ಬಿಬಿಎಂಪಿ ಮೈತ್ರಿ : ಸೆ.3ಕ್ಕೆ ಜೆಡಿಎಸ್ ಮಹತ್ವದ ಸಭೆ
ಬೆಂಗಳೂರು, ಆಗಸ್ಟ್ 30 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುಂದುವರೆಯುವ ಬಗ್ಗೆ ಸ್ಪಷ್ಟ ಚಿತ್ರಣ ಲಭ್ಯವಾಗಿಲ್ಲ. ಸೆಪ್ಟೆಂಬರ್ 3ರಂದು ಜೆಡಿಎಸ್ ಬಿಬಿಎಂಪಿ ಸದಸ್ಯರ ಸಭೆ ಕರೆದಿದ್ದು, ಅಂದು ಮೈತ್ರಿ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಮಂಗಳವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪದ್ಮನಾಭನಗರದಲ್ಲಿನ ನಿವಾಸದಲ್ಲಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಬಿಬಿಎಂಪಿಯಲ್ಲಿನ ಮೈತ್ರಿ ಬಗ್ಗೆ ಮಾತುಕತೆ ನಡೆಸಿದರು. ಈ ಮಾತುತೆ ವೇಳೆಯಲ್ಲಿ ಸೆ.3ರಂದು ಪಕ್ಷದ ಬಿಬಿಎಂಪಿ ಸದಸ್ಯರ ಸಭೆ ಕರೆಯಲು ನಿರ್ಧರಿಸಲಾಯಿತು.[ಬಿಬಿಎಂಪಿಯಲ್ಲಿ ಯಾರಿಗೆ ಬೆಂಬಲ?, ಜೆಡಿಎಸ್ ನಡೆ ನಿಗೂಢ]

ಸದ್ಯ, ಮೇಯರ್ ಆಗಿರುವ ಬಿ.ಎನ್.ಮಂಜುನಾಥ್ ರೆಡ್ಡಿ (ಕಾಂಗ್ರೆಸ್) ಮತ್ತು ಉಪ ಮೇಯರ್ ಎಸ್.ಪಿ.ಹೇಮಲತಾ (ಜೆಡಿಎಸ್) ಅವರ ಅಧಿಕಾರಾವಧಿ ಸೆಪ್ಟೆಂಬರ್ 14ರಂದು ಕೊನೆಗೊಳ್ಳಲಿದೆ. ಸೆ.19ರಂದು ನೂತನ ಮೇಯರ್ ಆಯ್ಕೆಗೆ ಚುನಾವಣೆ ನಿಗದಿಯಾಗಿದೆ.[ಮೇಯರ್ ಪಟ್ಟಕ್ಕೆ ಬೇಡಿಕೆ ಇಟ್ಟ ಜೆಡಿಎಸ್!]
ಈ ಬಾರಿಯ ಚುನಾವಣೆಯಲ್ಲಿ ಮೇಯರ್ ಪಟ್ಟ ಹಿಂದುಳಿದ ವರ್ಗ (ಬಿ) ಮಹಿಳೆ ಮತ್ತು ಉಪ ಮೇಯರ್ ಪಟ್ಟ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಸೆ.3ರಂದು ನಡೆಯುವ ಸಭೆಯಲ್ಲಿ ಮೈತ್ರಿ ಮುಂದುವರೆಸಲು ಒಪ್ಪಿಗೆ ಸಿಕ್ಕರೆ ಉಪ ಮೇಯರ್ ಯಾರಾಗಬೇಕು? ಎಂದೂ ತೀರ್ಮಾನ ಕೈಗೊಳ್ಳಲಾಗುತ್ತದೆ.
ಮೈತ್ರಿಗೆ ಭಂಗವಿಲ್ಲ : 'ಬಿಬಿಎಂಪಿಯಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಭಂಗ ಉಂಟಾಗಿಲ್ಲ. ಮೈತ್ರಿ ಮುಂದುವರೆಯುವ ವಿಶ್ವಾಸವಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರಿನಲ್ಲಿ ಹೇಳಿದರು.
ಅಂದಹಾಗೆ 2015ರಲ್ಲಿ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ 100, ಕಾಂಗ್ರೆಸ್ 76, ಜೆಡಿಎಸ್ 14 ಸ್ಥಾನಗಳಲ್ಲಿ ಜಯಗಳಿಸಿದೆ. 8 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಯಿಂದಾಗಿ ಬಿಜೆಪಿಗೆ ಮೇಯರ್ ಸ್ಥಾನ ಕೈತಪ್ಪಿತು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?










Click it and Unblock the Notifications