ಹಣದ ಅಹಂಕಾರ ಮನುಷ್ಯನನ್ನು ಮುಗಿಸುತ್ತೆ:ಎಚ್ಡಿಡಿ
ಬೆಂಗಳೂರು, ಜೂನ್ 12: 'ಅಧಿಕಾರದ ದುರ್ಬಳಕೆ ಹಾಗೂ ಹಣದ ಅಹಂಕಾರ ಮನುಷ್ಯನನ್ನು ಮುಗಿಸುತ್ತೆ' ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ದೇವೇಗೌಡ ಅವರು ಮಾತನಾಡಿದರು.
ಪಕ್ಷ ನೀಡಿದ್ದ ವಿಪ್ ಉಲ್ಲಂಘಟನೆ ಮಾಡಿ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಹಾಕಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಎಂಟು ಶಾಸಕರನ್ನು ತತ್ ಕ್ಷಣದಿಂದ ಜಾರಿಗೆ ಬರುವಂತೆ ಜೆಡಿಎಸ್ ಅಮಾನತು ಮಾಡಿದೆ ಎಂದು ಜೆಡಿಎಸ್ ಮುಖಂಡ ವೈಎಸ್ ವಿ ದತ್ತಾ ಅವರು ನಿರ್ಣಯ ಓದಿದರು.
ಎಚ್ಡಿಕೆ ಪ್ರತಿಕ್ರಿಯೆ: 'ಮೂರು ವರ್ಷಗಳಿಂದ ಇವರನ್ನು ಸಹಿಸಿಕೊಂಡಿದ್ದೇವೆ. ಈ ಬಾರಿ ಕಠಿಣ ನಿರ್ಧಾರ ಕೈಗೊಳ್ಳಲಾಗುತ್ತದೆ' ಎಂದು ಹೇಳಿ ಪುತ್ರ ನಿಖಿಲ್ ಅವರ ಜಾಗ್ವಾರ್ ಸಿನಿಮಾ ಶೂಟಿಂಗ್ ಗಾಗಿ ಬಲ್ಗೇರಿಯಾಕ್ಕೆ ಎಚ್ ಡಿ ಕುಮಾರಸ್ವಾಮಿ ತೆರಳಿದ್ದಾರೆ.[ಜೆಡಿಎಸ್ ನ 8 ಭಿನ್ನಮತೀಯ ಶಾಸಕರಿಗೆ ಅಮಾನತು ಶಿಕ್ಷೆ]

ರಾಜ್ಯಸಭೆ ಚುನಾವಣೆಯಲ್ಲಿ ಫಾರೂಕ್ ಗೆ ವೋಟ್ ಹಾಕಿದ ಯಾವೊಬ್ಬ ಜೆಡಿಎಸ್ ಶಾಸಕರು ಒಂದು ಕಾಸನ್ನು ತಗೆದುಕೊಂಡಿಲ್ಲ. ಸೋತಿದ್ರೂ ಫಾರೂಕ್ ಪಕ್ಷದಲ್ಲೇ ಇರ್ತೇನೆ ಅಂದಿದ್ದಾರೆ. ಜೆಡಿಎಸ್ ಜೊತೆ ಗುರುತಿಸಿಕೊಂಡ ಫಾರೂಕ್ ವ್ಯಾಪಾರವನ್ನು ಧ್ವಂಸಗೊಳಿಸುತ್ತೇವೆ ಅಂತಾ ಬೆದರಿಕೆಯನ್ನು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಕಿದ್ದಾರೆ. ಹಣದ ಅಹಂಕಾರ ಅವರಿಗೆ ಮುಳ್ಳಾಗಲಿದೆ ಎಂದರು.[ರಾಜ್ಯಸಭಾ ಚುನಾವಣೆ: ದೇಶಾದ್ಯಂತ ಮೇಲುಗೈ ಸಾಧಿಸಿದ ಬಿಜೆಪಿ]
ಫರೂಕ್ ಬಗ್ಗೆ ಪ್ರಶಂಸೆ: ಫರೂಕ್ ಸೋತ ನಂತರವೂ ನಮ್ಮ ಪಕ್ಷ ಬೆಳೆಸಲು ಸಹಾಯ ಮಾಡುತ್ತಿದ್ದಾರೆ. ಅವರ ನಂಬಿಕೆ ನನಗೆ ಇಷ್ಟವಾದ್ರು. ಫರೂಕ್ ಅವರಿಂದ ನಾನು ಚುಕ್ಕಾಸು ಪಡೆದಿಲ್ಲ. ನಮ್ಮ ಶಾಸಕರಿಗೂ ಹಣ ಕೊಟ್ಟಿಲ್ಲ. ಫರೂಕ್ ಇಂದು ನಮ್ಮ ಪಕ್ಷದಲ್ಲಿನ ಅಲ್ಪಸಂಖ್ಯಾತ ಸಮುದಾಯದ ಪ್ರತೀಕ. ಫರೂಕ್ ರನ್ನು ಅಭ್ಯರ್ಥಿಯನ್ನಾಗಿ ಜೆಡಿಎಸ್ ಹಣ ಮಾಡಲು ಹೊರಟಿರಲಿಲ್ಲ ಎಂದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications