಮ್ಮನ ಕ್ಷೇತ್ರದಲ್ಲಿ ಗೆದ್ದ ಮಗಳು
ಬೆಂಗಳೂರು, ಜೂನ್ 20: ಬೆಂಗಳೂರು ಮಹಾನಗರ ಪಾಲಿಕೆಯ ಬಿನ್ನಿಪೇಟೆ ವಾರ್ಡ್ಗೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಇದರಿಂದ ಕಾಂಗ್ರೆಸ್ನ ನೆಲೆಯಾಗಿದ್ದ ಬಿನ್ನಿಪೇಟೆ, ಈಗ ಜೆಡಿಎಸ್ನತ್ತ ವಾಲಿದೆ.
ಇದರಿಂದ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ತೀವ್ರ ಮುಖಭಂಗವಾಗಿದೆ. ದಿನೇಶ್ ಗುಂಡೂರಾವ್ ಅವರ ಶಿಷ್ಯರಾಗಿದ್ದ ಮಾಜಿ ಕಾರ್ಪೊರೇಟರ್ ಬಿಟಿಎಸ್ ನಾಗರಾಜ್, ಅವರಿಗೆ ಸವಾಲೆಸೆದು ಜೆಡಿಎಸ್ನಿಂದ ಮಗಳನ್ನು ಕಣಕ್ಕಿಳಿಸಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಐಶ್ವರ್ಯಾ ನಾಗರಾಜ್ ಅವರು 7,188 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ವಿದ್ಯಾ ಅವರನ್ನು 1939 ಮತಗಳಿಂದ ಸೋಲಿಸಿದರು. ವಿದ್ಯಾ 5249 ಮತಗಳನ್ನು ಪಡೆದರೆ, ಅವರು ಬಿಜೆಪಿ ಅಭ್ಯರ್ಥಿ ಚಾಮುಂಡೇಶ್ವರಿ ಅವರು 2455 ಮತಗಳನ್ನು ಗಳಿಸಿದರು.

ಜೂನ್ 18ರಂದು ನಡೆದ ಉಪ ಚುನಾವಣೆಯಲ್ಲಿ ಒಟ್ಟು 15,051 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ 159 ಮತಗಳು ನೋಟಾ ಪಾಲಾಗಿವೆ.
ಕಾಂಗ್ರೆಸ್ನ ಕಾರ್ಪೊರೇಟರ್ ಮಹದೇವಮ್ಮ ನಾಗರಾಜ್ ಅವರ ನಿಧನದಿಂದ ಬಿನ್ನಿಪೇಟೆ ವಾರ್ಡ್ ಸಂಖ್ಯೆ 121ರ ಸದಸ್ಯತ್ವ ತೆರವಾಗಿತ್ತು. ಈ ಸ್ಥಾನಕ್ಕೆ ಅವರ ಮಗಳು ಐಶ್ವರ್ಯಾ ಕಾಂಗ್ರೆಸ್ನಿಂದ ಸ್ಪರ್ಧಿಸುವ ನಿರೀಕ್ಷೆಯಿದ್ದು. ಆದರೆ, ಹಠಾತ್ ಬೆಳವಣಿಗೆಯಲ್ಲಿ ಕಾಂಗ್ರೆಸ್ನಲ್ಲಿದ್ದ ಬಿಟಿಎಸ್ ನಾಗರಾಜ್ ಅವರು ಇದ್ದಕ್ಕಿದ್ದಂತೆ ಜೆಡಿಎಸ್ ಸೇರ್ಪಡೆಗೊಂಡಿದ್ದರು.
ಇದರಿಂದ ನಾಗರಾಜ್ ಅವರ ಮಗಳು ಐಶ್ವರ್ಯಾ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಮತದಾನದ ದಿನವೇ ಕೆ.ಪಿ. ಅಗ್ರಹಾರದ ಶಾಲೆಯೊಂದ ಬಳಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ಸಂಭವಿಸಿತ್ತು. ಈ ವೇಳೆ ಸ್ಥಳಕ್ಕೆ ದಿನೇಶ್ ಗುಂಡೂರಾವ್ ಮತ್ತು ಬಿಟಿಎಸ್ ನಾರಾಜ್ ನಡುವೆ ಜಟಾಪಟಿ ನಡೆದಿತ್ತು. ದಿನೇಶ್ ಗುಂಡೂರಾವ್ ಅವರು ನಾಗರಾಜ್ ಒಬ್ಬ ಗೂಂಡಾ ಎಂದು ಕರೆದಿದ್ದರು.
ಇದಕ್ಕೆ ಪ್ರತಿ ಹೇಳಿಕೆ ನೀಡಿದ್ದ ನಾಗರಾಜ್, ದಿನೇಶ್ ಗುಂಡೂರಾವ್ ಅವರು ಮಾಡಿದ ವಿಶ್ವಾಸ ದ್ರೋಹಕ್ಕೆ ಪಕ್ಷದಿಂದ ಹೊರಕ್ಕೆ ಬಂದಿದ್ದೇನೆ. ಜನಾಶೀರ್ವಾದದ ಮೂಲಕ ನನ್ನ ತಾಕತ್ತನ್ನು ಸಾಬೀತುಮಾಡುತ್ತೇನೆ ಎಂದು ಸವಾಲು ಹಾಕಿದ್ದರು.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications