ಹಣದ ಅಹಂಕಾರ ಮನುಷ್ಯನನ್ನು ಮುಗಿಸುತ್ತೆ:ಎಚ್ಡಿಡಿ
ಬೆಂಗಳೂರು, ಜೂನ್ 12: 'ಅಧಿಕಾರದ ದುರ್ಬಳಕೆ ಹಾಗೂ ಹಣದ ಅಹಂಕಾರ ಮನುಷ್ಯನನ್ನು ಮುಗಿಸುತ್ತೆ' ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ದೇವೇಗೌಡ ಅವರು ಮಾತನಾಡಿದರು.
ಪಕ್ಷ ನೀಡಿದ್ದ ವಿಪ್ ಉಲ್ಲಂಘಟನೆ ಮಾಡಿ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಹಾಕಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಎಂಟು ಶಾಸಕರನ್ನು ತತ್ ಕ್ಷಣದಿಂದ ಜಾರಿಗೆ ಬರುವಂತೆ ಜೆಡಿಎಸ್ ಅಮಾನತು ಮಾಡಿದೆ ಎಂದು ಜೆಡಿಎಸ್ ಮುಖಂಡ ವೈಎಸ್ ವಿ ದತ್ತಾ ಅವರು ನಿರ್ಣಯ ಓದಿದರು.
ಎಚ್ಡಿಕೆ ಪ್ರತಿಕ್ರಿಯೆ: 'ಮೂರು ವರ್ಷಗಳಿಂದ ಇವರನ್ನು ಸಹಿಸಿಕೊಂಡಿದ್ದೇವೆ. ಈ ಬಾರಿ ಕಠಿಣ ನಿರ್ಧಾರ ಕೈಗೊಳ್ಳಲಾಗುತ್ತದೆ' ಎಂದು ಹೇಳಿ ಪುತ್ರ ನಿಖಿಲ್ ಅವರ ಜಾಗ್ವಾರ್ ಸಿನಿಮಾ ಶೂಟಿಂಗ್ ಗಾಗಿ ಬಲ್ಗೇರಿಯಾಕ್ಕೆ ಎಚ್ ಡಿ ಕುಮಾರಸ್ವಾಮಿ ತೆರಳಿದ್ದಾರೆ.[ಜೆಡಿಎಸ್ ನ 8 ಭಿನ್ನಮತೀಯ ಶಾಸಕರಿಗೆ ಅಮಾನತು ಶಿಕ್ಷೆ]

ರಾಜ್ಯಸಭೆ ಚುನಾವಣೆಯಲ್ಲಿ ಫಾರೂಕ್ ಗೆ ವೋಟ್ ಹಾಕಿದ ಯಾವೊಬ್ಬ ಜೆಡಿಎಸ್ ಶಾಸಕರು ಒಂದು ಕಾಸನ್ನು ತಗೆದುಕೊಂಡಿಲ್ಲ. ಸೋತಿದ್ರೂ ಫಾರೂಕ್ ಪಕ್ಷದಲ್ಲೇ ಇರ್ತೇನೆ ಅಂದಿದ್ದಾರೆ. ಜೆಡಿಎಸ್ ಜೊತೆ ಗುರುತಿಸಿಕೊಂಡ ಫಾರೂಕ್ ವ್ಯಾಪಾರವನ್ನು ಧ್ವಂಸಗೊಳಿಸುತ್ತೇವೆ ಅಂತಾ ಬೆದರಿಕೆಯನ್ನು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಕಿದ್ದಾರೆ. ಹಣದ ಅಹಂಕಾರ ಅವರಿಗೆ ಮುಳ್ಳಾಗಲಿದೆ ಎಂದರು.[ರಾಜ್ಯಸಭಾ ಚುನಾವಣೆ: ದೇಶಾದ್ಯಂತ ಮೇಲುಗೈ ಸಾಧಿಸಿದ ಬಿಜೆಪಿ]
ಫರೂಕ್ ಬಗ್ಗೆ ಪ್ರಶಂಸೆ: ಫರೂಕ್ ಸೋತ ನಂತರವೂ ನಮ್ಮ ಪಕ್ಷ ಬೆಳೆಸಲು ಸಹಾಯ ಮಾಡುತ್ತಿದ್ದಾರೆ. ಅವರ ನಂಬಿಕೆ ನನಗೆ ಇಷ್ಟವಾದ್ರು. ಫರೂಕ್ ಅವರಿಂದ ನಾನು ಚುಕ್ಕಾಸು ಪಡೆದಿಲ್ಲ. ನಮ್ಮ ಶಾಸಕರಿಗೂ ಹಣ ಕೊಟ್ಟಿಲ್ಲ. ಫರೂಕ್ ಇಂದು ನಮ್ಮ ಪಕ್ಷದಲ್ಲಿನ ಅಲ್ಪಸಂಖ್ಯಾತ ಸಮುದಾಯದ ಪ್ರತೀಕ. ಫರೂಕ್ ರನ್ನು ಅಭ್ಯರ್ಥಿಯನ್ನಾಗಿ ಜೆಡಿಎಸ್ ಹಣ ಮಾಡಲು ಹೊರಟಿರಲಿಲ್ಲ ಎಂದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications